ದಕ್ಷಿಣ ಕನ್ನಡ

ಮೂರು ಜನರಿಂದ ನಾಲ್ಕನೇ ತರಗತಿ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ, ಬಂಟ್ವಾಳದಲ್ಲಿ ನಡೆಯಿತು ಕಣ್ಣಿರು ತರಿಸುವ ಘಟನೆ

ಸಂತ್ರಸ್ತೆ  ದೂರಿನಲ್ಲಿ ಆಘಾತಕಾರಿ ಆರೋಪಗಳು

ಬಂಟ್ವಾಳ, : ನನ್ನೊಂದಿಗಿದ್ದ ಇತರ ಮಕ್ಕಳನ್ನು ಬಿಟ್ಟು ನನ್ನನ್ನು ಮಾತ್ರ ಮನೆಯ ಮಾಳಿಗೆಗೆ ಹಾಗೂ ಹೊಸ ಕಟ್ಟಡಕ್ಕೆ ಕರೆದುಕೊಂಡು ಹೋಗಿ ಧರಿಸಿದ್ದ ವಸ್ತ್ರವನ್ನು ಬಿಚ್ಚಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ ಎಂದು ಬುಧವಾರ ಬೆಳಕಿಗೆ ಬಂದ ಗೂಡಿನಬಳಿ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಬಾಲಕಿ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾಳೆ.

ಈಕೆ ತಾಲೂಕಿನ ಖಾಸಗಿ ಶಾಲೆಯೊಂದರ ನಾಲ್ಕನೆ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಾಳೆ.

ಆರೋಪ ೧: 
ಗೂಡಿನಬಳಿಯಲ್ಲಿರುವ ತನ್ನ ಅಜ್ಜಿ ಮನೆಗೆ ಬಂದಿದ್ದ ವೇಳೆ ನೆರೆಕರೆಯ ಮಕ್ಕಳೊಂದಿಗೆ ಸೇರಿ ಅಲ್ಲೇ ಸಮೀಪದ ಅಬೂಬಕರ್ ಎಂಬವರ ಬಾಡಿಗೆ ಮನೆಯಲ್ಲಿ ವಾಸ್ತವ್ಯವಿರುವ ಅಂಬಾರಿ ರಝಾಕ್ ಎಂಬಾತನ ಮನೆಗೆ ಹೋಗಿದ್ದೆ. ಈ ವೇಳೆ ರಝಾಕ್ ಜೊತೆಗಿದ್ದ ಇತರ ಮಕ್ಕಳನ್ನು ಬಿಟ್ಟು ನನ್ನನ್ನು ಮಾತ್ರ ಮನೆಯ ಮಾಳಿಗೆಗೆ ಕರೆದುಕೊಂಡು ಹೋಗಿ ಧರಿಸಿದ್ದ ವಸ್ತ್ರವನ್ನು ಬಿಚ್ಚಿ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎಂದು ಸಂತ್ರಸ್ತೆ ಬಾಲಕಿ ಪೊಲೀಸ್ ದೂರಿನಲ್ಲಿ ತಿಳಿಸಿದ್ದಾಳೆ.

ಆರೋಪ 2: 
ಇದಲ್ಲದೆ ಅಲ್ಲೇ ಪಕ್ಕದ ನಿವಾಸಿ ಗುಜರಿ ವ್ಯಾಪಾರಿ ಶೇಕಬ್ಬ ಎಂಬಾತ ಗುಜರಿ ತೆಗೆಯಲಿಕ್ಕಿದೆ ಎಂದು ಹೇಳಿ ಹೊಸ ಕಟ್ಟಡವೊಂದಕ್ಕೆ ಕರೆದುಕೊಂಡು ಹೋಗಿ ಆತನೂ ಲೈಂಗಿಕವಾಗಿ ಬಳಸಿಕೊಂಡಿದ್ದಾನೆ ಎಂದು ಬಾಲಕಿ ಪೊಲೀಸರಿಗೆ ತಿಳಿಸಿದ್ದಾಳೆ.

ಆರೋಪ 3: 
ಹಸನಬ್ಬ ಎಂಬವರ ಪುತ್ರ ಹೊಟೇಲ್ ಕಾರ್ಮಿಕ ನವಾಝ್ ಎಂಬಾತನು ನನ್ನನ್ನು ಹತ್ತಿರ ಕರೆದು ಆತನ ಜನನಾಂಗವನ್ನು ನನಗೆ ತೋರಿಸಿ ಅಸಭ್ಯವಾಗಿ ವರ್ತಿಸಿದ್ದಾನೆ ಎಂದು ಸಂತ್ರಸ್ತೆ ಬಾಲಕಿ ಪೊಲೀಸರಿಗೆ ತಿಳಿಸಿದ್ದಾಳೆ.

ಯಾರಲ್ಲಾದರೂ ತಿಳಿಸಿದರೆ ಕೈ ಕಾಲು ಮುರಿಯುತ್ತೇವೆ

ದುಷ್ಕರ್ಮಿಗಳು ಅತ್ಯಾಚಾರ ಎಸಗಿದ ಬಳಿಕ ಯಾರಲ್ಲೂ ವಿಷಯ ತಿಳಿಸಿದಂತೆ ಬಾಲಕಿಯನ್ನು ಬೆದರಿಸಿದರೆನ್ನಲಾಗಿದೆ. ಈ ವಿಷಯವನ್ನು ಯಾರಲ್ಲಾದರೂ ತಿಳಿಸಿದರೆ ಹೊಡೆದು ಕೈ ಕಾಲು ಮುರಿದು ಹಾಕುತ್ತೇವೆ ಎಂಬಿತ್ಯಾದಿಯಾಗಿ ಆರೋಪಿಗಳಾದ ರಝಾಕ್ ಹಾಗೂ ಶೇಕಬ್ಬ ಬೆದರಿಕೆ ಒಡ್ಡಿದ್ದರು ಎಂದು ಸಂತ್ರಸ್ತ ಬಾಲಕಿ ಪೊಲೀಸರೊಂದಿಗೆ ಹೇಳಿಕೊಂಡಿದ್ದಾಳೆ.

ಬಾಲಕಿಯ ವರ್ತನೆಯಲ್ಲಿ ಬದಲಾವಣೆ: 
ಇತ್ತೀಚೆಗೆ ಬಾಲಕಿಯ ವರ್ತನೆ ಹಾಗೂ ದೇಹದಲ್ಲಿ ಉಂಟಾದ ಕೆಲವೊಂದು ಬೆಳವಣಿಗೆಗಳನ್ನು ಗಮನಿಸಿ ಮನೆ ಮಂದಿ ಆಕೆಯನ್ನು ಆಸ್ಪತ್ರೆಗೆ ದಾಖಲಿಸಿದ್ದರು. ಈ ವೇಳೆ ಕೃತ್ಯಗಳು ಬೆಳಕಿಗೆ ಬಂದಿವೆ.

ಸೂಕ್ತ ಕ್ರಮ: ಬಂಟ್ವಾಳ ಎಸ್ಸೈ 
ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ವಶಕ್ಕೆ ಪಡೆದಿರುವ ಆರೋಪಿಗಳ ವಿಚಾರಣೆ ನಡೆಸಲಾಗುತ್ತಿದೆ. ವಿಚಾರಣೆಯ ಬಳಿಕ ಪೊಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿ ಸೂಕ್ತ ಕ್ರಮ ಕೈಗೊಳ್ಳುವುದು ಎಂದು ಬಂಟ್ವಾಳ ನಗರ ಠಾಣಾ ಎಸ್ಸೈ ಚಂದ್ರಶೇಖರ್ ತಿಳಿಸಿದ್ದಾರೆ.

ಮೂವರು ವಶಕ್ಕೆ:

ಬಾಲಕಿಯ ಹೇಳಿಕೆ ಪಡೆದುಕೊಂಡು ಕ್ಷಿಪ್ರ ಕಾರ್ಯಾಚರಣೆ ನಡೆಸಿದ ಬಂಟ್ವಾಳ ನಗರ ಪೊಲೀಸರು ಮೂವರೂ ಆರೋಪಿಗಳನ್ನು ಬುಧವಾರ ರಾತ್ರಿ ವಶಕ್ಕೆ ಪಡೆಡಿದ್ದಾರೆ.
ಗೂಡಿನಬಳಿಯ ನಿವಾಸಿ ಗುಜರಿ ವ್ಯಾಪಾರಿ ಶೇಕಬ್ಬ(65), ಬೇಕರಿ ಸಾಮಗ್ರಿಗಳನ್ನು ಲೈನ್ ಸೇಲ್ ಮಾಡುವ ಅಂಬಾರಿ ಯಾನೆ ರಝಾಕ್ (35) ಹಾಗೂ ಹೊಟೇಲ್‌ ಕಾರ್ಮಿಕ ನವಾಝ್ (22) ಪೊಲೀಸ್ ವಶದಲ್ಲಿರುವ ದೌರ್ಜನ್ಯ ಪ್ರಕರಣದ ದ ಆರೋಪಿಗಳು.

Vishwa News 24

Recent Posts

ಎಸ್‌ಟಿಪಿಯನ್ನು ಮೂಳೂರಿನಿಂದ ಬೆಳಪು ಪ್ರದೇಶಕ್ಕೆ ಸ್ಥಳಾಂತರ ಮಾಡಿದರೆ ಕಾಪು ಪುರಸಭೆಗೆ ಸಂಪೂರ್ಣ ಸ್ವಾಗತ : ದೇವಿಪ್ರಸಾದ್ ಶೆಟ್ಟಿ – vishwanews24

ಬೆಳಪು ಪ್ರದೇಶದಲ್ಲಿ ಎಲ್ಲಾ ಅಗತ್ಯ ಸೌಲಭ್ಯಗಳೊಂದಿಗೆ ಘಟಕ ನಿರ್ಮಿಸಿದರೆ ನಮ್ಮಿಂದ ಯಾವುದೇ ವಿರೋಧ ಇರುವುದಿಲ್ಲ : ದೇವಿಪ್ರಸಾದ್ ಶೆಟ್ಟಿ ಮೂಳೂರು…

2 days ago

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ – vishwanews24

ಪ್ರಿಯಕರನ ಜೊತೆ ಸೇರಿ ಗಂಡನ ಮನೆಗೆ ಕನ್ನಹಾಕಿದ ಪತ್ನಿ; 21 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನ ಬೆಳಗಾವಿ: ಪ್ರಿಯಕರನ ಜೊತೆ…

2 days ago

ಬಿಜೆಪಿ ನಡೆಸಿರುವ ಅಪವಿತ್ರ ಮೈತ್ರಿ ಇತಿಹಾಸವನ್ನು ದೇಶ ಮರೆತಿಲ್ಲ : ಬಿ.ಕೆ.ಹರಿಪ್ರಸಾದ್ – vishwanews24

ದೇಶದ ಜಾತ್ಯತೀತ ಮೌಲ್ಯಗಳನ್ನು ರಕ್ಷಿಸಲು ಕಾಂಗ್ರೆಸ್ ಪಕ್ಷ ಸದಾ ಸಮಾನ ಚಿಂತನೆಯ ಪಕ್ಷಗಳೊಂದಿಗೆ ಕೈಜೋಡಿಸಿದೆ : ಬಿ.ಕೆ.ಹರಿಪ್ರಸಾದ್ ಬೆಂಗಳೂರು: ‘ಬಿಜೆಪಿ…

2 days ago

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ – vishwanews24

ಪಡುಬಿದ್ರಿ: ಕಿಶೋರ್ ಆಳ್ವ ಅವರಿಗೆ ಪ್ರತಿಷ್ಠಿತ ಮಹಾತ್ಮ ಗಾಂಧಿ ಸಬರಮತಿ ಸಂತ ಪ್ರಶಸ್ತಿ ಪ್ರದಾನ ಪಡುಬಿದ್ರಿ: ಸನಾತನ ಫೌಂಡೇಶನ್‌ನ ಅಧ್ಯಕ್ಷ,…

2 days ago

ವಿವಾಹಿತ ಮಹಿಳೆ  ಜತೆ ಲಿವ್ ಇನ್ ರಿಲೇಶನ್‌ ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  – vishwanews24

ವಿವಾಹಿತ ಮಹಿಳೆ ಜತೆ ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ಶವವಾಗಿ ಪತ್ತೆ  ಬೆಂಗಳೂರು: ಲಿವ್ ಇನ್ ರಿಲೇಶನ್‌ಶಿಪ್‌ನಲ್ಲಿದ್ದ ಯುವಕ ನೇಣುಬಿಗಿದ…

2 days ago

ಬಿಜೆಪಿ ನಾಯಕ ಸುವೇಂದು ಅಧಿಕಾರಿ ಬಂಗಾಳದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ – vishwanews24

ಪಶ್ಚಿಮ ಬಂಗಾಳದ ರಾಜಕೀಯ ಇತಿಹಾಸದಲ್ಲಿ ಹೊಸ ಪರ್ವ.. ಬಿಜೆಪಿ ಮೊದಲ ಸಿಎಂ ಆಗಿ ಪ್ರಮಾಣ ಸ್ವೀಕಾರ.. ಐತಿಹಾಸಿಕ ಕ್ಷಣಕ್ಕೆ ಮೋದಿ,…

2 days ago