ಮೂರನೇ ದಿನಕ್ಕೆ ತಲುಪಿದ ಉಡುಪಿ ಜಿಲ್ಲಾ ಕಾಂಗ್ರೆಸ್ ಜನಧ್ವನಿ ಪಾದಯಾತ್ರೆ -Vishwanews24

Featured, ಉಡುಪಿ

ಮೂರನೇ ದಿನಕ್ಕೆ ತಲುಪಿದ ಉಡುಪಿ ಜಿಲ್ಲಾ ಕಾಂಗ್ರೆಸ್ ಜನಧ್ವನಿ ಪಾದಯಾತ್ರೆ -Vishwanews24

ಉಡುಪಿ: ಕೇಂದ್ರ ಹಾಗೂ ರಾಜ್ಯ ಸರಕಾರಗಳು ತಂದಿರುವ ರೈತ ವಿರೋಧಿ ನೀತಿಗಳಿಂದ ಎ.ಪಿ.ಎಂ.ಸಿ, ಕಾಯ್ದೆ ತಿದ್ದುಪಡಿ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾಯ್ದೆ ತಿದ್ದು, ವಿದ್ಯುತ್ ಕಾಯ್ದೆ ತಿದ್ದುಪಡಿ ಹಾಗೂ ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆಗಳ ವಿರುದ್ದ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಫೆಬ್ರವರಿ 22 ರಂದು ಹೆಜಮಾಡಿ ಬಸ್ ನಿಲ್ದಾಣದಿಂದ ಪ್ರಾರಂಭಗೊಂಡ ‘ ಜನಧ್ವನಿ’ ಪಾದಯಾತ್ರೆ ಮೂರನೇ ದಿನಕ್ಕೆ ತಲುಪಿದ್ದು ಉದ್ಯಾವರ ಬಲಾಯಿ ಪಾದೆಯಿಂದ ಬ್ರಹ್ಮಾವರಕ್ಕೆ ಬುಧವಾರ ಆರಂಭಗೊಂಡಿದೆ.

ಮಾರ್ಚ್ 7ರಂದು ನಡೆಯಲಿರುವ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಪ್ರಶಸ್ತಿ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆಗೊಳಿಸಿದ ಸಿಎಂ ಬಿ.ಎಸ್.ಯಡಿಯೂರಪ್ಪ -Vishwanews24

ಉದ್ಯಾವರ ಬಲಾಯಿಪಾದೆಯಿಂದ ಆರಂಭಗೊಂಡ ಪಾದಯಾತ್ರೆ, ಕಿನ್ನಿಮೂಲ್ಕಿ ಮೂಲಕ, ನಿಟ್ಟೂರು, ಅಂಬಾಗಿಲು ಮೂಲಕ ಸಂತೆಕಟ್ಟೆ ತಲುಪಿ ಅಲ್ಲಿಂದ ಉಪ್ಪೂರು, ಹೇರೂರು, ಮಾರ್ಗವಾಗಿ ಸಂಜೆ ಬ್ರಹ್ಮಾವರ ತಲುಪಲಿದ್ದು ಸಾರ್ವಜನಿಕ ಸಭೆ ನಡೆಯಲಿದೆ.

ಜೆಡಿಎಸ್‌‌ ಶಕ್ತಿ ಪ್ರದರ್ಶಿಸುವ ನಿಟ್ಟಿನಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇವೆ : HDK -Vishwanews24

ಪಾದಯಾತ್ರೆಯಲ್ಲಿ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ವಿನಯ್ ಕುಮಾರ್ ಸೊರಕೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ನಾಯಕರುಗಳಾದ ಯತೀಶ್ ಕರ್ಕೇರಾ, ವೆರೋನಿಕಾ ಕರ್ನೆಲಿಯೋ, ಗೀತಾ ವಾಗ್ಳೆ, ವಿಶ್ವಾಸ್ ಅಮೀನ್, ಹರೀಶ್ ಕಿಣಿ, ರೋಶನಿ ಒಲಿವರ್, ನರಸಿಂಹ ಮೂರ್ತಿ, ಪ್ರಶಾಂತ್ ಪೂಜಾರಿ, ಜನಾರ್ದನ ಭಂಡಾರ್ಕರ್, ರಮೇಶ್ ಕಾಂಚನ್, ಸತೀಶ್ ಅಮೀನ್ ಪಡುಕೆರೆ ಹಾಗೂ ಇತರರು ಉಪಸ್ಥಿತರಿದ್ದರು.

ಮೀನುಗಾರರ ಅಗತ್ಯ ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡಲು ಸರ್ಕಾರದಿಂದ ಹಲವು ಯೋಜನೆಗಳನ್ನು ರೂಪಿಸಲಾಗುತ್ತಿದೆ : ಸಚಿವ ಅಂಗಾರ -Vishwanews24