Featured

ಮೂರನೇ ಹಂತದಲ್ಲಿ ತಾಂತ್ರಿಕ ದೋಷ : PSLV ಮಿಷನ್ ಉಡಾವಣೆ ವಿಫಲ – vishwanews24

ಮೂರನೇ ಹಂತದಲ್ಲಿ ತಾಂತ್ರಿಕ ದೋಷ : PSLV ಮಿಷನ್ ಉಡಾವಣೆ ವಿಫಲ

ಶ್ರೀಹರಿಕೋಟಾ: ಇಸ್ರೋದ ಮಹತ್ವಾಕಾಂಕ್ಷೆಯ PSLV C62 ರಾಕೆಟ್ ಉಡಾವಣೆಯ ಮೂರನೇ ಹಂತದಲ್ಲಿ ತಾಂತ್ರಿಕ ದೋಷ ಕಂಡುಬಂದು ರಾಕೆಟ್ ಪಥ ಬದಲಾಯಿಸಿದ್ದು, ಪಿಎಸ್‌ಎಲ್‌ವಿ ಮಿಷನ್ ಉಡಾವಣೆ ವಿಫಲವಾಗಿದೆ.

ಡಿಆರ್‌ಇಒದ ವ್ಯೂಹಾತ್ಮಕ ಉದ್ದೇಶಗಳಿಗಾಗಿ ಅಭಿವೃದ್ಧಿಪಡಿಸಲಾಗಿದ್ದ ಅನ್ವೇಶಾ/EOS – N1 ಹಾಗೂ 14 ಉಪಗ್ರಹಗಳನ್ನು ಹೊತ್ತುಕೊಂಡು ಪಿಎಸ್‌ಎಲ್‌ವಿ ಸಿ62 (PSLV C62) ರಾಕೆಟ್ ಶ್ರೀಹರಿಕೋಟಾದ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿAದ ಬೆಳಗ್ಗೆ 10:18ಕ್ಕೆ ಉಡಾವಣೆಗೊಂಡಿತ್ತು.

ಪಿಎಸ್‌ಎಲ್‌ವಿ-ಸಿ62 ರಾಕೆಟ್ ಆಂಧ್ರಪ್ರದೇಶದ ಶ್ರೀಹರಿಕೋಟದಲ್ಲಿರುವ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ 16 ಉಪಗ್ರಹಗಳನ್ನು ಹೊತ್ತು ಹೊರಟಿತ್ತು. ರಾಕೆಟ್ ಆರಂಭ ಚೆನ್ನಾಗಿಯೇ ಆಗಿತ್ತು. ಆದರೆ ಮೂರನೇ ಹಂತದಲ್ಲಿ ತಾಂತ್ರಿಕ ದೋಷ ಕಂಡು ಬಂದಿದ್ದರಿoದ ಈ ಮಿಷನ್ ಯಶಸ್ವಿಯಾಗಲಿಲ್ಲ ಎಂದು ಇಸ್ರೋ ತಿಳಿಸಿದೆ.

“ಇಂದು, ನಾವು PSLV C62 / EOS – N1 ಮಿಷನ್ ಅನ್ನು ಪ್ರಯತ್ನಿಸಿದ್ದೇವೆ. PSLV ರಾಕೆಟ್ ಎರಡು ಘನ ಮತ್ತು ಎರಡು ದ್ರವ ಹಂತಗಳನ್ನು ಹೊಂದಿರುವ ನಾಲ್ಕು ಹಂತದ ರಾಕೆಟ್‌ನ ಮೂರನೇ ಹಂತದ ಅಂತ್ಯದ ವೇಳೆಗೆ ವಾಹನದ ಕಾರ್ಯಕ್ಷಮತೆ ನಿರೀಕ್ಷೆಯಂತೆ ಇತ್ತು. ಆದರೆ ಮೂರನೇ ಹಂತದ ಅಂತ್ಯದ ವೇಳೆಗೆ ರಾಕೆಟ್‌ನಲ್ಲಿ ಸಮಸ್ಯೆ ಕಾಣಿಸಿ ತನ್ನ ಪಥದಲ್ಲಿ ಬದಲಾವಣೆ ಮಾಡಿತು. ನಾವು ಡೇಟಾವನ್ನು ವಿಶ್ಲೇಶಿಸಿ ಶೀಘ್ರವೇ ನಿಖರ ಕಾರಣವನ್ನು ಪತ್ತೆ ಮಾಡುತ್ತೇವೆ” ಎಂದು ಇಸ್ರೋ ಅಧ್ಯಕ್ಷ ವಿ ನಾರಾಯಣನ್ ತಿಳಿಸಿದ್ದಾರೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

4 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

4 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

4 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

4 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

4 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

4 days ago