ಕೊಪ್ಪಳ: ಎಲ್ಲ ಪಕ್ಷಗಳು ಒಂದಾಗಿ ಸರಕಾರ ರಚಿಸಲಿ. ಕರ್ನಾಟಕದಲ್ಲಿ ಮತ್ತೆ ಚುನಾವಣೆ ಆಗಬಾರದು ಎಂದು ಎಂದು ಉಡುಪಿಯ ಪೇಜಾವರ ಮಠಾಧೀಶರಾದ ವಿಶ್ವೇಶ್ವರ ತೀರ್ಥ ಶ್ರೀಗಳು ಹೇಳಿದ್ದಾರೆ..
ಎಲ್ಲರೂ ಅಧಿಕಾರಕ್ಕೆ ಪ್ರಯತ್ನ ಮಾಡುತ್ತಿದ್ದಾರೆ. ಮೂರೂ ಪಕ್ಷಗಳು ಜಗಳವಾಡಿಕೊಂಡಿವೆ. ಬಿಜೆಪಿ ಹಿಂದೂಪರ ಇದೆ ಎಂದು ವಿರೋಧಿಸಿ ಎರಡು ಪಕ್ಷಗಳು ಮೈತ್ರಿ ಸರ್ಕಾರ ಮಾಡಿಕೊಂಡಿವೆ. ಈಗ ಈ ಸರ್ಕಾರದಲ್ಲೂ ಜಗಳವಾಗಿದೆ. ಬಿಜೆಪಿ ಸರ್ಕಾರ ಬಂದರೂ ಈ ಸಮಸ್ಯೆ ನಿಂತು ಹೋಗುವುದಿಲ್ಲ. ಈ ಸ್ಥಿತಿಯಲ್ಲಿ ಸರ್ವಪಕ್ಷಗಳ ಆಡಳಿತವೇ ಸರಿಯಾದ ಕ್ರಮ ಎಂದು ಶ್ರೀಗಳು ಪ್ರತಿಪಾದಿಸಿದ್ದಾರೆ.
ಬಹುಮತ ಇಲ್ಲದಿದ್ದಾಗ ಯಾವಾಗಲೂ ಪಕ್ಷಾಂತರದ ಭಯ ಇದ್ದೇ ಇರುತ್ತದೆ. ರಾಜೀನಾಮೆ ಕೊಡುವುದು ಮತ್ತು ಅದೇ ಸ್ಥಾನಕ್ಕೆ ಮತ್ತೆ ಚುನಾವಣೆ ನಡೆಯುವುದು ಇರುತ್ತದೆ. ಆಗ ಅಭಿವೃದ್ಧಿ ಸಾಧ್ಯವಾಗುವುದಿಲ್ಲ. ಬಿಜೆಪಿಯವರು ಸರ್ಕಾರ ರಚಿಸಿದರೂ ಭದ್ರ ಎಂದು ಹೇಳಲು ಆಗುವುದಿಲ್ಲ. ಅಲ್ಲಿಯೂ ಈ ಸಮಸ್ಯೆ ಪ್ರಾರಂಭವಾಗುತ್ತದೆ. ರೆಸಾರ್ಟ್ ರಾಜಕೀಯ ಮತ್ತೆ ನಡೆಯುತ್ತದೆ. ಎಲ್ಲರನ್ನೂ ಮಂತ್ರಿ ಮಾಡೋಕೆ ಸಾಧ್ಯವಿಲ್ಲ ಎಂದು ವಿಶ್ವೇಶ್ವರ ತೀರ್ಥ ಸ್ವಾಮಿಗಳು ಅಭಿಪ್ರಾಯಪಟ್ಟಿದ್ದಾರೆ.
ಬಿಜೆಪಿಯೂ ಸಹ ಜಾತ್ಯತೀತ ಪಕ್ಷವಾಗಿದೆ. ಮೂರು ಪಕ್ಷಗಳು ಒಂದಾಗಿ ಸರ್ಕಾರ ಮಾಡಬಹುದು. ಇಂಥ ಸಂದರ್ಭದಲ್ಲಿ ವಿಪಕ್ಷವಿಲ್ಲದೆ ಸರ್ಕಾರ ಮಾಡಿದರೆ ರಾಜ್ಯದ ಅಭಿವೃದ್ಧಿ ಆಗುತ್ತದೆ. ಒಂದು ಪೂರ್ಣ ಬಹುಮತದ ಸರ್ಕಾರ ಇರಬೇಕು. ಇಲ್ಲವೇ ಎಲ್ಲಾ ಪಕ್ಷಗಳ ಸರ್ಕಾರ ಇರಬೇಕು ಎಂದು ಪೇಜವಾರಶ್ರೀಗಳು ಹೇಳಿದ್ಧಾರೆ.
ಈ ಹಿಂದೆ ಚುನಾವಣೆಗೆ ಮುನ್ನ ಎಲ್ಲ ಪಕ್ಷಗಳು ಬೈದಾಡಿಕೊಂಡಿದೆ. ವಾಕ್ಸಮರ ನಡೆಸಿದೆ. ನಂತರ ಒಂದಾಗಿ ಸರಕಾರ ರಚಿಸಿದೆ. ಈಗಲೂ ಜಗಳ ಮುಂದುವರಿದಿದೆ. ಹೀಗಾಗಿ ಎಲ್ಲ ಪಕ್ಷಗಳು ಒಂದಾಗಿ ಸರಕಾರ ರಚಿಸಲಿ ಎಂದು ಶ್ರೀಗಳು ಸಲಹೆ ನೀಡಿದ್ದಾರೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…