Featured

ಮೂರು ಷರತ್ತುಗಳನ್ನು ಪೂರೈಸಿದರೆ ಮಾತ್ರ ಮಾತುಕತೆ: ಯುದ್ಧ ವಿರಾಮದ ಕುರಿತು ಇರಾನ್ ಅಧ್ಯಕ್ಷ ಹೇಳಿಕೆ – vishwanews24

ಮೂರು ಷರತ್ತುಗಳನ್ನು ಪೂರೈಸಿದರೆ ಮಾತ್ರ ಮಾತುಕತೆ: ಯುದ್ಧ ವಿರಾಮದ ಕುರಿತು ಇರಾನ್ ಅಧ್ಯಕ್ಷ ಹೇಳಿಕೆ

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರವಾಗಿರುವ ಸಂದರ್ಭದಲ್ಲಿ, ಯುದ್ಧವನ್ನು ಕೊನೆಗೊಳಿಸಲು ಮೂರು ಪ್ರಮುಖ ಷರತ್ತುಗಳನ್ನು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಮುಂದಿಟ್ಟಿದ್ದಾರೆ. ನಿನ್ನೆ ಹಾಗೂ ಇಂದು ರಷ್ಯಾ ಮತ್ತು ಪಾಕಿಸ್ತಾನದ ನಾಯಕರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ ಅವರು, ಈ ಷರತ್ತುಗಳು ಈಡೇರಿದರೆ ಇರಾನ್ ಮಾತುಕತೆಗೆ ಮರಳಲು ಸಿದ್ಧವಿದೆ ಎಂದು ಸೂಚಿಸಿದ್ದಾರೆ ಎಂದು Aljazeera ವರದಿ ಮಾಡಿದೆ.

ಪೆಜೆಶ್ಕಿಯನ್ ಹೇಳುವಂತೆ, ಮೊದಲನೆಯದಾಗಿ ಇರಾನ್‌ನ ಸಾರ್ವಭೌಮ ಮತ್ತು ಕಾನೂನುಬದ್ಧ ಹಕ್ಕುಗಳನ್ನು ಮಾನ್ಯತೆ ನೀಡಬೇಕು. ಎರಡನೆಯದಾಗಿ, ಇತ್ತೀಚಿನ ಸಂಘರ್ಷದಿಂದ ದೇಶದಲ್ಲಿ ಉಂಟಾದ ವಿನಾಶಕ್ಕೆ ಪರಿಹಾರ ಪಾವತಿಸಬೇಕು. ಮೂರನೆಯದಾಗಿ, ಭವಿಷ್ಯದಲ್ಲಿ ಇಂತಹ ಆಕ್ರಮಣಗಳು ಮರುಕಳಿಸದಂತೆ ದೃಢವಾದ ಅಂತರರಾಷ್ಟ್ರೀಯ ಭದ್ರತಾ ಖಾತರಿ ನೀಡಬೇಕು.

ಇದನ್ನೂ ಓದಿ :

ಈ ಕುರಿತು ಇನ್ನೊಂದು ಕಡೆಯಿಂದ ಪ್ರತಿಕ್ರಿಯೆಗಾಗಿ ಇರಾನ್ ಕಾಯುತ್ತಿದೆ. ಆದರೆ ಎದುರಾಳಿಗಳ ಮೇಲೆ ನಂಬಿಕೆ ಇಲ್ಲ ಎಂದು ಇರಾನ್ ಅಧಿಕಾರಿಗಳು ಹಲವು ಬಾರಿ ಹೇಳಿದ್ದಾರೆ.

ಇನ್ನೊಂದೆಡೆ, ಕುವೈತ್, ಖತರ್, ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಸೌದಿ ಅರೇಬಿಯಾ ದೇಶಗಳು ಇರಾನಿನ ಹಲವು ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಪ್ರತಿಬಂಧಿಸಿರುವುದಾಗಿ ವರದಿಯಾಗಿದೆ. ಇದರ ಮಧ್ಯೆ ಇರಾಕ್‌ನ ಅಲ್-ಫಾ ಬಂದರಿನಲ್ಲಿ ಎರಡು ವಿದೇಶಿ ತೈಲ ಟ್ಯಾಂಕರ್‌ಗಳ ಮೇಲೆ ದಾಳಿ ನಡೆದಿರುವುದಾಗಿ ತಿಳಿದುಬಂದಿದೆ.

ಈ ನಡುವೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾರ್ಮುಜ್ ಜಲಸಂಧಿಯಲ್ಲಿ ಸಾಗುವ ತೈಲ ಟ್ಯಾಂಕರ್‌ಗಳನ್ನು ರಕ್ಷಿಸುವುದಾಗಿ ಘೋಷಿಸಿದ್ದಾರೆ. ಆದರೆ ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಜಾಗತಿಕ ಮಾರುಕಟ್ಟೆಯಲ್ಲಿ ತೈಲದ ಬೆಲೆ ಬ್ಯಾರೆಲ್‌ಗೆ 200 ಡಾಲರ್ ಮಟ್ಟಕ್ಕೇರಬಹುದು ಎಂದು ಇರಾನ್ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ :

ಇಸ್ರೇಲಿ ಸೇನೆ ಲೆಬನಾನ್ ರಾಜಧಾನಿ ಬೈರುತ್ ಮೇಲೆ ಭಾರಿ ದಾಳಿಗಳನ್ನು ಮುಂದುವರಿಸುತ್ತಿರುವುದಾಗಿ ವರದಿಯಾಗಿದ್ದು, ಇರಾನ್ ಮತ್ತು ಹೆಜ್ಬೊಲ್ಲಾ ಸಂಘಟನೆಗಳು ಇಸ್ರೇಲ್ ಮೇಲೆ ಸಂಯೋಜಿತ ದಾಳಿಗಳನ್ನು ಆರಂಭಿಸಿರುವುದಾಗಿ ತಿಳಿದುಬಂದಿದೆ.

ಮಧ್ಯಪ್ರಾಚ್ಯದಲ್ಲಿ ಮುಂದುವರಿಯುತ್ತಿರುವ ಈ ಸಂಘರ್ಷದ ಪರಿಣಾಮವಾಗಿ ಪ್ರದೇಶದಾದ್ಯಂತ ಸಾವುನೋವುಗಳು ಹೆಚ್ಚುತ್ತಿದ್ದು, ಪರಿಸ್ಥಿತಿ ಮತ್ತಷ್ಟು ಗಂಭೀರವಾಗುವ ಆತಂಕ ವ್ಯಕ್ತವಾಗಿದೆ.

Vishwa News 24

Recent Posts

ಉಡುಪಿ : ಹೊಟೇಲ್ ಮುಚ್ಚುವ ಭೀತಿ ; ಜಿಲ್ಲೆಯ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ : ತಲ್ಲೂರು ಶಿವರಾಮ ಶೆಟ್ಟಿ – vishwanews24

ಉಡುಪಿ :ಜಿಲ್ಲೆಯ ಎಲ್ಲಾ ಹೊಟೇಲ್‌ಗಳನ್ನು ಸಾಮೂಹಿಕವಾಗಿ ಮುಚ್ಚಬೇಕು ಎಂಬ ಒತ್ತಡ ಹೆಚ್ಚುತ್ತಿದೆ: ತಲ್ಲೂರು ಶಿವರಾಮ ಶೆಟ್ಟಿ ಉಡುಪಿ/ಕುಂದಾಪುರ: ಪಶ್ಚಿಮ ಏಷ್ಯಾ…

2 days ago

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ – vishwanews24

ಉಪಚುನಾವಣೆ : ದಾವಣಗೆರೆ ದಕ್ಷಿಣ, ಬಾಗಲಕೋಟೆಗೆ ಬಿಜೆಪಿ ಅಭ್ಯರ್ಥಿ ಘೋಷಣೆ ಬೆಂಗಳೂರು: ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ಬಾಗಲಕೋಟೆ…

2 days ago

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ – vishwanews24

ಕುಂದಾಪುರ: ಕಾರ್ಮಿಕರಿಗೆ ಸ್ಮಾರ್ಟ್‌ ಕಾರ್ಡ್ ನೀಡುವಂತೆ ಶಾಸಕ ಕಿರಣ್ ಕುಮಾರ್ ಕೊಡ್ಗಿ ಮನವಿ ಕುಂದಾಪುರ: ರಾಜ್ಯ ಮೋಟಾರು ಸಾರಿಗೆ ಮತ್ತು…

2 days ago

ಉಡುಪಿ : ಗ್ಯಾಸ್ ಹೆಸರಿನಲ್ಲಿ ಸೈಬರ್ ವಂಚನೆ: ಅಪರಿಚಿತರಿಂದ ಬರುವ ಲಿಂಕ್‌, ಎಪಿಕೆ ಫೈಲ್‌ ಓಪನ್ ಮಾಡುವ ಮುನ್ನ ಎಚ್ಚರ : ಎಸ್ಪಿ ಮನವಿ – vishwanews24

ಉಡುಪಿ: ಗ್ಯಾಸ್ ಸಮಸ್ಯೆಯನ್ನೇ ಬಂಡವಾಳ ಮಾಡಿಕೊಂಡ ಸೈಬರ್ ವಂಚಕರು : ವೃದ್ಧ ದಂಪತಿಯಿಂದ ₹9.78 ಲಕ್ಷ ವಸೂಲಿ ಉಡುಪಿ: ಇರಾನ್…

2 days ago

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ ‘ಗೀತಾ’ – vishwanews24

ಮಂಗಳೂರು : ಪಿಲಿಕುಳದಲ್ಲಿ ಏಳು ಮರಿಗಳಿಗೆ ಜನ್ಮ ನೀಡಿದ ಭಾರತೀಯ ತೋಳ 'ಗೀತಾ' ಮಂಗಳೂರು: ಪಿಲಿಕುಳ ಜೈವಿಕ ಉದ್ಯಾನವನದಲ್ಲಿ ಭಾರತೀಯ ತೋಳ–…

2 days ago

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿಯ ಬಂಧನ – vishwanews24

ಮಂಗಳೂರು : ಅಪ್ರಾಪ್ತ ಬಾಲಕನ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ ; ಆರೋಪಿ ವಶ ಮಂಗಳೂರು: ಸಮೀಪದ ಕೊಣಾಜೆ ಪೊಲೀಸ್…

2 days ago