Featured

ಮೂಡುಬಿದ್ರೆ: ವೇಶ್ಯಾವಾಟಿಕೆ ಅಡ್ಡೆಗೆ ಪೊಲೀಸರ ದಾಳಿ ‌; ನಾಲ್ವರ ಬಂಧನ – vishwanews24

ಮೂಡುಬಿದ್ರೆ: ವೇಶ್ಯಾವಾಟಿಕೆ ಅಡ್ಡೆಗೆ ಪೊಲೀಸರ ದಾಳಿ ‌; ನಾಲ್ವರ ಬಂಧನ

ಮೂಡುಬಿದ್ರೆ: ‌ವೇಶ್ಯಾವಾಟಿಕೆ ಅಡ್ಡಗೆ ದಾಳಿ ನಡೆಸಿದ ಮೂಡುಬಿದ್ರೆ ಪೊಲೀಸರು ನಾಲ್ವರನ್ನು ಬಂಧಿಸಿರುವ ಘಟನೆ ನಿಡ್ಡೋಡಿಯಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ.

ಆರೋಪಿಗಳನ್ನು ನಿಡ್ಡೋಡಿಯ ಮಹೇಶ, ಕಟೀಲು ಪರಿಸರದ ಯಜ್ಞೇಶ್,ದಿಲೀಪ್ ಹಾಗೂ ಶ್ರೀಕಾಂತ್ ಎಂದು ಗುರುತಿಸಲಾಗಿದೆ.

ಘಟನೆ ವಿವರ:

ಇಬ್ಬರು ಅಪ್ರಾಪ್ತ ಬಾಲಕಿಯರೊಂದಿಗೆ ನಾಲ್ಕು ಮಂದಿ ಯುವಕರ ತಂಡವೊಂದು ನಿಡ್ಡೋಡಿಯ ಮನೆಯೊಂದರಲ್ಲಿದ್ದಾರೆನ್ನುವ ಮಾಹಿತಿ ತಿಳಿದ ಇನ್ಸ್ಪೆಕ್ಟರ್ ಸಂದೇಶ್ ಪಿ.ಜಿ.ನೇತೃತ್ವದ ಪೊಲೀಸ್ ತಂಡವು ಆ ಮನೆಗೆ ದಾಳಿ ನಡೆಸಿದೆ.

ಈ ವೇಳೆ ಲೈಂಗಿಕ ಕ್ರಿಯೆಗೆ ಬಳಸುವ ಕೆಲವೊಂದು ವಸ್ತುಗಳೂ ಅಲ್ಲಿ ಪತ್ತೆಯಾಗಿದೆ ಎಂದು ಹೇಳಲಾಗುತ್ತಿದ್ದು, ಮಹೇಶನ ಮನೆಯಲ್ಲಿ ಅವನೊಬ್ಬನೇ ವಾಸವಿದ್ದುದರಿಂದ ಆ ಮನೆಯನ್ನು ಈ ಕೃತ್ಯಕ್ಕೆ ಉಪಯೋಗಿಸುತ್ತಿದ್ದನೆನ್ನಲಾಗಿದೆ.

ಆರೋಪಿಗಳ ವಿರುದ್ಧ ಮೂಡುಬಿದಿರೆ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿದೆ. ಸಂತ್ರಸ್ತ ಬಾಲಕಿಯರನ್ನು ಮತ್ತು ಆರೋಪಿಗಳನ್ನು ಠಾಣೆಗೆ ತಂದು ವಿಚಾರಿಸಿದಾಗ ಎಲ್ಲ ವಿಚಾರಗಳನ್ನೂ ಬಾಯಿಬಿಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಇನ್ಸ್‌ಪೆಕ್ಟರ್ ಸಂದೇಶ್ ಪಿ.ಜಿ.ಅವರ ಸಮಯಪ್ರಜ್ಞೆ ಮತ್ತು ಆರೋಪಿಗಳನ್ನು ಬಂಧಿಸಿರುವ ಕ್ರಮಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

Vishwa News 24

Recent Posts

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ – vishwanews24

ಶಿಳ್ಳೆ ಹಾಕಿದ ಪ್ರೇಕ್ಷಕನಿಗೆ ರಂಗಸ್ಥಳದಲ್ಲೇ ತರಾಟೆ: ಉಜಿರೆ ಅಶೋಕ್ ಭಟ್ ಸಮರ್ಥನೆ ಬೆಳ್ತಂಗಡಿ: ಕಲೆಯ ಪ್ರದರ್ಶನದಲ್ಲಿ ಕೆಲವೊಮ್ಮೆ ಪ್ರೇಕ್ಷಕರ ವರ್ತನೆ…

4 hours ago

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ – vishwanews24

ಮಂಗಳೂರು: ಯಕ್ಷಗಾನ ಪ್ರದರ್ಶನ ನಡೆಯುತ್ತಿದ್ದಾಗ  ಶಿಳ್ಳೆ  ಹಾಕಿದ್ದಕ್ಕೆ ಪ್ರೇಕ್ಷಕರ ವಿರುದ್ಧ ಕಲಾವಿದ ಉಜಿರೆ ಅಶೋಕ್‌ ಭಟ್‌ ಗರಂ ಮಂಗಳೂರು: ಯಕ್ಷಗಾನ…

1 day ago

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ – vishwanews24

ನೇಪಾಳದ ನೂತನ ಪ್ರಧಾನಿಯಾಗಿ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ ಕಠ್ಮಂಡು: ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ನೂತನ…

1 day ago

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ – vishwanews24

SSLC ಪರೀಕ್ಷೆ 625 ಅಂಕದಿಂದ 525ಕ್ಕೆ ಇಳಿಕೆ : ಈ ವರ್ಷದಿಂದ ತೃತೀಯ ಭಾಷೆ ಕಡ್ಡಾಯವಲ್ಲ ಬೆಂಗಳೂರು: ಇನ್ನು ಮುಂದೆ…

1 day ago

ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ ಮಂಗಳೂರು ವಿವಿ ಗೌರವ ಡಾಕ್ಟರೇಟ್ – vishwanews24

ಮಾ.28ರಂದು ಮಂಗಳೂರು ವಿವಿ 44ನೇ ಘಟಿಕೋತ್ಸವ  :ಹರೇಕಳ ಹಾಜಬ್ಬ, ಸೂರಿಕುಮೇರು ಗೋವಿಂದ ಭಟ್, ರವೀಶ್ ಪಡುಮಲೆಗೆ  ಗೌರವ ಡಾಕ್ಟರೇಟ್ ಮಂಗಳೂರು…

1 day ago

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ – vishwanews24

ದ.ಕ ಜಿಲ್ಲೆಯಲ್ಲಿ ಜೆಡಿಎಸ್ ಪಕ್ಷ ಬಲವರ್ಧನೆಗೆ ಹೆಚ್ಚಿನ ಒತ್ತು : ಅಕ್ಷಿತ್ ಸುವರ್ಣ ಮಂಗಳೂರು: ಯುವ ಜನತಾದಳ (ಜಾ) ದಕ್ಷಿಣ…

1 day ago