Featured

ಮೂರು ವರ್ಷದಲ್ಲಿ ನಾಲ್ಕು ಮದುವೆ ; ವಂಚಿಸಿ, ಹಣ, ಚಿನ್ನಾಭರಣಗಳನ್ನು ದೋಚಿ ಪರಾರಿ ಆದ ಖತರ್ನಾಕ್ ಮಹಿಳೆ – vishwanews24

ಒಂದೇ ಮದುಮಗಳು ಮೂರು ವರ್ಷದಲ್ಲಿ ನಾಲ್ಕು ಮದುವೆ..

ಹೆಣ್ಣು ಸಿಗದ ಗ್ರಾಮೀಣ ಭಾಗದ ಶ್ರೀಮಂತ ಗಂಡಸರೇ ಈಕೆಯ ಟಾರ್ಗೆಟ್..

ನಾಟಕವಾಡಿ ಹಣ, ಒಡವೆ ದೋಚುತ್ತಿದ್ದ ದೋಖಾ ಗ್ಯಾಂಗ್ ಪೊಲೀಸರ ವಶಕ್ಕೆ..

ತುಮಕೂರು : ಹೆಣ್ಣು ಸಿಗದ ಗ್ರಾಮೀಣ ಭಾಗದ ಶ್ರೀಮಂತ ಗಂಡಸರೇ ಈಗ ಮದುವೆ ಹೆಸರಿನಲ್ಲಿ ಮೋಸ ಮಾಡುವುದಕ್ಕೆ ಟಾರ್ಗೆಟ್ ಆಗುತ್ತಿದ್ದಾರೆ. ಇಲ್ಲೊಬ್ಬ ಖತರ್ನಾಕ್ ಮಹಿಳೆ ಒಂದು ವರ್ಷದ ನಾಲ್ಕು ಜನರನ್ನು ಮದುವೆಯಾಗಿ ವಂಚಿಸಿ, ಹಣ, ಚಿನ್ನಾಭರಣಗಳನ್ನು ದೋಚಿ ಪರಾರಿ ಆಗಿದ್ದಾಳೆ.

ಒಂದೇ ಮದುಮಗಳು ಮೂರು ವರ್ಷದಲ್ಲಿ ನಾಲ್ಕು ಮದುವೆ ಆಗಿದ್ದಾಳೆ. ಮದುವೆ ನಾಟಕವಾಡಿ ಹಣ, ಒಡವೆ ದೋಚುತ್ತಿದ್ದ ದೋಖಾ ಗ್ಯಾಂಗ್ ಅನ್ನು ಪೊಲೀಸರು ಬಂಧಿಸದ್ದಾರೆ. ವಂಚನೆ ಜಾಲವನ್ನು ಪತ್ತೆ ಮಾಡಿದ ತುಮಕೂರು ಜಿಲ್ಲೆ ಗುಬ್ಬಿ ಠಾಣೆ ಪೊಲೀಸರು ಲಕ್ಷ್ಮೀ ಬಾಳ ಸಾಬ್ ಜನಕರ್ ಅಲಿಯಾಸ್ ಕೋಮಲ, ಸಿದ್ದಪ್ಪ , ಲಕ್ಷ್ಮೀಬಾಯಿ, ಬ್ರೋಕರ್ ಲಕ್ಷ್ಮಿ ಬಂಧಿತರು. ಇಲ್ಲಿ ಕೋಮಲ ಮದುಮಗಳಾದರೆ, ಚಿಕ್ಕಪ್ಪ ಸಿದ್ದಪ್ಪ ಮತ್ತು ಚಿಕ್ಕಮ್ಮ ಲಕ್ಷ್ಮೀಬಾಯಿ ಮದುವೆ ಮಾಡಿಕೊಡುವ ಪಾತ್ರಧಾರಿಗಳು. ಇನ್ನು ಗಂಡು ಸಿಗದವರನ್ನು ಗುರುತಿಸಿ ಹೆಣ್ಣು ತೋರಿಸುವವಳು ಈ ಬ್ರೋಕರ್ ಲಕ್ಷ್ಮಿ. ಎಲ್ಲ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಏನಿದು ಪ್ರಕರಣ:
ತುಮಕೂರು ಜಿಲ್ಲೆ ಗುಬ್ಬಿ ತಾಲ್ಲೂಕಿನ ಅತ್ತಿಗಟ್ಟೆ ಗ್ರಾಮದಲ್ಲಿ ಮದುವೆ ನಡೆದಿತ್ತು. ಪಾಲಾಕ್ಷ ಅವರ ಮಗ ದಯಾನಂದಮೂರ್ತಿ (34)ಮದುವೆ ಮಾಡಲು ಹರಸಾಹಸ ನಡೆಸಿದ್ದರು. ಈಗ ವಯಸ್ಸು ಮೀರುತ್ತಿದ್ದರೂ ಹೆಣ್ಣು ಸಿಗದೆ ನೊಂದಿದ್ದರು. ನೂರಾರು ಹೆಣ್ಣು ಹುಡುಕಿದ್ರೂ ಕಂಕಣ ಭಾಗ್ಯ ಕೂಡಿ ಬಂದಿರಲಿಲ್ಲ. ಹತ್ತಾರು ಮದುವೆ ಬ್ರೋಕರ್‌ ಮೂಲಕ ಹೆಣ್ಣು ಹುಡುಕಿಸಿದ್ದರೂ ಮದುವೆ ಸೆಟ್ ಆಗಿರಲಿಲ್ಲ. ಕುಷ್ಟಗಿ ಮೂಲದ ಬಸವರಾಜು ಎನ್ನುವವರ ಮೂಲಕ ಬ್ರೋಕರ್ ಲಕ್ಷ್ಮಿ ಎಂಬಾಕೆಯ ಪರಿಚಯ ಮಾಡಿಕೊಂಡು ಕರೆ ಮಾಡಿದಾಗ, ಮನೆಯ ಎಲ್ಲ ಪರಿಸ್ಥಿತಿ ತಿಳಿದುಕೊಂಡಿದ್ದಾಳೆ. ನಂತರ, ನಿಮ್ಮ ಮಗನಿಗೆ ನಾನು ಹೆಣ್ಣು ತೋರಿಸಿ ಮದುವೆ ಮಾಡಿಸುತ್ತೇವೆ ಎಂದು ಭರವಸೆ ನೀಡಿದ್ದಳು.

ಇದಾದ ಕೆಲವು ದಿನಗಳಲ್ಲಿ ಹುಬ್ಬಳ್ಳಿಯಲ್ಲಿ ಒಬ್ಬ ಒಳ್ಳೆ ಹುಡುಗಿ ಇದ್ದಾಳೆ. ಆಕೆಗೆ ತಂದೆ-ತಾಯಿ ಇಲ್ಲ. ನೀವೆ ಮದುವೆ ಮಾಡಿಕೊಳ್ಳಬೇಕೆಂದು ಸುಳ್ಳು ಹೇಳಿದ್ದಾಳೆ. ಆಗ ಬ್ರೋಕರ್ ಲಕ್ಷ್ಮೀ ಈ ಕೋಮಲ ಎಂಬ ಹೆಸರಿನಲ್ಲಿ ಯುವತಿಯ ಪೋಟೋ ತೋರಿಸಿದ್ದಾಳೆ. ಇನ್ನು ಹುಡುಗನ ಮನೆ ನೋಡಲು ಅತ್ತಿಕಟ್ಟೆ ಗ್ರಾಮಕ್ಕೆ ಬಂದಿದ್ದ ಯುವತಿ ಹಾಗೂ ಆಕೆಯ ಚಿಕ್ಕಮ್ಮ-ಚಿಕ್ಕಪ್ಪ ಕಳೆದ ವರ್ಷ ನವೆಂಬರ್‌ 11ರಂದು ಬಂದಿದ್ದರು. ಇದೇ ವೇಳೆ ಮದುವೆ ಮಾತುಕತೆಯನ್ನೂ ಮುಗಿಸಿದ್ದರು. ನಂತರ, ಹುಡುಗ ಒಪ್ಪಿಗೆ ಇದ್ದಾನೆ, ನಿಮಗೂ ಹುಡುಗಿ ಒಪ್ಪಿಗೆ ಇದ್ದರೆ ನಾಳೆಯೇ ನಿಮ್ಮೂರಿನ ದೇವಸ್ಥಾನದಲ್ಲಿ ಸಿಂಪಲ್ಲಾಗಿ ಮದುವೆ ಮಾಡಿಬಿಡೋಣ ಎಂದು ಹೇಳಿದ್ದಾರೆ.

ಮೊದಲೇ ಮಗನಿಗೆ ಹೆಣ್ಣು ಸಿಗದೆ ಹೈರಾಣಾಗಿದ್ದ ದಯಾನಂದ ಮೂರ್ತಿ ಕುಟುಂಬಕ್ಕೆ ಲಡ್ಡು ಬಂದು ಬಾಯಿಗೆ ಬಿದ್ದಂತಾಗಿತ್ತು. ಹೆಣ್ಣು ಸಿಕ್ಕ ಖುಷಿಯಲ್ಲಿ ಹಿಂದೂ ಮುಂದು ಯೋಚಿಸದೆ ದಿಢೀರ್‌ ಮದುವೆಗೆ ಒಪ್ಪಿಕೊಂಡು ಗ್ರಾಮದಲ್ಲಿ ಮದುವೆ ಮಾಡಿದ್ದರು. ಈ ಮದುವೆಗೆ ಸುಮಾರು 200ಕ್ಕೂ ಹೆಚ್ಚು ಜನರು ಸಾಕ್ಷಿಯಾಗಿದ್ದರು. ಮದುಮಗಳಿಗೆ ಚಿನ್ನದ ಸರ, ತಾಳಿ, ಕಿವಿಗೆ ಓಲೆ ಸೇರಿ ಸುಮಾರು 25 ಗ್ರಾಂ ತೂಕದ ಚಿನ್ನಾಭರಣವನ್ನು ಗಂಡಿನ ಮನೆಯವರು ಮಾಡಿಸಿಕೊಟ್ಟಿದ್ದರು. ಇನ್ನು ಬ್ರೋಕರ್ ಲಕ್ಷ್ಮೀಗೆ ಬರೋಬ್ಬರಿ 1.5 ಲಕ್ಷ ರೂ. ಹಣ ನೀಡಿದ್ದರು.

ಮದುವೆ ಮುಗಿದ 2 ದಿನದ ನಂತರ ತವರುಮನೆಗೆ ಯುವತಿಯನ್ನು ಕರೆದುಕೊಂಡು ಹೋಗಬೇಕೆಂದು ಆಕೆಯೊಬ್ಬಳನ್ನೇ ಕರೆದುಕೊಂದು ಹೋಗಿದ್ದರು. ಹಣ-ಚಿನ್ನದ ಒಡವೆ ಸಹಿತ ಮದುಮಗಳನ್ನ ಕರೆದುಕೊಂಡು ಹೋಗಿದ್ದರು. ಇನ್ನು ಒಂದು ವಾರ ಕಳೆದರೂ ವಾಪಸ್‌ ಬರಲಿಲ್ಲ. ಇದಿಂದ ಆತಂಕಗೊಂಡ ಪಾಲಾಕ್ಷ ಹುಬ್ಬಳ್ಳಿಗೆ ಹೋಗಿ ವಿಚಾರಿಸಿದಾಗ ಸತ್ಯ ಬಯಲಾಗಿದೆ. ನಕಲಿ ಮದುವೆಗೆ ಬಂದವರು ಕೂಡ ದೋಖಾ ಗಿರಾಕಿಗಳು ಎಂಬ ಸತ್ಯ ಬಯಲಾಗಿದೆ. ಆಗ ಪುನಃ ತಮ್ಮೂರಿಗೆ ವಾಪಸ್ ಬಂದು ಗುಬ್ಬಿ ಠಾಣೆಗೆ ದೂರು ದಾಖಲಿಸಿದ್ದಾರೆ.

ಪ್ರಕರಣ ದಾಖಲಿಸಿಕೊಂಡ ಗುಬ್ಬಿ ಪೊಲೀಸರು ನಿರಂತರ ತನಿಖೆ ನಡೆಸುತ್ತಿದ್ದರು. ಆದರೆ, ಇದೇ ರೀತಿ ಪುನಃ ಮಹರಾಷ್ಟ್ರದಲ್ಲಿ ಮದುವೆ ಮಾಡಿಕೊಂಡು ಸೆಟೆಲ್ ಆಗಿದ್ದರು. ಆಗ ಮದುವೆ ಫೋಟೋ ಹಾಗೂ ವಿಡಿಯೋ ಆಧರಿಸಿ ವಂಚನೆ ಮಾಡಿದ ಗ್ಯಾಂಗ್‌ನ ಎಲ್ಲರನ್ನೂ ಬಂಧಿಸಿದ್ದಾರೆ. ಒಟ್ಟಾರೆ, ಕರ್ನಾಟಕ ಹಾಗೂ ಮಹಾರಾಷ್ಟ್ರ ಸೇರಿದಂತೆ ಒಟ್ಟು ನಾಲ್ಕೈದು ಮದುವೆಗಳನ್ನು ಮಾಡಿಕೊಂಡು ವಂಚನೆ ಮಾಡುವುದನ್ನೇ ವೃತ್ತಿ ಮಾಡಿಕೊಂಡಿದ್ದರು. ಇದಕ್ಕಾಗಿ ನಕಲಿ ಅಡ್ರೆಸ್‌ನಲ್ಲಿ ಆಧಾರ್‌ ಕಾರ್ಡ್‌ ಸೃಷ್ಟಿಸಿಕೊಳ್ಳುತ್ತಿದ್ದರು. ಆಧಾರ್ ಕಾರ್ಡ್ ತೋರಿಸಿ ಗಂಡಿನ‌ ಮನೆಯವರನ್ನ ನಂಬಿಸುತ್ತಿದ್ದರು. ನಂತರ ವಂಚನೆ ಮಾಡಿ ಹೋಗುತ್ತಿದ್ದರು.

Vishwa News 24

Recent Posts

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ -vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಹಫೀಝ್ ರೆಹಮಾನ್‌ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…

2 days ago

ದೋಣಿ ಮುಗುಚಿ ಇಬ್ಬರು ಯುವಕರು ನೀರುಪಾಲು : ಓರ್ವನ ಮೃತದೇಹ ಪತ್ತೆ, ಇನ್ನೋರ್ವನಿಗಾಗಿ ಶೋಧ – vishwanews24

ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು  ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…

3 days ago

ಬಿಜೆಪಿ ಬೆಂಬಲಿಸುವವರೂ ನಮ್ಮ ಗ್ಯಾರಂಟಿಗಳ ಫಲಾನುಭವಿಗಳು : ಸಿದ್ದರಾಮಯ್ಯ – vishwanews24

 ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…

3 days ago

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ – vishwanews24

ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…

3 days ago

ರೈಲು ಪ್ರಯಾಣಿಕರ ಗಮನಕ್ಕೆ: ಇಂದಿನಿಂದ ಬುಕ್ಕಿಂಗ್ ಮತ್ತು ರದ್ದತಿ  ನಿಯಮದಲ್ಲಿ ಭಾರಿ ಬದಲಾವಣೆ ; ಇಲ್ಲಿದೆ ಪೂರ್ಣ ಮಾಹಿತಿ – vishwanews24

ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್‌ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…

3 days ago

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ – vishwanews24

ಉಡುಪಿ:  ಯುವ‌ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…

3 days ago