ಕಲಬುರಗಿ: ಗಂಡ ಹೆಂಡತಿ ಮಧ್ಯೆ ಸಣ್ಣ ಮಾತಿನ ಚಕಮಕಿ ನಡೆದ ಬೆನ್ನಲ್ಲೇ ಸ್ವತಃ ತಾಯಿ ತನ್ನ ಮೂವರು ಮಕ್ಕಳಿಗೆ ಜ್ಯೂಸ್ ಬಾಟಲಿಯಲ್ಲಿ ವಿಷ ಬೆರೆಸಿ ಕುಡಿಸಿ, ತಾನೂ ವಿಷ ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಚಿಂಚೋಳಿ ತಾಲ್ಲೂಕಿನ ಜಂಗ್ಲಿಪೀರ್ ತಾಂಡಾದಲ್ಲಿ ನಡೆದಿದೆ.
ಗೀತಾಬಾಯಿ ಸಂತೋಷ್ ರಾಠೋಡ್ (30) ಗಂಡನ ಮೇಲಿನ ಸಿಟ್ಟಿಗೆ ಬೆಳೆಗಳಿಗೆ ಸಿಂಪಡಿಸುವ ಕ್ರಿಮಿನಾಶಕ ಸೇವಿಸಿ ಮಕ್ಕಳಾದ ಚೈತನ್ಯ (4) ಧನುಷ್ (3) ಲಕ್ಷ್ಮಿಗೆ (ಒಂದುವರೆ ತಿಂಗಳು) ಕುಡಿಸಿದ್ದಾಳೆ. ಈ ಪೈಕಿ ಹಸುಗೂಸು ಲಕ್ಷ್ಮಿ ಸ್ಥಿತಿ ಗಂಭೀರವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಕ್ಷುಲ್ಲಕ ಕಾರಣಗಳಿಗೆ ಗಂಡ-ಹೆಂಡತಿ ಮಧ್ಯೆ ಆಗಾಗ ಮಾತಿನ ಚಕಮಕಿ ನಡೆಯುತ್ತಿತ್ತು ಎನ್ನಲಾಗಿದೆ. ಈ ಮಧ್ಯೆ ಹೀಗೆ ಜಗಳ ನಡೆದ ಬಳಿಕ ಗೀತಾ ಮಕ್ಕಳಿಗೆ ಹೊಡೆದಾಗಲೆಲ್ಲಾ ಆತ ಪತ್ನಿಯನ್ನು ದಬಾಯಿಸುತ್ತಿದ್ದ ಎಂದು ಹೇಳಲಾಗಿದೆ. ಭಾನುವಾರ ಸಹ ಇದೇ ರೀತಿ ದಂಪತಿ ಮಧ್ಯೆ ಪರಸ್ಪರ ವಾಗ್ಯುದ್ಧ ನಡೆದ ಬಳಿಕ ಸಂತೋಷ್ ಹೊರಗೆ ಕೆಲಸಕ್ಕೆ ಹೋದ ನಂತರ ಗೀತಾ ಗಂಡನ ಮೇಲಿನ ಸಿಟ್ಟಿನಿಂದ ಮನನೊಂದು ಇಂತಹ ಕೃತ್ಯ ಎಸಗಿದ್ದಾಳೆ ಎಂದು ಹೇಳಲಾಗಿದೆ.
ವಿಷ ಕುಡಿದ ಬಳಿಕ ತೀವ್ರ ಸ್ವರೂಪದ ಹೊಟ್ಟೆ ನೋವು ಹಾಗೂ ಅಸಹನೀಯ ಸಂಕಟದಿಂದ ಮಕ್ಕಳು ಚೀರಾಡುತ್ತಿದ್ದರು. ಇದನ್ನು ಗಮನಿಸಿದ ನೆರೆಹೊರೆಯ ಮಂದಿ ಧಾವಿಸಿದಾಗ ಗೀತಾ ತಾನೂ ವಿಷ ಕುಡಿದು ಮಕ್ಕಳಿಗೂ ವಿಷ ಕುಡಿಸಿರುವುದು ಗೊತ್ತಾಯಿತು. ತಕ್ಷಣ ಆಕೆಯ ಪತಿ ಸಂತೋಷನಿಗೆ ಮಾಹಿತಿ ತಲುಪಿಸಿ ತಾಯಿ-ಮಕ್ಕಳನ್ನು ಚಿಂಚೋಳಿಯ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಎಲ್ಲರನ್ನೂ ಬೀದರ್ ಸರ್ಕಾರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ.
ಚಿಂಚೋಳಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ.
ಸುರತ್ಕಲ್ : ಪ್ರೀತಿಸುವುದಾಗಿ ನಂಬಿಸಿ ದೈಹಿಕ ಸಂಪರ್ಕ ಬೆಳೆಸಿ ವಂಚನೆ ಆರೋಪ: ಅಪ್ರಾಪ್ತೆ ಆತ್ಮಹತ್ಯೆ; ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು…
ರಾಜ್ಯ ಸರ್ಕಾರದಿಂದ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ ಶೋಕಾಸ್ ನೋಟಿಸ್ ಬೆಂಗಳೂರು: ರಾಜ್ಯ ಸರ್ಕಾರ 133 ಪ್ರಧಾನಮಂತ್ರಿ ಜನೌಷಧಿ ಕೇಂದ್ರಗಳಿಗೆ …
ಉಡುಪಿ: ಅಸ್ವಸ್ಥಗೊಂಡ ಪ್ರಯಾಣಿಕ ; ಬಸ್ನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಪ್ರಾಣ ಉಳಿಸಿದ ಚಾಲಕ ಉಡುಪಿ : ಶಿವಮೊಗ್ಗದಿಂದ ಬರುತ್ತಿದ್ದ ಖಾಸಗಿ…
ಮುಂಬೈನಲ್ಲಿ ಮುಂಗಾರು: ತಗ್ಗು ಪ್ರದೇಶಗಳು ಜಲಾವೃತ, ರೈಲು ಸಂಚಾರ ವ್ಯತ್ಯಯ ಮುಂಬೈ: ಮುಂಬೈನಲ್ಲಿ ಮುಂಗಾರು ಆರಂಭವಾದ ಒಂದು ದಿನದ ನಂತರ,…
ಜೂ.25ಕ್ಕೆ ಮಂಗಳೂರಿಗೆ ಶಾರುಖ್ ಖಾನ್: ರೋಹನ್ ಕಾರ್ಪೊರೇಶನ್ ವಿಶೇಷ ಕಾರ್ಯಕ್ರಮದಲ್ಲಿ ಭಾಗಿ ಮಂಗಳೂರು: ಬಾಲಿವುಡ್ ನ ಖ್ಯಾತ ನಟ ಹಾಗೂ…
ಕರ್ತವ್ಯದ ವೇಳೆ ಹೃದಯಾಘಾತ : ಡಿಎಆರ್ ಪೊಲೀಸ್ ಕಾನ್ಸ್ಟೇಬಲ್ ಸಾವು ರಾಯಚೂರು: ಜಿಲ್ಲೆಯ ದೇವದುರ್ಗ ಜಿಲ್ಲಾ ಸಶಸ್ತ್ರ ಮೀಸಲು ಪಡೆ ಕಾನ್ಸ್ಟೇಬಲ್…