ಮೂಡುಬಿದಿರೆ : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಮೃತ್ಯು – vishwanews24
ಮೂಡುಬಿದಿರೆ : ರಸ್ತೆ ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ವಿದ್ಯಾರ್ಥಿ ಮೃತ್ಯು
ಮೂಡುಬಿದಿರೆ : ತಾಲೂಕಿನ ಬನ್ನಡ್ಕದಲ್ಲಿ ಗುರುವಾರ ರಾತ್ರಿ ನಡೆದ ಕಾರು–ಬೈಕ್ ಢಿಕ್ಕಿಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ರೋಟರಿ ಪಿಯುಸಿ ಕಾಲೇಜಿನ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.
ಮೃತರನ್ನು ಮಾರ್ಪಾಡಿ ಗ್ರಾಮದ ಕೋಟೆಬಾಗಿಲಿನ ಸದಾನಂದ ಸುವರ್ಣ–ರಾಜಶ್ರೀ ದಂಪತಿಯ ಪುತ್ರ ಶ್ರವಣ್ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ:
ಪ್ರಧಾನಿಗಳಿಂದ ಇಂದು ʻಸೇವಾ ತೀರ್ಥʼ ಸಂಕೀರ್ಣ ಉದ್ಘಾಟನೆ – vishwanews24
ಕಾಮಗಾರಿ ಹಂತದಲ್ಲಿರುವ ಕಾರ್ಕಳ–ಮೂಡುಬಿದಿರೆ ರಾಷ್ಟ್ರೀಯ ಹೆದ್ದಾರಿಯ ಬನ್ನಡ್ಕ ದೈವಸ್ಥಾನದ ಸಮೀಪ ಈ ದುರ್ಘಟನೆ ಸಂಭವಿಸಿದೆ. ಕಂಟೆಂಟ್ ಕ್ರಿಯೇಟರ್ ಸೂರಜ್ ಅಂಚನ್ ಅವರೊಂದಿಗೆ ಶ್ರವಣ್ ಸಹ ಸವಾರರಾಗಿದ್ದರು ಎನ್ನಲಾಗಿದೆ.
ಕಾರ್ಕಳ ಕಡೆಯಿಂದ ವೇಗವಾಗಿ ಬಂದ ಕಾರು ಬೈಕ್ಗೆ ಢಿಕ್ಕಿ ಹೊಡೆದಿದ್ದು, ಢಿಕ್ಕಿಯ ತೀವ್ರತೆಗೆ ಇಬ್ಬರೂ ಗಂಭೀರವಾಗಿ ಗಾಯಗೊಂಡಿದ್ದರು. ಮೊದಲು ಮೂಡುಬಿದಿರೆಯ ಆಸ್ಪತ್ರೆಗೆ ದಾಖಲಿಸಿ, ನಂತರ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ವರ್ಗಾಯಿಸಲಾಯಿತು. ಆದರೆ ಶ್ರವಣ್ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಇದನ್ನೂ ಓದಿ:
