ನವದೆಹಲಿ: ಎರಡು ಅವಧಿಯಲ್ಲೂ ದೇಶದ ಜನತೆಯಲ್ಲಿ ವಿಶ್ವಾಸ ಮೂಡಿಸಿದೆವು. ಈಗ ಮೂರನೇ ಬಾರಿ ಎನ್ಡಿಎಗೆ ಆಶೀರ್ವಾದ ಸಿಕ್ಕಿದೆ. ಇದಕ್ಕಾಗಿ ನಾನು ತಲೆ ಬಾಗಿ ಧನ್ಯವಾದ ಸಲ್ಲಿಸುತ್ತೇನೆ ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಕೃತಜ್ಞತೆ ಸಲ್ಲಿಸಿದರು.
ಫಲಿತಾಂಶದ ಬಳಿಕ ಬಿಜೆಪಿ ಕಚೇರಿಯಲ್ಲಿ ಇಂದು ಪಕ್ಷದ ಕಾರ್ಯಕರ್ತರು ಹಾಗೂ ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಿಮ್ಮ ಈ ಪ್ರೀತಿ, ಈ ಆಶೀರ್ವಾದಕ್ಕಾಗಿ ನಾನು ದೇಶದ ಜನರಿಗೆ ಋಣಿ. ಇಂದು ಮಂಗಳಕರ ದಿನ, ಈ ಪಾವನ ದಿನದಂದು ಮೂರನೇ ಬಾರಿ ಸರ್ಕಾರ ರಚನೆಗೆ ತಯಾರಿದೆ. ನಾವೆಲ್ಲರೂ ಜನರಿಗೆ ಅಭಾರಿಯಾಗಿದ್ದೇವೆ. ದೇಶದ ಜನರು ಬಿಜೆಪಿ, ಎನ್ಡಿಎ ಮೇಲೆ ಪೂರ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಈ ವಿಜಯ ಪ್ರಪಂಚದ ಅತಿದೊಡ್ಡ ಪ್ರಜಾಪ್ರಭುತ್ವ ಜಯ. ಇದು ವಿಕಸಿತ ಭಾರತದ ಜಯ. ಇದು ಸಬ್ ಕಾ ಸಾಥ್, ಸಬ್ ಕಾ ವಿಕಾಸ್ಗೆ ಸಿಕ್ಕ ಜಯ. 140 ಕೋಟಿ ಜನರ ಗೆಲುವಾಗಿದೆ ಎಂದು ನಮಿಸಿದರು.
ನಾನು ಚುನಾವಣಾ ಆಯೋಗಕ್ಕೂ ಅಭಿನಂಧನೆ ಸಲ್ಲಿಸುತ್ತೇನೆ. ವಿಶ್ವದ ದೊಡ್ಡ ಚುನಾವಣೆಯನ್ನು ಅಚ್ಚುಕಟ್ಟಾಗಿ ಮಾಡಿದೆ. ನೂರು ಕೋಟಿ ಮತದಾರರು, 11 ಕೋಟಿ ಬೂತ್, 55 ವೋಟಿಂಗ್ ಮಷಿನ್, ತೀವ್ರ ಬಿಸಿಲಿನ ನಡುವೆ ಕರ್ತವ್ಯ ನಿಭಾಯಿಸಿದ್ದಾರೆ. ಭದ್ರತಾ ಪಡೆಗಳು ನಿಷ್ಠೆಯಿಂದ ಕೆಲಸ ಮಾಡಿವೆ. ಚುನಾವಣೆಯ ಪೂರ್ಣ ವ್ಯವಸ್ಥೆ, ಎಲ್ಲ ಭಾರತೀಯರಿಗೆ ಹೆಮ್ಮೆ ಪಡುವ ಸಂಗತಿ. ಇದಕ್ಕೆ ವಿಶ್ವದಲ್ಲಿ ಮತ್ತೇಲ್ಲಿ ಉದಾಹರಣೆ ಇಲ್ಲ ಎಂದು ಸ್ಮರಿಸಿದರು.
ಜಮ್ಮು ಕಾಶ್ಮೀರದ ಮತದಾರರು ದಾಖಲೆಯ ಮತದಾನದ ಮೂಲಕ ಉತ್ಸಾಹ ತೋರಿದ್ದಾರೆ. ಈ ವಿಜಯದ ದಿನದಂದು ದೇಶದ ಜನರಿಗೆ, ಎಲ್ಲ ಪಕ್ಷಗಳು ಮತ್ತು ಅಭ್ಯರ್ಥಿಗಳಿಗೂ ಅಭಿನಂದನೆ ಸಲ್ಲಿಸುತ್ತೇನೆ. 1962 ನಂತರ ಯಾವುದೇ ಪಕ್ಷ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದಿರಲಿಲ್ಲ. ಮೊದಲ ಬಾರಿಗೆ ಎರಡು ಅವಧಿಯ ಬಳಿಕ ಮೂರನೇ ಬಾರಿಗೆ ನಮ್ಮ ಪಕ್ಷ ಅಧಿಕಾರಕ್ಕೆ ಬಂದಿದೆ. ವಿಧಾನಸಭೆ ಚುನಾವಣೆಗಳಲ್ಲಿ ಎನ್ಡಿಎಗೆ ಭವ್ಯ ವಿಜಯ ಸಿಕ್ಕಿದೆ. ಅರುಣಾಚಲ, ಆಂಧ್ರಪ್ರದೇಶ, ಒಡಿಶಾ, ಸಿಕ್ಕಿಂನಲ್ಲಿ ಕಾಂಗ್ರೆಸ್ ನಾಶವಾಗಿದೆ. ಅವರಿಗೆ ಠೇವಣಿ ಪಡೆಯುವುದು ಕಷ್ಟವಾಗಿದೆ. ಬಿಜೆಪಿ ಒಡಿಶಾದಲ್ಲಿ ಸರ್ಕಾರ ಮಾಡುತ್ತಿದೆ. ಜಗನ್ನಾಥನ ಕೃಪೆಯಿಂದ ಒಡಿಶಾದಲ್ಲಿ ಬಿಜೆಪಿ ಸರ್ಕಾರ ರಚನೆಯಾಗುತ್ತಿದೆ. ಕೇರಳದಲ್ಲಿ ಮೊದಲ ಬಾರಿಗೆ ಗೆಲುವು ಸಾಧಿಸಿದ್ದೇವೆ. ಕೇರಳದಲ್ಲಿ ಸೇವೆ ಜೊತೆಗೆ ನಮ್ಮ ಕಾರ್ಯಕರ್ತರು ಸಂಘರ್ಷ ಮಾಡಿದ್ದಾರೆ ಎಂದು ಹೇಳಿದರು.
ಗೃಹಲಕ್ಷ್ಮಿ 32ನೇ ಕಂತಿನ ಹಣ 2443 ಕೋಟಿ ರೂ. ಬಿಡುಗಡೆ ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯಡಿ 32ನೇ ಕಂತಿನ ಹಣ ಬಿಡುಗಡೆಯಾಗಿದೆ.…
ನನ್ನ ಅವಶ್ಯಕತೆ ಇರಲಿಲ್ಲವೇನೋ ಅದಕ್ಕೆ ಕೊನೆ ಕ್ಷಣದಲ್ಲಿ ಕೈಬಿಟ್ಟರು: ಮಂಕಾಳ ವೈದ್ಯ ಅಸಮಾಧಾನ ಮೈಸೂರು: ನನ್ನ ಅವಶ್ಯಕತೆ ಇರಲಿಲ್ಲವೇನೋ ?…
ಶಿರ್ವ: ರಸ್ತೆ ದಾಟಲು ನಿಂತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಸಾವು ಶಿರ್ವ : ರಸ್ತೆ ದಾಟಲು ನಿಂತಿದ್ದ…
ಕೊಟ್ಟಿಗೆಹಾರ: ಭೀಕರ ರಸ್ತೆ ಅಪಘಾತ ; ಲಾರಿಗೆ ಕಾರು ಡಿಕ್ಕಿ: ಮೂವರು ಸ್ಥಳದಲ್ಲೇ ಸಾವು ಕೊಟ್ಟಿಗೆಹಾರ: ವಿಲ್ಪುರಂ - ಮಂಗಳೂರು…
ಹೆಬ್ರಿ: ಚಲಿಸುತ್ತಿದ್ದ ಕಾರಿನ ಮೇಲೆ ಮರ ಬಿದ್ದು ಚಾಲಕ ಸ್ಥಳದಲ್ಲೇ ಮೃತ್ಯು ಉಡುಪಿ: ಚಲಿಸುತ್ತಿದ್ದ ಕಾರಿನ ಮೇಲೆ ಬೃಹತ್ ಮರವೊಂದು…
ಉಡುಪಿ: ಡೇವಿಡ್ ಡಿಸೋಜ ಕೊಲೆ ಪ್ರಕರಣ : ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿಗೆ ಯತ್ನ; ಶೂಟರ್ ಕಾಲಿಗೆ ಗುಂಡೇಟು…