ಮೂಡುಬಿದಿರೆ: ‘ಕೋಟಿ-ಚೆನ್ನಯ’ ಜೋಡುಕರೆ ಕಂಬಳ ಸಮಿತಿ ಆಶ್ರಯದಲ್ಲಿ ಕಡಲಕೆರೆ ನಿಸರ್ಗಧಾಮದ ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದ ಜೋಡುಕರೆಯಲ್ಲಿ 19ನೇ ವರ್ಷದ ಹೊನಲು ಬೆಳಕಿನ ಕಂಬಳಕ್ಕೆ ಇಂದು ಬೆಳಗ್ಗೆ ಚಾಲನೆ ನೀಡಲಾಯಿತು.
ಕ್ರೈಸ್ತ ಧರ್ಮಗುರು ವಂ.ವಾಲ್ಟರ್ ಡಿಸೋಜ, ಆಲಂಗಾರು ಶ್ರೀಮಹಾಲಿಂಗೇಶ್ವರ ದೇವಳದ ಪ್ರಧಾನ ಅರ್ಚಕ ಈಶ್ವರ ಭಟ್, ಪುತ್ತಿಗೆ ನೂರಾನಿ ಮಸೀದಿ ಧರ್ಮಗುರು ಜಿಯಾವುಲ್ಲ ಹಾಗೂ ಕುಂಟಾಡಿ ಸುಧೀರ್ ಹೆಗ್ಡೆ, ಮೂಡುಬಿದಿರೆ ಚೌಟರ ಅರಮನೆಯ ಕುಲದೀಪ ಎಂ. ಕಂಬಳ ಉದ್ಘಾಟಿಸಿದರು.
‘ಪದ್ಮಶ್ರೀ’ ಪುರಸ್ಕೃತ ಹರೇಕಳ ಹಾಜಬ್ಬ ಹಾಗೂ ಇಂಡಿಯನ್ ಐಡಲ್ ಫೈನಲಿಸ್ಟ್ ನಿಹಾಲ್ ತಾವ್ರೋ ಅವರನ್ನು ಸನ್ಮಾನಿಸಲಾಯಿತು.
ಕಂಬಳ ಸಮಿತಿ ಅಧ್ಯಕ್ಷ, ಶಾಸಕ ಉಮಾನಾಥ ಕೋಟ್ಯಾನ್, ಮಾಜಿ ಅಧ್ಯಕ್ಷ ಕೆ.ಅಭಯಚಂದ್ರ ಜೈನ್, ಮೂಡುಬಿದಿರೆ ಪುರಸಭೆ ಅಧ್ಯಕ್ಷ ಪ್ರಸಾದ್ ಕುಮಾರ್, ಕಂಬಳ ಅಕಾಡೆಮಿ ಸಂಚಾಲಕ ಗುಣಪಾಲ ಕಡಂಬ, ಮೂಡುಬಿದಿರೆ ಕಂಬಳ ಸಮಿತಿ ಕೋಶಾಧಿಕಾರಿ ಭಾಸ್ಕರ್ ಎಸ್.ಕೋಟ್ಯಾನ್, ಕಂಬಳ ಬಹುಭಾಷ ಸಿನಿಮಾ ನಿರ್ದೇಶಕ ರಾಜೇಂದ್ರಬಾಬು ಸಿಂಗ್, ನಟ ಗೋಪಿನಾಥ್ , ಬಿಜೆಪಿ ಜಿಲ್ಲಾಧ್ಯಕ್ಣ ಸುದರ್ಶನ್ ಎಂ. ಉಪಸ್ಥಿತರಿದ್ದರು.
ಉಡುಪಿ : ಹಣಕಾಸಿನ ವಿಚಾರದಲ್ಲಿ ವೈಮನಸ್ಸು ಡೇವಿಡ್ ಡಿಸೋಜ ಹತ್ಯೆಗೆ ಕಾರಣ; ತನಿಖೆಯಿಂದ ಬಯಲು ಉಡುಪಿ: ಮುದರಂಗಡಿ ಗ್ರಾ.ಪಂ ಮಾಜಿ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ: ಮೂವರು ಆರೋಪಿಗಳ ಬಂಧನ ಉಡುಪಿ: ಮುದರಂಗಡಿಯಲ್ಲಿ ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡ ಡೇವಿಡ್…
ಹಿಮಾಚಲ ಪ್ರದೇಶದಲ್ಲಿ ಭೀಕರ ರಸ್ತೆ ದುರಂತ ; ಕಂದಕಕ್ಕೆ ಉರುಳಿದ ಖಾಸಗಿ ಬಸ್, 7 ಮಂದಿ ಮೃತ್ಯು ಶಿಮ್ಲಾ :…
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…