ಕೊಪ್ಪಳ: ಎಲ್ಲ ಪಕ್ಷಗಳು ಒಂದಾಗಿ ಸರಕಾರ ರಚಿಸಲಿ. ಕರ್ನಾಟಕದಲ್ಲಿ ಮತ್ತೆ ಚುನಾವಣೆ ಆಗಬಾರದು ಎಂದು ಎಂದು ಉಡುಪಿಯ ಪೇಜಾವರ ಮಠಾಧೀಶರಾದ ವಿಶ್ವೇಶ್ವರ ತೀರ್ಥ ಶ್ರೀಗಳು ಹೇಳಿದ್ದಾರೆ..
ಎಲ್ಲರೂ ಅಧಿಕಾರಕ್ಕೆ ಪ್ರಯತ್ನ ಮಾಡುತ್ತಿದ್ದಾರೆ. ಮೂರೂ ಪಕ್ಷಗಳು ಜಗಳವಾಡಿಕೊಂಡಿವೆ. ಬಿಜೆಪಿ ಹಿಂದೂಪರ ಇದೆ ಎಂದು ವಿರೋಧಿಸಿ ಎರಡು ಪಕ್ಷಗಳು ಮೈತ್ರಿ ಸರ್ಕಾರ ಮಾಡಿಕೊಂಡಿವೆ. ಈಗ ಈ ಸರ್ಕಾರದಲ್ಲೂ ಜಗಳವಾಗಿದೆ. ಬಿಜೆಪಿ ಸರ್ಕಾರ ಬಂದರೂ ಈ ಸಮಸ್ಯೆ ನಿಂತು ಹೋಗುವುದಿಲ್ಲ. ಈ ಸ್ಥಿತಿಯಲ್ಲಿ ಸರ್ವಪಕ್ಷಗಳ ಆಡಳಿತವೇ ಸರಿಯಾದ ಕ್ರಮ ಎಂದು ಶ್ರೀಗಳು ಪ್ರತಿಪಾದಿಸಿದ್ದಾರೆ.
ಬಹುಮತ ಇಲ್ಲದಿದ್ದಾಗ ಯಾವಾಗಲೂ ಪಕ್ಷಾಂತರದ ಭಯ ಇದ್ದೇ ಇರುತ್ತದೆ. ರಾಜೀನಾಮೆ ಕೊಡುವುದು ಮತ್ತು ಅದೇ ಸ್ಥಾನಕ್ಕೆ ಮತ್ತೆ ಚುನಾವಣೆ ನಡೆಯುವುದು ಇರುತ್ತದೆ. ಆಗ ಅಭಿವೃದ್ಧಿ ಸಾಧ್ಯವಾಗುವುದಿಲ್ಲ. ಬಿಜೆಪಿಯವರು ಸರ್ಕಾರ ರಚಿಸಿದರೂ ಭದ್ರ ಎಂದು ಹೇಳಲು ಆಗುವುದಿಲ್ಲ. ಅಲ್ಲಿಯೂ ಈ ಸಮಸ್ಯೆ ಪ್ರಾರಂಭವಾಗುತ್ತದೆ. ರೆಸಾರ್ಟ್ ರಾಜಕೀಯ ಮತ್ತೆ ನಡೆಯುತ್ತದೆ. ಎಲ್ಲರನ್ನೂ ಮಂತ್ರಿ ಮಾಡೋಕೆ ಸಾಧ್ಯವಿಲ್ಲ ಎಂದು ವಿಶ್ವೇಶ್ವರ ತೀರ್ಥ ಸ್ವಾಮಿಗಳು ಅಭಿಪ್ರಾಯಪಟ್ಟಿದ್ದಾರೆ.
ಬಿಜೆಪಿಯೂ ಸಹ ಜಾತ್ಯತೀತ ಪಕ್ಷವಾಗಿದೆ. ಮೂರು ಪಕ್ಷಗಳು ಒಂದಾಗಿ ಸರ್ಕಾರ ಮಾಡಬಹುದು. ಇಂಥ ಸಂದರ್ಭದಲ್ಲಿ ವಿಪಕ್ಷವಿಲ್ಲದೆ ಸರ್ಕಾರ ಮಾಡಿದರೆ ರಾಜ್ಯದ ಅಭಿವೃದ್ಧಿ ಆಗುತ್ತದೆ. ಒಂದು ಪೂರ್ಣ ಬಹುಮತದ ಸರ್ಕಾರ ಇರಬೇಕು. ಇಲ್ಲವೇ ಎಲ್ಲಾ ಪಕ್ಷಗಳ ಸರ್ಕಾರ ಇರಬೇಕು ಎಂದು ಪೇಜವಾರಶ್ರೀಗಳು ಹೇಳಿದ್ಧಾರೆ.
ಈ ಹಿಂದೆ ಚುನಾವಣೆಗೆ ಮುನ್ನ ಎಲ್ಲ ಪಕ್ಷಗಳು ಬೈದಾಡಿಕೊಂಡಿದೆ. ವಾಕ್ಸಮರ ನಡೆಸಿದೆ. ನಂತರ ಒಂದಾಗಿ ಸರಕಾರ ರಚಿಸಿದೆ. ಈಗಲೂ ಜಗಳ ಮುಂದುವರಿದಿದೆ. ಹೀಗಾಗಿ ಎಲ್ಲ ಪಕ್ಷಗಳು ಒಂದಾಗಿ ಸರಕಾರ ರಚಿಸಲಿ ಎಂದು ಶ್ರೀಗಳು ಸಲಹೆ ನೀಡಿದ್ದಾರೆ.
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…
ಪರಪ್ಪನ ಅಗ್ರಹಾರ ಕಾರಾಗೃಹದ ಮೇಲೆ ಸಿಸಿಬಿ ದಾಳಿ ಮಾಡಿಸಿದ್ದು ನಾನೇ .. ಜೈಲಿನಲ್ಲಿನ ಕೆಲವು ಅಧಿಕಾರಿಗಳು ತಮ್ಮ ಹಳೆಯ ಚಾಳಿ…
ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ ತೆರಳಿದ್ದ 8ನೇ ತರಗತಿ ವಿದ್ಯಾರ್ಥಿ ನೀರಿನಲ್ಲಿ ಮುಳುಗಿ ಸಾವು ಕಾಸರಗೋಡು: ಸ್ನೇಹಿತರೊಂದಿಗೆ ಕೆರೆಗೆ ಸ್ನಾನಕ್ಕೆ…
ರಾಜ್ಯಾದ್ಯಂತ 1 ವರ್ಷ ಗುಟ್ಕಾ, ಪಾನ್ ಮಸಾಲಾ ಮಾರಾಟ ನಿಷೇಧ ಬೆಂಗಳೂರು: ಕರ್ನಾಟಕ ಸರ್ಕಾರವು ತಂಬಾಕು ಮತ್ತು ನಿಕೋಟಿನ್ ಹೊಂದಿರುವ…
ಉಡುಪಿ : ಶ್ರೀ ಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಅಣ್ಣಾಮಲೈ ಉಡುಪಿ: ಮಾಜಿ ಐಪಿಎಸ್ ಅಧಿಕಾರಿ…