Featured

ಮೂಡುಬಿದಿರೆ: ಹಾಡಹಗಲೇ ಮನೆಗೆ ನುಗ್ಗಿದ ದರೋಡೆಕೋರರು ; 3.5 ಲ.ರೂ ಮೌಲ್ಯದ ಚಿನ್ನಾಭರಣ ಕಳವು – vishwanews24

ಮೂಡುಬಿದಿರೆ: ಹಾಡಹಗಲೇ ಮನೆಗೆ ನುಗ್ಗಿದ ದರೋಡೆಕೋರರು ; 3.5 ಲ.ರೂ ಮೌಲ್ಯದ ಚಿನ್ನಾಭರಣ ಕಳವು

ಮೂಡುಬಿದಿರೆ : ಪಾಕ ಶಾಸ್ತ್ರಜ್ಞ ಪ್ರಶಾಂತ್ ಜೈನ್ ಅವರ ಮನೆಗೆ ಹಾಡಹಗಲೇ ನುಗ್ಗಿದ ದರೋಡೆಕೋರರು ಮೂರೂವರೆ ಲಕ್ಷ ರೂ. ಮೌಲ್ಯದ ಸುಮಾರು 30 ಪವನ್ ತೂಕದ ಚಿನ್ನಾಭರಣಗಳನ್ನು ದೋಚಿದ  ಘಟನೆ ತಾಲೂಕಿನ ಅಳಿಯೂರಿನ ನೇಲಡೆಯಲ್ಲಿ ಫೆ. 16ರಂದು ನಡೆದಿದೆ.

ಪ್ರಶಾಂತ್ ಜೈನ್ ಮತ್ತು ಅವರ ಪುತ್ರ ಮೂಲ್ಕಿಯಲ್ಲಿ ಅಡುಗೆ ಕೆಲಸಕ್ಕೆ ತೆರಳಿದ್ದರು. ಹಾಗೂ ಅವರ ಪತ್ನಿ ಶಿರ್ತಾಡಿಗೆ ಹೋಗಿದ್ದರು. ಅವರ ಪುತ್ರಿಯ ಹೊರತಾಗಿ ಮನೆಯಲ್ಲಿ ಯಾರೂ ಇರಲಿಲ್ಲ. ಈ ವೇಳೆ ದರೋಡೆಕೋರರು ಈ ಕೃತ್ಯ ಎಸಗಿದ್ದಾರೆ.

ಭಾನುವಾರ ಬೆಳಗ್ಗೆ ಸುಮಾರು 10.30ರ ವೇಳೆಗೆ ಈ ಘಟನೆ ನಡೆದಿದೆ. ದರೋಡೆಕೋರರು ಪ್ರಶಾಂತ್ ಅವರ ಪುತ್ರಿಯ ಬಾಯಿಯನ್ನು ಒತ್ತಿ ಹಿಡಿದು, ಅರಿವಳಿಕೆ ಸ್ಟೇ ಮಾಡಿ ಆಕೆ ಪ್ರಜ್ಞೆ ತಪ್ಪಿದ ಬಳಿಕ ಚಿನ್ನಾಭರಣಗಳನ್ನು ದೋಚಿದ್ದಾರೆ. ಸುಮಾರು 2 ತಾಸುಗಳ ಬಳಿಕ ನೆರೆಮನೆಯ ಸಂಬಂಧಿಕ ಮಹಿಳೆ ಬಂದಿದ್ದು, ಆಗ ಎಚ್ಚರಗೊಂಡಿದ್ದ ಪ್ರಶಾಂತ್ ಅವರ ಪುತ್ರಿಯ ಮಹಿಳೆಗೆ ನಡೆದ ಘಟನೆ ಬಗ್ಗೆ ವಿವರಿಸಿದ್ದಾರೆ ಎನ್ನಲಾಗಿದೆ.

ಘಟನಾ ಸ್ಥಳಕ್ಕೆ ಪಣಂಬೂರು ಎಸಿಪಿ ಶ್ರೀಕಾಂತ್, ಮೂಡುಬಿದಿರೆ ವೃತ್ತ ನಿರೀಕ್ಷಕ ಸಂದೇಶ್ ಪಿ.ಜಿ. ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಜೊತೆಗೆ ಶ್ವಾನದಳ, ಪ್ರಾಯೋಗಿಕ ವಿಧಿ ವಿಜ್ಞಾನ ವಿಭಾಗದವರೂ ಭೇಟಿ ನೀಡಿದ್ದಾರೆ. ಮನೆಯವರ ಓಡಾಟ ಗಮನಿಸಿದ್ದ ಪರಿಚಿತರೇ ಈ ಕೃತ್ಯ ಎಸಗಿರುವ ಸಾಧ್ಯತೆ ಇದೆ ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

Vishwa News 24

Recent Posts

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ – vishwanews24

ತುಮಕೂರು: LIC ಹಣದ ಆಸೆಗೆ ಸ್ವಂತ ತಮ್ಮನನ್ನೇ ಕೊಲೆ ಮಾಡಿದ ಅಣ್ಣ ತುಮಕೂರು : ಎಲ್‌ಐಸಿ ಪಾಲಿಸಿಯಿಂದ ಸಿಗುವ 30…

11 minutes ago

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ – vishwanews24

ಲಂಡನ್ ಕೋರ್ಟ್‌ನಲ್ಲಿ ಬ್ಯಾಂಕ್ ಆಫ್ ಇಂಡಿಯಾಗೆ ಗೆಲುವು : ನೀರವ್ ಮೋದಿಗೆ 100 ಕೋಟಿ ರೂ. ಪಾವತಿಸಲು ಆದೇಶ ಲಂಡನ್…

46 minutes ago

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ – vishwanews24

ಮಂಗಳೂರು/ಉಡುಪಿ: ಐವನ್ ಡಿಸೋಜಾ ರಿಗೆ ಸಚಿವ ಸ್ಥಾನ ನೀಡುವಂತೆ ಬಿ ಕೆ ಹರಿಪ್ರಸಾದ್ ಗೆ ಕಥೊಲಿಕ್ ಸಭಾ ಮನವಿ ಮಂಗಳೂರು/ಉಡುಪಿ:…

58 minutes ago

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ – vishwanews24

ಉಡುಪಿ: ಮೀನುಗಾರಿಕೆ ಇಲಾಖೆಯ ವಿವಿಧ ಸೌಲಭ್ಯಗಳಿಗೆ ಅರ್ಜಿ ಆಹ್ವಾನ ಉಡುಪಿ: ಜಿಲ್ಲೆಯ ಅರ್ಹ ಮೀನುಗಾರರ ಆರ್ಥಿಕ ಮತ್ತು ಸಾಮಾಜಿಕ ಸಬಲೀಕರಣಕ್ಕಾಗಿ…

1 hour ago

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ – vishwanews24

ಜೂ. 24ರಿಂದ 26ರ ವರೆಗೆ ಕರಾವಳಿಗೆ ಆರೆಂಜ್ ಅಲರ್ಟ್ ಘೋಷಣೆ  ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ವಿವಿಧ ಕಡೆಗಳಲ್ಲಿ ಮಂಗಳವಾರ…

1 hour ago

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ – vishwanews24

ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣ : ಎನ್‌ಐಎ ಅಧಿಕಾರಿಗಳಿಂದ ಮೂವರ ವಿಚಾರಣೆ ಮಂಗಳೂರು: ಬಜಪೆಯಲ್ಲಿ ನಡೆದ ಹಿಂದೂ ಸಂಘಟನೆಯ ಕಾರ್ಯಕರ್ತ…

1 hour ago