ಮೂಡುಬಿದಿರೆ :  20ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಅದ್ಧೂರಿ ಚಾಲನೆ – VIshwanews24

Featured, ದಕ್ಷಿಣ ಕನ್ನಡ

ಮೂಡುಬಿದಿರೆ :  20ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಅದ್ಧೂರಿ ಚಾಲನೆ

ಮೂಡುಬಿದಿರೆ: ಮಂಗಳೂರು ಹೊರವಲಯದ ಮೂಡಬಿದ್ರೆಯ ಕಡಲಕರೆಯ ವೀರರಾಣಿ ಅಬ್ಬಕ್ಕ ಸಂಸ್ಕೃತಿ ಗ್ರಾಮದಲ್ಲಿ ಇಂದು 20ನೇ ವರ್ಷದ ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ ನೀಡಲಾಯಿತು.

ಬೆಳಗ್ಗೆ ಕಂಬಳದ ಉದ್ಘಾಟನಾ ಕಾರ್ಯಕ್ರಮ ನಡೆಯಿತು. ಕಂಬಳ ಸಂಘಟಕ ಮತ್ತು ಶಾಸಕ ಉಮಾನಾಥ ಕೋಟ್ಯಾನ್ ಅವರು ಮುಂದಾಳತ್ವದಲ್ಲಿ ನಡೆಯುವ ಕಂಬಳ ಕೂಟವನ್ನು ಚೌಟರ ಅರಮನೆಯ ಕುಲದೀಪ ಎಂ. ಅಧ್ಯಕ್ಷತೆಯಲ್ಲಿ ಅಲಂಗಾರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೆಸರ ವೇದಮೂರ್ತಿ ಈಶ್ವರ ಭಟ್, ಅತಿಥಿಗಳು, ಮತ್ತು ಧರ್ಮ ಗುರುಗಳ ಉಪಸ್ಥಿತಿಯಲ್ಲಿ ಉದ್ಘಾಟನೆಗೊಂಡಿತು.

ದೀಪ ಬೆಳಗಿಸಿ, ಕೋಟಿ ಚೆನ್ನಯರ ಭಾವಚಿತ್ರಕ್ಕೆ ಪುಷ್ಪರ್ಚಾನೆ ಮಾಡಲಾಯಿತು. ಬಳಿಕ ವೀರರಾಣಿ ಅಬ್ಬಕ್ಕ ಮೂರ್ತಿಗೆ ಹೂವಿನ ಮಾಲೆ ಹಾಕಲಾಯಿತು.

ದೈವದ ಹಿರಿಯ ಪೂಜಾರಿ,ಕಂಬಳದ ಕೋಣಗಳ ಯಜಮಾನರಾದ ಅಣ್ಣು ಶೆಟ್ಟಿ ಲಾಡಿಯವರಿಗೆ ಸನ್ಮಾನಿಸಿ ಗೌರವಿಸಲಾಯಿತು.

ಹಲವಾರು ಮಂದಿ ಅತಿಥಿ – ಗಣ್ಯರು ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಕಂಬಳಕ್ಕೆ ಶುಭ ಹಾರೈಸಿದರು.

Leave a Reply