Featured

ಮೂಡುಬಿದಿರೆ: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಪ್ರಕರಣಕ್ಕೆ ಟ್ವಿಸ್ಟ್ : ಬಾಲಕಿಗೆ ಲೈಂಗಿಕ ಕಿರುಕುಳ- ವೃದ್ಧನ ಬಂಧನ – Vishwanews24

ಮೂಡುಬಿದಿರೆ: ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಪ್ರಕರಣಕ್ಕೆ ಟ್ವಿಸ್ಟ್ : ಬಾಲಕಿಗೆ ಲೈಂಗಿಕ ಕಿರುಕುಳ – ವೃದ್ಧನ ಬಂಧನ

ಮೂಡುಬಿದಿರೆ: ಬುಧವಾರ ಇಲ್ಲಿನ ಖಾಸಗಿ ಕಾಲೇಜಿನ ಪ್ರಥಮ ಪಿಯು ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ಈ ಪ್ರಕರಣಕ್ಕೆ ಸಂಬಂಧಿಸಿ , ವೃದ್ದನೋರ್ವನನ್ನು ಬಂಧಿಸಲಾಗಿದೆ.

ಬಂಧಿತ ಆರೋಪಿಯನ್ನು ಕೋಟೆಬಾಗಿಲಿನ ಶ್ರೀಧರ್ ಪುರಾಣಿಕ್ ಎಂದು ಪೊಲೀಸರು ತಿಳಿಸಿದ್ದಾರೆ.

ಮೂಲತಃ ಬೈಲೂರಿನವಳಾದ ಬಾಲಕಿ ಹೌದಾಲ್ ನಲ್ಲಿರುವ ತನ್ನ ಚಿಕ್ಕಮ್ಮ ಮನೆಯಲ್ಲಿ ವಾಸವಾಗಿದ್ದು, ಪ.ಪೂ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಾಣಿಜ್ಯ ವಿಭಾಗದಲ್ಲಿ ಓದುತ್ತಿದ್ದಳು. ಕಾಲೇಜಿಗೆ ಹೋಗಿ ಬರುತ್ತಿದ್ದ ಬಾಲಕಿಗೆ ಮಂಗಳವಾರ ಕಿವಿ ನೋವು ಕಾಣಿಸಿಕೊಂಡು ಶಿಕ್ಷಕರಿಗೆ ಮಾಹಿತಿ ನೀಡಿದ್ದಾಳೆ. ಕಾಲೇಜಿನವರು ಮನೆಯವರಿಗೆ ವಿಷಯ ತಿಳಿಸಿದಾಗ, ಕೆಲಸದ ಒತ್ತಡದಲ್ಲಿದ್ದ ಅವರು ಪರಿಚಯಸ್ಥ ಶ್ರೀಧರ್ ಪುರಾಣಿಕ್ ಜತೆ ಮನೆಗೆ ಕಳುಹಿಸಿಕೊಡುವಂತೆ ಹೇಳಿದ್ದರೆನ್ನಲಾಗಿದೆ. ಸಂತ್ರಸ್ತೆಯ ಪೋಷಕರು ಪುರಾಣಿಕ್ ಮನೆಯಲ್ಲಿ ಕೂಲಿ ಕೆಲಸ ಮಾಡಿಕೊಂಡಿದ್ದರು.

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ – Vishwanews24

ಕಾರಿನಲ್ಲಿ ಬರುವಾಗ ಶ್ರೀಧರ್ ಪುರಾಣಿಕ್ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ್ದು, ಮನೆ ಹತ್ತಿರ ಬಂದರೂ ಆಕೆಯನ್ನು ಕಾರಿನಿಂದ ಇಳಿಯಲು ಬಿಡಲಿಲ್ಲ ಎಂದು ದೂರಲಾಗಿದೆ. ಇದರಿಂದ ಮನನೊಂದ ಆಕೆ ಬುಧವಾರ ಮನೆಯ ಸಮೀಪದ ಹಾಡಿಯ ಮರವೊಂದಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆನ್ನಲಾಗಿದೆ.

ಈ ಹಿನ್ನಲೆಯಲ್ಲಿ ಆರೋಪಿಯನ್ನು ಬಂಧಿಸಿ,ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಂಗ ಬಂಧನಕ್ಕೆ ವಿಧಿಸಲಾಗಿದೆ. ಈತನ ವಿರುದ್ದ ಪೊಕ್ಸೋ ಕಾಯಿದೆ , ದಲಿತ ದೌರ್ಜನ್ಯ ತಡೆ ಕಾಯ್ದೆ, ಮತ್ತು ದಂಡ ಸಂಹಿತೆಯ ಅಡಿಯಲ್ಲಿ ಪ್ರಕರಣ ದಾಖಲಾಗಿದೆ.

ಬೆಂಗಳೂರಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ – Vishwanews24

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago