ಮೂಡುಬಿದ್ರಿ : ಶಿರ್ತಾಡಿ – ಮೂಡುಬಿದ್ರಿ ರಾಜ್ಯ ಹೆದ್ದಾರಿಯ ಶಿರ್ತಾಡಿ ಸೇತುವೆ ಬಳಿಯಲ್ಲಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಶಿಕ್ಷಕಿಯೋರ್ವರು ದಾರುಣ ರೀತಿಯಲ್ಲಿ ಮೃತಪಟ್ಟ ಘಟನೆ ಶುಕ್ರವಾರ ಸಂಜೆ ವೇಳೆಗೆ ಸಂಭವಿಸಿದೆ.
ಮೂಡುಬಿದ್ರಿ ನಾಗರಕಟ್ಟೆಯ ನಿವಾಸಿಯಾಗಿದ್ದು, ಶಿರ್ತಾಡಿ ಹೋಲಿ ಏಂಜಲ್ಸ್ ಖಾಸಗಿ ಶಾಲೆಯ ಶಿಕ್ಷಕಿಯಾಗಿದ್ದ ಸುಜಯ ಭಂಡಾರಿ (35) ಘಟನೆಯಲ್ಲಿ ಪ್ರಾಣ ಕಳೆದುಕೊಂಡ ದುರ್ದೈವಿ.
ಶುಕ್ರವಾರ ಸಂಜೆ ವೇಳೆಗೆ ತನ್ನ ಕರ್ತವ್ಯ ಮುಗಿಸಿ ಮೂಡಬಿದಿರೆ ನಾಗರಕಟ್ಟೆಯಲ್ಲಿರುವ ಮನೆಗೆ ಆಕ್ವಿವಾದಲ್ಲಿ ಹೋಗುತ್ತಿದ್ದರು.
ಶಿರ್ತಾಡಿ ಸೇತುವೆ ಬಳಿ ಎದುರುಗಡೆಯಿಂದ ಅತೀ ವೇಗವಾಗಿ ಬಂದ ಕಾರು ಏಕಾಏಕಿಯಾಗಿ ಆಕ್ವಿವಾಕ್ಕೆ ಡಿಕ್ಕಿ ಹೊಡೆದಿತ್ತು. ಅಪಘಾತದ ತೀವ್ರತೆಗೆ ದೂರಕ್ಕೆ ತಳ್ಳಲ್ಪಟ್ಟ ಸವಾರೆ,ಶಿಕ್ಷಕಿ ಗಂಭೀರ ಸ್ವರೂಪದಲ್ಲಿ ಗಾಯಗೊಂಡಿದ್ದರು.
ತಲೆಭಾಗಕ್ಕೆ ತೀವ್ರ ಗಾಯಗೊಂಡಿದ್ದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಆಸ್ಪತ್ರೆಗೆ ದಾಖಲಿಸುತ್ತಿದ್ದಂತೆ ಕೊನೆಯುಸಿರೆಳೆದಿದ್ದಾರೆ.
ಮೃತ ಶಿಕ್ಷಕಿಯ ಪತಿ ವಿದೇಶದಲ್ಲಿ ಉದ್ಯೋಗದಲ್ಲಿದ್ದಾರೆ. ಅವರಿಗಿಬ್ಬರು ಅವಳಿಜವಳಿ ಮಕ್ಕಳಿದ್ದು ಮೂಡುಬಿದಿರೆ ಶಾಲೆಯಲ್ಲಿ ಕಲಿಯುತ್ತಿದ್ದಾರೆ.ಮೂಡುಬಿದಿರೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು ಮನೆಯಿಂದ ತೆರಳಿದ್ದ ಯುವಕ ನಾಪತ್ತೆ ಕುಂದಾಪುರ: ಕಾಲೇಜಿಗೆ ಹೋಗಿ ಟಿಸಿ ತರುತ್ತೇನೆ ಎಂದು…
ಆ. 1 ರಂದು ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ ; ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ ಮೈಸೂರು:…
ಮಿಸ್ ಯುನಿವರ್ಸ್ ಇಂಡಿಯಾ 2026 ಸ್ಪರ್ಧೆಯ ಅಂತಿಮ ಸುತ್ತಿಗೆ ಉಡುಪಿ ಮೂಲದ ಸ್ಪೂರ್ತಿ ಶೆಟ್ಟಿ ಆಯ್ಕೆ ಉಡುಪಿ ಮೂಲದ ಸ್ಪೂರ್ತಿ…
ಗೃಹಲಕ್ಷ್ಮಿ ಯೋಜನೆಯ 31ನೇ ಕಂತಿನ 2,400 ಕೋಟಿ ರೂ. ಹಣ ಬಿಡುಗಡೆ ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದ ಮಹತ್ವಾಕಾಂಕ್ಷೆ ಯೋಜನೆಗಳಲ್ಲಿ…
ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ ಕಾರಣಕ್ಕೂ ಬಿಡುವುದಿಲ್ಲ : ಶೋಭಾ ಕರಂದ್ಲಾಜೆ ಬೆಂಗಳೂರು : ಬಿಡದಿ ಟೌನ್ಶಿಪ್ ನಿರ್ಮಾಣಕ್ಕೆ ಯಾವುದೇ…
ಮುಂಬೈ-ಮಂಗಳೂರು ಎಕ್ಸ್ಪ್ರೆಸ್ನಲ್ಲಿ ಚಾಕು ತೋರಿಸಿ ದರೋಡೆಗೆ ಯತ್ನ: ಪೊಲೀಸರಿಗೆ ಒಪ್ಪಿಸಿದ ಪ್ರಯಾಣಿಕರು ಮಂಗಳೂರು: ಪ್ರಯಾಣಿಕರನ್ನು ಚಾಕು ತೋರಿಸಿ ಬೆದರಿಸಿ ದರೋಡೆ…