ಮೂಡುಬಿದಿರೆ : ಸೋಮವಾರ ಸಾಯಂಕಾಲ ಭಾರೀ ಗುಡುಗು ಸಿಡಿಲು ಸಹಿತ ಸುರಿದ ಭಾರೀ ಮಳೆ ಸಂದರ್ಭದಲ್ಲಿ ಸಿಡಿಲಾಘಾತಕ್ಕೆ ಒಳಗಾಗಿ ಇಬ್ಬರು ಮೃತಪಟ್ಟ ದಾರುಣ ಘಟನೆ ಪುತ್ತಿಗೆ ಪಂಚಾಯಿತಿ ವ್ಯಾಪ್ತಿಯ ಕಂಚಿಬೈಲು ಎಂಬಲ್ಲಿ ನಡೆದಿದೆ.
ಅರ್ಬಿ ಪರಿಸರದಲ್ಲಿ ಶೆಡ್ ಒಂದರಲ್ಲಿದ್ದ ಸ್ಥಳೀಯ ಕಾರ್ಮಿಕರಾದ ಯಶವಂತ್(25), ಮಣಿಪ್ರಸಾದ್(25) ಸಿಡಿಲು ಬಡಿದು ಸ್ಥಳದಲ್ಲೇ ಸಾವನ್ನಪ್ಪಿದ್ದವರು. ಇನ್ನು ಇದೇ ಪರಿಸರದಲ್ಲಿದ್ದ ಮೂವರು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಗಣೇಶ್, ಸಂದೀಪ್ ಮತ್ತು ಪ್ರವೀಣ್ ಹೀಗೆ ಮೂವರು ಸಿಡಿಲು ಆಘಾತಕ್ಕೆ ಸಿಲುಕಿದ್ದು ಕೂಡಲೇ ಅವರನ್ನು ಆಲಂಗಾರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸದ್ಯ ಗಾಯಾಳುಗಳು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದು ಬಂದಿದೆ.
ಮೂಡುಬಿದಿರೆ ಸಹಿತ ಗ್ರಾಮಾಂತರ ಪರಿಸರದಲ್ಲಿ ಸೋಮವಾರ ಸಾಯಂಕಾಲ ಭಾರೀ ಗುಡುಗು ಸಿಡಿಲು ಸಹಿತ ಮಳೆಯಾಗಿದ್ದು ಕೆಲ ಕಾಲ ಆತಂಕಕ್ಕೆ ಕಾರಣವಾಯಿತು.
ಉಡುಪಿ: ಕಾಕ್ರೋಚ್’ ಹೆಸರಿನಲ್ಲಿ ಯುವ ಸಮುದಾಯವನ್ನು ಪ್ರಚೋದಿಸುವ ಕೆಲಸ ನಡೆಯುತ್ತಿದೆ: ಸುನಿಲ್ ಕುಮಾರ್ ಆರೋಪ ಉಡುಪಿ: ಚಳವಳಿಯ ಹೆಸರಿನಲ್ಲಿ ದೇಶದಲ್ಲಿ…
ಕಾಪು : ಉದ್ಯಮಿ ಸಖೇಂದ್ರ ಬಿ. ಸುವರ್ಣ ಹೃದಯಾಘಾತದಿಂದ ನಿಧನ ಕಾಪು : ಕಾಪುವಿನ ಹಿರಿಯ ಉದ್ಯಮಿ, ಧಾರ್ಮಿಕ, ಸಾಮಾಜಿಕ…
ಜು.29ರಂದು ಕಿನ್ನಿಮುಲ್ಕಿಯಲ್ಲಿ ಕಿದಿಯೂರು ಕ್ರೆಡಿಟ್ ಕೋ-ಆಪರೇಟಿವ್ನ ನೂತನ ಶಾಖೆ ಉದ್ಘಾಟನೆ ಉಡುಪಿ: ನಗರದ ಕಿನ್ನಿಮುಲ್ಕಿಯ ಶಾಂತಾ ಬಿಲ್ಡಿಂಗ್ನಲ್ಲಿ ಕಿದಿಯೂರು ಕ್ರೆಡಿಟ್…
ಪಡುಬಿದ್ರಿ : ಆ.1ರಂದು ಹೆಜಮಾಡಿ ಟೋಲ್ ವಿರುದ್ದ ಬೃಹತ್ ಹೋರಾಟ: ಪೋಸ್ಟರ್ ಬಿಡುಗಡೆ ಪಡುಬಿದ್ರಿ : ಹೆಜಮಾಡಿ ಟೋಲ್ನಲ್ಲಿ ಸ್ಥಳೀಯ…
ಲಾವಣ್ಯ ಹತ್ಯೆ ಪ್ರಕರಣ : ಆಸ್ಪತ್ರೆಯಿಂದ ಡಿಸ್ಚಾರ್ಜ್ ಬಳಿಕ ಆರೋಪಿ ಪೊಲೀಸ್ ವಶಕ್ಕೆ ಮಂಗಳೂರು: ಬಿ.ಸಿ.ರೋಡಿನ ಕೆ.ಎಸ್.ಆರ್.ಟಿ.ಸಿ. ಬಸ್ ನಿಲ್ದಾಣದಲ್ಲಿ ಜುಲೈ…
ಮಂಗಳೂರು : ಮೀನುಗಾರ ಮುಖಂಡನ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಮಂಗಳೂರು : ನಗರ ಹೊರವಲಯದ ಬೈಕಂಪಾಡಿಯ…