ಮೂಡುಬಿದಿರೆ : ಪಾಕ ಶಾಸ್ತ್ರಜ್ಞ ಪ್ರಶಾಂತ್ ಜೈನ್ ಅವರ ಮನೆಗೆ ಹಾಡಹಗಲೇ ನುಗ್ಗಿದ ದರೋಡೆಕೋರರು ಮೂರೂವರೆ ಲಕ್ಷ ರೂ. ಮೌಲ್ಯದ ಸುಮಾರು 30 ಪವನ್ ತೂಕದ ಚಿನ್ನಾಭರಣಗಳನ್ನು ದೋಚಿದ ಘಟನೆ ತಾಲೂಕಿನ ಅಳಿಯೂರಿನ ನೇಲಡೆಯಲ್ಲಿ ಫೆ. 16ರಂದು ನಡೆದಿದೆ.
ಪ್ರಶಾಂತ್ ಜೈನ್ ಮತ್ತು ಅವರ ಪುತ್ರ ಮೂಲ್ಕಿಯಲ್ಲಿ ಅಡುಗೆ ಕೆಲಸಕ್ಕೆ ತೆರಳಿದ್ದರು. ಹಾಗೂ ಅವರ ಪತ್ನಿ ಶಿರ್ತಾಡಿಗೆ ಹೋಗಿದ್ದರು. ಅವರ ಪುತ್ರಿಯ ಹೊರತಾಗಿ ಮನೆಯಲ್ಲಿ ಯಾರೂ ಇರಲಿಲ್ಲ. ಈ ವೇಳೆ ದರೋಡೆಕೋರರು ಈ ಕೃತ್ಯ ಎಸಗಿದ್ದಾರೆ.
ಭಾನುವಾರ ಬೆಳಗ್ಗೆ ಸುಮಾರು 10.30ರ ವೇಳೆಗೆ ಈ ಘಟನೆ ನಡೆದಿದೆ. ದರೋಡೆಕೋರರು ಪ್ರಶಾಂತ್ ಅವರ ಪುತ್ರಿಯ ಬಾಯಿಯನ್ನು ಒತ್ತಿ ಹಿಡಿದು, ಅರಿವಳಿಕೆ ಸ್ಟೇ ಮಾಡಿ ಆಕೆ ಪ್ರಜ್ಞೆ ತಪ್ಪಿದ ಬಳಿಕ ಚಿನ್ನಾಭರಣಗಳನ್ನು ದೋಚಿದ್ದಾರೆ. ಸುಮಾರು 2 ತಾಸುಗಳ ಬಳಿಕ ನೆರೆಮನೆಯ ಸಂಬಂಧಿಕ ಮಹಿಳೆ ಬಂದಿದ್ದು, ಆಗ ಎಚ್ಚರಗೊಂಡಿದ್ದ ಪ್ರಶಾಂತ್ ಅವರ ಪುತ್ರಿಯ ಮಹಿಳೆಗೆ ನಡೆದ ಘಟನೆ ಬಗ್ಗೆ ವಿವರಿಸಿದ್ದಾರೆ ಎನ್ನಲಾಗಿದೆ.
ಘಟನಾ ಸ್ಥಳಕ್ಕೆ ಪಣಂಬೂರು ಎಸಿಪಿ ಶ್ರೀಕಾಂತ್, ಮೂಡುಬಿದಿರೆ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ. ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜೊತೆಗೆ ಶ್ವಾನದಳ, ಪ್ರಾಯೋಗಿಕ ವಿಧಿ ವಿಜ್ಞಾನ ವಿಭಾಗದವರೂ ಭೇಟಿ ನೀಡಿದ್ದಾರೆ. ಮನೆಯವರ ಓಡಾಟ ಗಮನಿಸಿದ್ದ ಪರಿಚಿತರೇ ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ವಿಧಾನ ಪರಿಷತ್ ನೂತನ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್…
15,000 ಸರ್ಕಾರಿ ಶಿಕ್ಷಕರ ಬೃಹತ್ ನೇಮಕಾತಿ : ಆ.18ರಿಂದ ಅರ್ಜಿ ಸಲ್ಲಿಕೆ ಆರಂಭ ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ…
ಕರ್ನಾಟಕದ 17 ಪೊಲೀಸ್ ಅಧಿಕಾರಿ, ಸಿಬ್ಬಂದಿಗೆ ಪ್ರತಿಷ್ಠಿತ ರಾಷ್ಟ್ರಪತಿ ಪದಕ ಗೌರವ ಬೆಂಗಳೂರು : ದೇಶದ 80ನೇ ಸ್ವಾತಂತ್ರ್ಯ ದಿನೋತ್ಸವದ…
ಏಳೆಂಟು ಜಿಲ್ಲೆಯ ಅಡಿಕೆ ಬೆಳೆಗಾರರ ಮೇಲೆ ಪರಿಣಾಮ ಗುಟ್ಕಾ ನಿಷೇಧ ಆದೇಶ ಶೀಘ್ರದಲ್ಲೇ ಹಿಂಪಡೆಯಲು ಸಿಎಂ ಡಿಕೆಶಿ ಸೂಚನೆ ಬೆಂಗಳೂರು…
ಉಡುಪಿ:ಮಾದಕ ದ್ರವ್ಯ ಪ್ರಕರಣ : ಪಿಐಟಿ ಎನ್ಡಿಪಿಎಸ್ ಕಾಯ್ದೆಯಡಿ ಆರೋಪಿ ಬಂಧನ ಕಲಬುರಗಿಯ ಕೇಂದ್ರ ಕಾರಾಗೃಹದಲ್ಲಿ ಬಂಧನದಲ್ಲಿರಿಸಲು ಆದೇಶ ಉಡುಪಿ:…
ಕುದುರೆಮುಖದಲ್ಲಿ ಅನಧಿಕೃತ ಜೀಪುಗಳ ಆಫ್ ರೋಡಿಂಗ್ .. ನಿಷೇಧಿಸುವಂತೆ ಜಿಲ್ಲಾಡಳಿತಕ್ಕೆ ಸ್ಥಳೀಯರು, ಪರಿಸರ ಪ್ರೇಮಿಗಳ ಒತ್ತಾಯ ಮೋಜು-ಮಸ್ತಿಗಾಗಿ ಸೂಕ್ಷ್ಮ ಪರಿಸರದಲ್ಲಿ…