ಉಡುಪಿ: ಕೇಂದ್ರ ಹಾಗೂ ರಾಜ್ಯ ಸರಕಾರಗಳು ತಂದಿರುವ ರೈತ ವಿರೋಧಿ ನೀತಿಗಳಿಂದ ಎ.ಪಿ.ಎಂ.ಸಿ, ಕಾಯ್ದೆ ತಿದ್ದುಪಡಿ, ಭೂ ಸುಧಾರಣಾ ಕಾಯ್ದೆ ತಿದ್ದುಪಡಿ, ಕಾರ್ಮಿಕ ಕಾಯ್ದೆ ತಿದ್ದು, ವಿದ್ಯುತ್ ಕಾಯ್ದೆ ತಿದ್ದುಪಡಿ ಹಾಗೂ ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆಗಳ ವಿರುದ್ದ ಉಡುಪಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಫೆಬ್ರವರಿ 22 ರಂದು ಹೆಜಮಾಡಿ ಬಸ್ ನಿಲ್ದಾಣದಿಂದ ಪ್ರಾರಂಭಗೊಂಡ ‘ ಜನಧ್ವನಿ’ ಪಾದಯಾತ್ರೆ ಮೂರನೇ ದಿನಕ್ಕೆ ತಲುಪಿದ್ದು ಉದ್ಯಾವರ ಬಲಾಯಿ ಪಾದೆಯಿಂದ ಬ್ರಹ್ಮಾವರಕ್ಕೆ ಬುಧವಾರ ಆರಂಭಗೊಂಡಿದೆ.
ಉದ್ಯಾವರ ಬಲಾಯಿಪಾದೆಯಿಂದ ಆರಂಭಗೊಂಡ ಪಾದಯಾತ್ರೆ, ಕಿನ್ನಿಮೂಲ್ಕಿ ಮೂಲಕ, ನಿಟ್ಟೂರು, ಅಂಬಾಗಿಲು ಮೂಲಕ ಸಂತೆಕಟ್ಟೆ ತಲುಪಿ ಅಲ್ಲಿಂದ ಉಪ್ಪೂರು, ಹೇರೂರು, ಮಾರ್ಗವಾಗಿ ಸಂಜೆ ಬ್ರಹ್ಮಾವರ ತಲುಪಲಿದ್ದು ಸಾರ್ವಜನಿಕ ಸಭೆ ನಡೆಯಲಿದೆ.
ಜೆಡಿಎಸ್ ಶಕ್ತಿ ಪ್ರದರ್ಶಿಸುವ ನಿಟ್ಟಿನಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಲು ತೀರ್ಮಾನಿಸಿದ್ದೇವೆ : HDK -Vishwanews24
ಪಾದಯಾತ್ರೆಯಲ್ಲಿ ಮಾಜಿ ಸಚಿವರಾದ ಪ್ರಮೋದ್ ಮಧ್ವರಾಜ್, ವಿನಯ್ ಕುಮಾರ್ ಸೊರಕೆ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಪಾಧ್ಯಕ್ಷ ಪ್ರಖ್ಯಾತ್ ಶೆಟ್ಟಿ, ನಾಯಕರುಗಳಾದ ಯತೀಶ್ ಕರ್ಕೇರಾ, ವೆರೋನಿಕಾ ಕರ್ನೆಲಿಯೋ, ಗೀತಾ ವಾಗ್ಳೆ, ವಿಶ್ವಾಸ್ ಅಮೀನ್, ಹರೀಶ್ ಕಿಣಿ, ರೋಶನಿ ಒಲಿವರ್, ನರಸಿಂಹ ಮೂರ್ತಿ, ಪ್ರಶಾಂತ್ ಪೂಜಾರಿ, ಜನಾರ್ದನ ಭಂಡಾರ್ಕರ್, ರಮೇಶ್ ಕಾಂಚನ್, ಸತೀಶ್ ಅಮೀನ್ ಪಡುಕೆರೆ ಹಾಗೂ ಇತರರು ಉಪಸ್ಥಿತರಿದ್ದರು.
‘ಟಾಕ್ಸಿಕ್’ ಸಿನಿಮಾ ಬಿಡುಗಡೆ ಹಿನ್ನೆಲೆ: ಮಂಗಳೂರಿಗೆ ಆಗಮಿಸಿದ ರಾಕಿಂಗ್ ಸ್ಟಾರ್ ಯಶ್ ; ಧರ್ಮಸ್ಥಳಕ್ಕೆ ಭೇಟಿ ಮಂಗಳೂರು: ಸ್ಯಾಂಡಲ್ವುಡ್ನ ರಾಕಿಂಗ್ ಸ್ಟಾರ್…
ಉಡುಪಿ: ಜಿಲ್ಲೆಯಲ್ಲಿ 97,706 ಮತದಾರರ ವಿವರಗಳಲ್ಲಿ ವ್ಯತ್ಯಾಸಗಳು ಪತ್ತೆ ಉಡುಪಿ: ಹಿಂದಿನ ಮತದಾರರ ಪಟ್ಟಿಯೊಂದಿಗೆ ಮತದಾರರ ವಿವರಗಳನ್ನು ಜೋಡಿಸಲು ಸಾಧ್ಯವಾಗದ…
ವಿಷಕಾರಿ ದತ್ತೂರ ಬೀಜ ಮಾರಾಟ : ಅಮೆಜಾನ್, ಸ್ವಿಗ್ಗಿ ಇನ್ಸ್ಟಾಮಾರ್ಟ್ನ ಆಹಾರ ಪರವಾನಗಿ ಅಮಾನತು ಬೆಂಗಳೂರು: ವಿಷಕಾರಿ ದತ್ತೂರ ಬೀಜಗಳನ್ನು…
ಉಡುಪಿ: ಡೇವಿಡ್ ಡಿಸೋಜಾ ಶೂಟೌಟ್ ಪ್ರಕರಣ ; ಹತ್ಯೆಯ ಹಿಂದಿನ ಮಾಸ್ಟರ್ ಮೈಂಡ್ ಇನ್ನೂ ಪತ್ತೆಯಾಗಿಲ್ಲ: ಹರಿರಾಮ್ ಶಂಕರ್ ಉಡುಪಿ: ಉದ್ಯಮಿ…
ಮಂತ್ರಾಲಯ: ಆ. 27ರಿಂದ ಸೆ.2ರವರೆಗೆ ರಾಯರ 355ನೇ ಆರಾಧನಾ ಮಹೋತ್ಸವ ಆ.27ರಂದು ಧ್ವಜಾರೋಹಣ, ಗೋ ಅಶ್ವಪೂಜೆ ನೆರವೇರಿಸುವ ಮೂಲಕ ಆರಾಧನೆಗೆ…
ಭಾರೀ ಮಳೆ ಮುನ್ಸೂಚನೆ : ಕರಾವಳಿ ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ…