ಮೂಡುಬಿದಿರೆ : ಪಾಕ ಶಾಸ್ತ್ರಜ್ಞ ಪ್ರಶಾಂತ್ ಜೈನ್ ಅವರ ಮನೆಗೆ ಹಾಡಹಗಲೇ ನುಗ್ಗಿದ ದರೋಡೆಕೋರರು ಮೂರೂವರೆ ಲಕ್ಷ ರೂ. ಮೌಲ್ಯದ ಸುಮಾರು 30 ಪವನ್ ತೂಕದ ಚಿನ್ನಾಭರಣಗಳನ್ನು ದೋಚಿದ ಘಟನೆ ತಾಲೂಕಿನ ಅಳಿಯೂರಿನ ನೇಲಡೆಯಲ್ಲಿ ಫೆ. 16ರಂದು ನಡೆದಿದೆ.
ಪ್ರಶಾಂತ್ ಜೈನ್ ಮತ್ತು ಅವರ ಪುತ್ರ ಮೂಲ್ಕಿಯಲ್ಲಿ ಅಡುಗೆ ಕೆಲಸಕ್ಕೆ ತೆರಳಿದ್ದರು. ಹಾಗೂ ಅವರ ಪತ್ನಿ ಶಿರ್ತಾಡಿಗೆ ಹೋಗಿದ್ದರು. ಅವರ ಪುತ್ರಿಯ ಹೊರತಾಗಿ ಮನೆಯಲ್ಲಿ ಯಾರೂ ಇರಲಿಲ್ಲ. ಈ ವೇಳೆ ದರೋಡೆಕೋರರು ಈ ಕೃತ್ಯ ಎಸಗಿದ್ದಾರೆ.
ಭಾನುವಾರ ಬೆಳಗ್ಗೆ ಸುಮಾರು 10.30ರ ವೇಳೆಗೆ ಈ ಘಟನೆ ನಡೆದಿದೆ. ದರೋಡೆಕೋರರು ಪ್ರಶಾಂತ್ ಅವರ ಪುತ್ರಿಯ ಬಾಯಿಯನ್ನು ಒತ್ತಿ ಹಿಡಿದು, ಅರಿವಳಿಕೆ ಸ್ಟೇ ಮಾಡಿ ಆಕೆ ಪ್ರಜ್ಞೆ ತಪ್ಪಿದ ಬಳಿಕ ಚಿನ್ನಾಭರಣಗಳನ್ನು ದೋಚಿದ್ದಾರೆ. ಸುಮಾರು 2 ತಾಸುಗಳ ಬಳಿಕ ನೆರೆಮನೆಯ ಸಂಬಂಧಿಕ ಮಹಿಳೆ ಬಂದಿದ್ದು, ಆಗ ಎಚ್ಚರಗೊಂಡಿದ್ದ ಪ್ರಶಾಂತ್ ಅವರ ಪುತ್ರಿಯ ಮಹಿಳೆಗೆ ನಡೆದ ಘಟನೆ ಬಗ್ಗೆ ವಿವರಿಸಿದ್ದಾರೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಪಣಂಬೂರು ಎಸಿಪಿ ಶ್ರೀಕಾಂತ್, ಮೂಡುಬಿದಿರೆ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ. ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜೊತೆಗೆ ಶ್ವಾನದಳ, ಪ್ರಾಯೋಗಿಕ ವಿಧಿ ವಿಜ್ಞಾನ ವಿಭಾಗದವರೂ ಭೇಟಿ ನೀಡಿದ್ದಾರೆ. ಮನೆಯವರ ಓಡಾಟ ಗಮನಿಸಿದ್ದ ಪರಿಚಿತರೇ ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ಗ್ಯಾರಂಟಿ ಯೋಜನೆಗಳಿಂದ ಮಹಿಳಾ ಸಬಲೀಕರಣ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಗಳೂರು: ಮಹಿಳೆಯರನ್ನು ಸಬಲೀಕರಣ ಮಾಡುವ ಕೆಲಸವನ್ನು ನಮ್ಮ ಸರಕಾರ ಪ್ರಾಮಾಣಿಕವಾಗಿ…
ಒಣಗಿದ ದಾಸವಾಳ ನುಂಗಿ ಆರೂವರೆ ತಿಂಗಳ ಮಗು ಉಸಿರುಗಟ್ಟಿ ಸಾವು ಮೈಸೂರು: ಒಣಗಿದ ದಾಸವಾಳ ಹೂನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿದ…
ಏ. 2ರಂದು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಜಿಲ್ಲಾ ಮಟ್ಟದ ಉದ್ಯೋಗ ಮೇಳ ಉಡುಪಿ : ಜಿಲ್ಲಾಡಳಿತ, ಜಿಪಂ, ಕೌಶಲ್ಯಾಭಿವೃದ್ಧಿ, ಉದ್ಯಮ…
ಅಡುಗೆ ಅನಿಲದ ಅಭಾವ - ತಾತ್ಕಾಲಿಕವಾಗಿ ಸೌದೆ ಒಲೆ ಬಳಸುವಂತೆ ಸಚಿವ ಕೆ.ಹೆಚ್. ಮುನಿಯಪ್ಪ ಮನವಿ ಬೆಂಗಳೂರು : ಗಲ್ಫ್…
ತೊಕ್ಕೊಟ್ಟು : ಆರಿಫ್ ಕೊಲೆ ಪ್ರಕರಣ ; ಆರು ಆರೋಪಿಗಳು ಭಾಗಿ - ಸಿಸಿಬಿ ಎಸಿಪಿ ತಂಡದಿಂದ ಮುಂದಿನ ತನಿಖೆ…
ಕಾಪು : ಇಲಿ ಪಾಷಾಣ ಸೇವಿಸಿ ವ್ಯಕ್ತಿ ಆತ್ಮಹತ್ಯೆ ಕಾಪು: ಉಳಿಯಾರಗೋಳಿ ಗ್ರಾಮದ ನೀಲಾಧರ ಬಂಗೇರ (58) ಇಲಿ ಪಾಷಾಣ…