ಮೂಡುಬಿದಿರೆ: ಸಾವಿರಕಂಬದ ಬಸದಿಯಲ್ಲಿ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್ ಅವರು ಕೊರೊನಾ ನಿವಾರಣೆಗೆ ಸಂಕಲ್ಪಿಸಿದಂತೆ ಸೇವಾರ್ಥವಾಗಿ ಮಂಗಳವಾರ ರಾತ್ರಿ ಲಕ್ಷದೀಪೋತ್ಸವ ನಡೆಯಿತು.
ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆ ಲಕ್ಷದೀಪೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿ, ಮೂಡುಬಿದಿರೆಯಲ್ಲಿ ನೂರಾರು ವರ್ಷಗಳ ಹಿಂದೆಯೇ ಇಲ್ಲಿನ ರಾಜರು ಅಭೂತಪೂರ್ವ ವಾಸ್ತುಶಿಲ್ಪದ ಬಸದಿಗಳನ್ನು ನಿರ್ಮಿಸಿದ್ದು, ಇದರ ಹಿಂದೆ ಅವರ ಸಂಪತ್ತು ಮತ್ತು ಭಕ್ತಿಯ ವಿನಿಯೋಗವಾಗಿದೆ. ನಾವು ಜೀವನದಲ್ಲಿ ವೃತ್ತಿಯಿಂದ ಗಳಿಸಿದ ಸಂಪತ್ತನ್ನು ಹೇಗೆ ವಿನಿಯೋಗಿಸುತ್ತೇವೆ ಎಂಬುದು ಮುಖ್ಯ. ಮೋಜು ಮಸ್ತಿಗಳಿಗೆ ಸಂಪತ್ತನ್ನು ವಿನಿಯೋಗಿಸದೆ ಸತ್ಕಾರ್ಯಗಳಿಗೆ ವಿನಿಯೋಗಿಸಿದಾಗ ಯಶಸ್ಸು ಸಾಧ್ಯ ಎಂದರು.
ಎದೆ ನೋವು ಕಾಣಿಸಿಕೊಂಡ ಹಿನ್ನೆಲೆ : ಸೌರವ್ ಗಂಗೂಲಿ ಮತ್ತೆ ಆಸ್ಪತ್ರೆಗೆ ದಾಖಲು -Vishwanews24
ಜೈನಮಠದ ಸ್ವಸ್ತಿಶ್ರೀ ಭಟ್ಟಾರಕ ಚಾರುಕೀರ್ತಿ ಪಂಡಿತಾಚಾರ್ಯವರ್ಯ ಸ್ವಾಮೀಜಿ ಆಶೀರ್ವಚನ ನೀಡಿ, ದೇಶದಲ್ಲಿ ಕೊರೊನಾ ವ್ಯಾಪಿಸಿದ ಸಂದರ್ಭ ಜನರು ಸಂಕಷ್ಟಕ್ಕೀಡಾಗಿದ್ದು, ಸಂಪತ್ತು ನಷ್ಟದ ಜೊತೆಗೆ ಉದ್ಯೋಗದ ಅಸ್ಥಿರತೆ ಕಾಡಿತ್ತು. ಹಿಂದೆ ರಾಜರು ಅನಾರೋಗ್ಯಕ್ಕೆ ಈಡಾದಾಗಲೂ ಸಾವಿರ ಕಂಬದ ಬಸದಿಯ ಚಂದ್ರನಾಥ ಸ್ವಾಮಿಯಲ್ಲಿ ಪ್ರಾರ್ಥನೆ ಸಲ್ಲಿಸುತ್ತಿದ್ದರು. ಈಗ ಕೊರೊನಾಮುಕ್ತವಾಗಲು ಇಲ್ಲಿ ಲಕ್ಷದೀಪೋತ್ಸವದ ಸಂಕಲ್ಪ ನಡೆಸಿದ್ದು, ಈಡೇರಿದಂತಾಗಿದೆ ಎಂದರು.
ಧರ್ಮಸ್ಥಳದ ಹೇಮಾವತಿ ವಿ.ಹೆಗ್ಗಡೆ, ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಎಸ್ಡಿಎಂ ಎಜ್ಯುಕೇಶನ್ ಸೊಸ್ಶೆಟಿಯ ಕಾರ್ಯದರ್ಶಿ ಡಾ.ಯಶೋವರ್ಮ, ಚೌಟರ ಅರಮನೆಯ ಕುಲದೀಪ ಎಂ., ಬಸದಿಗಳ ಮೊಕ್ತೇಸರ ಪಟ್ಟಣಶೆಟ್ಟಿ ಸುದೇಶ್ ಕುಮಾರ್, ಆನಡ್ಕ ದಿನೇಶ್ ಕುಮಾರ್ ಉಪಸ್ಥಿತರಿದ್ದರು.
ನಾನು ಯಾವುದಕ್ಕೂ ಹೆದರುವುದಿಲ್ಲ ; ಡಿಸೆಂಬರ್ನಲ್ಲಿ ತಾಯ್ನಾಡಿಗೆ ಮರಳಲಿದ್ದೇನೆ : ಶೇಖ್ ಹಸೀನಾ ನವದೆಹಲಿ,:ನನ್ನನ್ನು ಬಂಧಿಸಬಹುದು ಅಥವಾ ಕೊಲ್ಲಬಹುದು, ಯಾವುದಕ್ಕೂ ನಾನು…
ಕೊಟೇಶ್ವರ ರಸ್ತೆ ಅಪಘಾತ : ಅತಿವೇಗ ಅಜಾಗರೂಕತೆಯ ಚಾಲನೆ ; ಬೈಕ್ ಸವಾರನ ಸಾವಿಗೆ ಕಾರಣನಾದ ಲಾರಿ ಚಾಲಕನ ಬಂಧನ ಉಡುಪಿ:…
ಮೈಸೂರು : ಅಕ್ಟೋಬರ್ 11ರಂದು ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆ ಬೆಂಗಳೂರು/ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಕೊನೆಗೂ ದಿನಾಂಕ…
ಚೆಕ್ ಬೌನ್ಸ್ ಪ್ರಕರಣ : ಬಾಲಿವುಡ್ ನಟ ರಾಜ್ಪಾಲ್ ಯಾದವ್ಗೆ 3 ತಿಂಗಳ ಜೈಲು ಶಿಕ್ಷೆ ನವದೆಹಲಿ: ಚೆಕ್ ಬೌನ್ಸ್…
ರೈಲಿನಲ್ಲಿ ಸಂಚರಿಸುವ ಮುನ್ನ ಹೊಸ ನಿಯಮ ತಿಳ್ಕೊಳ್ಳಿ : ಇನ್ಮುಂದೆ ಮೊಬೈಲ್ನಲ್ಲಿ ಟಿಕಟ್ ತೋರಿಸಿದರೆ ದಂಡ ಫಿಕ್ಸ್ ನವದೆಹಲಿ :ಡಿಜಿಟಲ್…
ಸುರತ್ಕಲ್ : ಅಕ್ರಮವಾಗಿ ನೆಲೆಸಿದ್ದ 6 ಮಂದಿ ಬಾಂಗ್ಲಾದೇಶಿಗರ ಪತ್ತೆ , ಗಡಿಪಾರಿಗೆ ಪೊಲೀಸರ ಸಿದ್ಧತೆ ಮಂಗಳೂರು: ನಗರದ ಸುರತ್ಕಲ್ ಪೊಲೀಸ್…