ಉಡುಪಿ: ಮೂಡುಬೆಳ್ಳೆಯ ಕಟ್ಟಿಂಗೇರಿ ಗ್ರಾಮದಲ್ಲಿರುವ ಕುದ್ರಮಾಲೆಯ ಬೆಟ್ಟದಲ್ಲಿ ಜೋಸೆಫ್ ವಲೇರಿಯನ್ ಲೋಬೊ ಇವರ ಖಾಸಗಿ ಜಾಗದಲ್ಲಿ ನಿರ್ಮಿಸಿದ ಪವಿತ್ರ ಶಿಲುಬೆಯನ್ನು ಧ್ವಂಸ ಮಾಡಿ ಕ್ರೈಸ್ತರ ಭಾವನೆಗಳಿಗೆ ನೋವನ್ನು ಉಂಟುಮಾಡಿದ ದುಷ್ಕರ್ಮಿಗಳನ್ನು ಕೂಡಲೇ ಬಂಧಿಸಬೇಕೆಂದು ಭಾರತೀಯ ಕ್ರೈಸ್ತ ಒಕ್ಕೂಟ ಒತ್ತಾಯಿಸಿದೆ.
ಈ ಕುರಿತು ಪ್ರತಿಕ್ರಿಯೆ ನೀಡಿದ ಭಾರತೀಯ ಕ್ರೈಸ್ತ ಒಕ್ಕೂಟ ರಾಜ್ಯಾಧ್ಯಕ್ಷ ಪ್ರಶಾಂತ್ ಜತ್ತನ್ನ ಅವರು, ಕ್ರೈಸ್ತ ಸಮುದಾಯದ ಭಕ್ತಾದಿಗಳು ಬಹಳಷ್ಟು ಪವಿತ್ರತೆಯಿಂದ ನೋಡುವಂತಹ ಶಿಲುಬೆಯನ್ನು ಕಿಡಿಗೇಡಿಗಳು ಧ್ವಂಸ ಮಾಡಿದ್ದು, ಕ್ರೈಸ್ತ ಸಮುದಾಯದ ಭಕ್ತರಿಗೆ ನೋವು ತಂದಿದೆ. ಮೇಲ್ನೋಟಕ್ಕೆ ಇದೊಂದು ವ್ಯವಸ್ಥಿತ ಕೃತ್ಯವಾಗಿದ್ದು, ಜಿಲ್ಲೆಯ ಸೌಹಾರ್ದ ವಾತಾವರಣ ಕೆಡಿಸುವ ಹುನ್ನಾರ ದುಷ್ಕರ್ಮಿಗಳಿಂದ ನಡೆದಿದೆ. ಕೃತ್ಯ ಎಸಗಿದ ದುಷ್ಕರ್ಮಿಗಳನ್ನು ಕೂಡಲೇ ಪತ್ತೆಹಚ್ಚಿ ಶಿಕ್ಷೆಗೆ ಒಳಪಡಿಸಬೇಕು ಎಂದು ಒತ್ತಾಯಿಸಿದರು.
ಭಕ್ತರು ಗೋಕರ್ಣದ ಗಣೇಶನ ವಿಗ್ರಹ ಸ್ಪರ್ಶಿಸಿ ಪೂಜೆ ಮಾಡುವಂತಿಲ್ಲ ಗೋಕರ್ಣ (ಉತ್ತರ ಕನ್ನಡ ಜಿಲ್ಲೆ): ಗೋಕರ್ಣದ ಮಹಾಗಣಪತಿ ದೇವಸ್ಥಾನದಲ್ಲಿರುವ ಸಾವಿರಾರು ವರ್ಷಗಳಷ್ಟು…
ಕೊಲಂಬೊ : ಅಕ್ರಮ ಪ್ರವೇಶಿಸಿ ಮೀನುಗಾರಿಕೆ ನಡೆಸಿದ ಆರೋಪ : 9 ಭಾರತೀಯ ಮೀನುಗಾರರನ್ನು ಬಂಧಿಸಿದ ಶ್ರೀಲಂಕಾ ಕೊಲಂಬೊ :…
ಸುಳ್ಯ: ಬೈಕ್-ಕಾರು ಅಪಘಾತ; ದ್ವಿತೀಯ ಪಿಯು ವಿದ್ಯಾರ್ಥಿ ಸಾವು ಅರಂತೋಡು: ಅರಂತೋಡು ಕುಲ್ಚಾರ್ ಸಮೀಪ ಬೈಕ್ ಕಾರು ನಡುವೆ ಅಪಘಾತ…
ಮಂಗಳೂರು: ವಿದ್ಯಾರ್ಥಿಗಳು, ವಿಪಕ್ಷ ನಾಯಕನ ಜೊತೆ ಆಡಳಿತ ಪಕ್ಷ ನಡೆಸಿಕೊಂಡ ರೀತಿ ಖಂಡನೀಯ: ರಮಾನಾಥ ರೈ ಮಂಗಳೂರು: ನೀಟ್ ಪರೀಕ್ಷೆಯಲ್ಲಿನ…
ಪ್ರಶ್ನೆ ಪತ್ರಿಕೆ ಸೋರಿಕೆ: ಕೇಂದ್ರ ಸರ್ಕಾರ ಯಾರನ್ನೂ ಕಾಪಾಡಬಾರದು : ಡಿ ಕೆ ಶಿವಕುಮಾರ್ ಆಗ್ರಹ ಬೆಂಗಳೂರು: ಪ್ರಶ್ನೆ ಪತ್ರಿಕೆ…
ವಿದ್ಯಾರ್ಥಿಗಳ ಹಿತಕ್ಕಾಗಿ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿದ್ದರೆ, ಬಿಜೆಪಿ ನಾಯಕರು ಮೋದಿ ಮೆಚ್ಚಿಸಲು ಪ್ರತಿಭಟಿಸುತ್ತಿದ್ದಾರೆ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರು:…