Featured

ಮೂರನೇ ಹಂತದಲ್ಲಿ ತಾಂತ್ರಿಕ ದೋಷ : PSLV ಮಿಷನ್ ಉಡಾವಣೆ ವಿಫಲ – vishwanews24

ಮೂರನೇ ಹಂತದಲ್ಲಿ ತಾಂತ್ರಿಕ ದೋಷ : PSLV ಮಿಷನ್ ಉಡಾವಣೆ ವಿಫಲ

ಶ್ರೀಹರಿಕೋಟಾ: ಇಸ್ರೋದ ಮಹತ್ವಾಕಾಂಕ್ಷೆಯ PSLV C62 ರಾಕೆಟ್ ಉಡಾವಣೆಯ ಮೂರನೇ ಹಂತದಲ್ಲಿ ತಾಂತ್ರಿಕ ದೋಷ ಕಂಡುಬಂದು ರಾಕೆಟ್ ಪಥ ಬದಲಾಯಿಸಿದ್ದು, ಪಿಎಸ್‌ಎಲ್‌ವಿ ಮಿಷನ್ ಉಡಾವಣೆ ವಿಫಲವಾಗಿದೆ.

ಡಿಆರ್‌ಇಒದ ವ್ಯೂಹಾತ್ಮಕ ಉದ್ದೇಶಗಳಿಗಾಗಿ ಅಭಿವೃದ್ಧಿಪಡಿಸಲಾಗಿದ್ದ ಅನ್ವೇಶಾ/EOS – N1 ಹಾಗೂ 14 ಉಪಗ್ರಹಗಳನ್ನು ಹೊತ್ತುಕೊಂಡು ಪಿಎಸ್‌ಎಲ್‌ವಿ ಸಿ62 (PSLV C62) ರಾಕೆಟ್ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿAದ ಬೆಳಗ್ಗೆ 10:18ಕ್ಕೆ ಉಡಾವಣೆಗೊಂಡಿತ್ತು.

ಪಿಎಸ್‌ಎಲ್‌ವಿ-ಸಿ62 ರಾಕೆಟ್ ಆಂಧ್ರಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ 16 ಉಪಗ್ರಹಗಳನ್ನು ಹೊತ್ತು ಹೊರಟಿತ್ತು. ರಾಕೆಟ್ ಆರಂಭ ಚೆನ್ನಾಗಿಯೇ ಆಗಿತ್ತು. ಆದರೆ ಮೂರನೇ ಹಂತದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದರಿoದ ಈ ಮಿಷನ್ ಯಶಸ್ವಿಯಾಗಲಿಲ್ಲ ಎಂದು ಇಸ್ರೋ ತಿಳಿಸಿದೆ.

“ಇಂದು, ನಾವು PSLV C62 / EOS – N1 ಮಿಷನ್ ಅನ್ನು ಪ್ರಯತ್ನಿಸಿದ್ದೇವೆ. PSLV ರಾಕೆಟ್ ಎರಡು ಘನ ಮತ್ತು ಎರಡು ದ್ರವ ಹಂತಗಳನ್ನು ಹೊಂದಿರುವ ನಾಲ್ಕು ಹಂತದ ರಾಕೆಟ್‌ನ ಮೂರನೇ ಹಂತದ ಅಂತ್ಯದ ವೇಳೆಗೆ ವಾಹನದ ಕಾರ್ಯಕ್ಷಮತೆ ನಿರೀಕ್ಷೆಯಂತೆ ಇತ್ತು. ಆದರೆ ಮೂರನೇ ಹಂತದ ಅಂತ್ಯದ ವೇಳೆಗೆ ರಾಕೆಟ್‌ನಲ್ಲಿ ಸಮಸ್ಯೆ ಕಾಣಿಸಿ ತನ್ನ ಪಥದಲ್ಲಿ ಬದಲಾವಣೆ ಮಾಡಿತು. ನಾವು ಡೇಟಾವನ್ನು ವಿಶ್ಲೇಶಿಸಿ ಶೀಘ್ರವೇ ನಿಖರ ಕಾರಣವನ್ನು ಪತ್ತೆ ಮಾಡುತ್ತೇವೆ” ಎಂದು ಇಸ್ರೋ ಅಧ್ಯಕ್ಷ ವಿ ನಾರಾಯಣನ್ ತಿಳಿಸಿದ್ದಾರೆ.

Vishwa News 24

Recent Posts

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ – vishwanews24

ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್‌ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…

59 minutes ago

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ – vishwanews24

ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು  :…

1 hour ago

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ  – vishwanews24

ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…

1 hour ago

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ – vishwanews24

ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…

2 hours ago

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ – vishwanews24

ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್‌ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್‌ಪೋರ್ಟ್…

2 hours ago

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು – vishwanews24

ದೆಹಲಿ-ಪುಣೆ ಸ್ಪೈಸ್‌ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್‌ಜೆಟ್ (Spice Jet) ವಿಮಾನದಲ್ಲಿ…

3 hours ago