ಮೂಡುಬಿದಿರೆ : ಮೂಡುಬಿದಿರೆಯ ಶಿರ್ತಾಡಿಯ ಮನೆಯೊಂದರ ತೋಟದಲ್ಲಿ ಮೇಯಲು ಕಟ್ಟಿಹಾಕಿದ್ದ ದನವನ್ನು ಕದ್ದೊಯ್ದು ಮಾರಾಟಕ್ಕೆ ಯತ್ನಿಸಿದ ಆರೋಪದಲ್ಲಿ ಮೂವರನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ವಾಲ್ಪಾಡಿ ಗ್ರಾಮದ ಪವನ್ ಕುಮಾರ್, ಪುರಸಭೆ ವ್ಯಾಪ್ತಿಯ ಮಾರೂರಿನ ಸತೀಶ್ ಹಾಗೂ ಜಯಾನಂದ ಎಂದು ಗುರುತಿಸಲಾಗಿದ್ದು, ಮತ್ತೋರ್ವ ಆರೋಪಿ ಗಿರೀಶ್ ಎಂಬಾತ ತಲೆಮರೆಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ವಾಲ್ಪಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಳಿಯೂರಿನ ಗಣೇಶ್ ಎಂಬವರ ಮನೆಯ ತೋಟದಲ್ಲಿ ಮೂರು ದಿನಗಳ ಹಿಂದೆ ಮೇಯಲು ಕಟ್ಟಿದ್ದ ದನ ಕಳವಾಗಿತ್ತು. ಶನಿವಾರ ಅದೇ ದನವನ್ನು ಈ ನಾಲ್ವರು ಆರೋಪಿಗಳು ಮಾರಾಟ ಮಾಡುವ ಉದ್ದೇಶದಿಂದ ಟೆಂಪೊದಲ್ಲಿ ಕೊಂಡೊಯ್ಯುತ್ತಿರುವುದನ್ನು ಸ್ಥಳೀಯುರು ಗಮನಿಸಿದ್ದು, ಶಿರ್ತಾಡಿ ಸೇತುವೆಯ ಬಳಿ ಟೆಂಪೋವನ್ನು ತಡೆದು ನಿಲ್ಲಿಸಿದ ಸಾರ್ವಜನಿಕರು ವಿಚಾರಿಸಿದಾಗ ಆರೋಪಿಗಳು ಸುಳ್ಳು ಮಾಹಿತಿ ನೀಡಿದ್ದಾರೆ.
ಇನ್ನು ಈ ವೇಳೆ ಅಳಿಯೂರಿನ ಗಣೇಶ್ ಸ್ಥಳಕ್ಕಾಗಮಿಸಿ ಅದು ತಮ್ಮ ಮನೆಯ ಹಸುವೆಂದು ಖಚಿತಪಡಿಸಿದ್ದು, ಬಳಿಕ ಸಾರ್ವಜನಿಕರು ಆರೋಪಿಗಳ ಪೈಕಿ ಮೂವರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.
ಈ ಬಗ್ಗೆ ಮೂಡುಬಿದಿರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…
ಉಡುಪಿ ಜಿಲ್ಲೆಯ ಐದು ಗ್ರಾಮ ಪಂಚಾಯತ್ಗಳು ರಾಷ್ಟ್ರೀಯ ಪ್ರಶಸ್ತಿಗೆ ಆಯ್ಕೆ ಉಡುಪಿ: ಕೇಂದ್ರ ಸರ್ಕಾರದ ವಿವಿಧ ವಿಭಾಗಗಳ ಅಡಿಯಲ್ಲಿ ನೀಡಲಾಗುವ…