Featured

ಮೂರು ಷರತ್ತುಗಳನ್ನು ಪೂರೈಸಿದರೆ ಮಾತ್ರ ಮಾತುಕತೆ: ಯುದ್ಧ ವಿರಾಮದ ಕುರಿತು ಇರಾನ್ ಅಧ್ಯಕ್ಷ ಹೇಳಿಕೆ – vishwanews24

ಮೂರು ಷರತ್ತುಗಳನ್ನು ಪೂರೈಸಿದರೆ ಮಾತ್ರ ಮಾತುಕತೆ: ಯುದ್ಧ ವಿರಾಮದ ಕುರಿತು ಇರಾನ್ ಅಧ್ಯಕ್ಷ ಹೇಳಿಕೆ

ಟೆಹ್ರಾನ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ ತೀವ್ರವಾಗಿರುವ ಸಂದರ್ಭದಲ್ಲಿ, ಯುದ್ಧವನ್ನು ಕೊನೆಗೊಳಿಸಲು ಮೂರು ಪ್ರಮುಖ ಷರತ್ತುಗಳನ್ನು ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಮುಂದಿಟ್ಟಿದ್ದಾರೆ. ನಿನ್ನೆ ಹಾಗೂ ಇಂದು ರಷ್ಯಾ ಮತ್ತು ಪಾಕಿಸ್ತಾನದ ನಾಯಕರೊಂದಿಗೆ ದೂರವಾಣಿ ಮೂಲಕ ಮಾತುಕತೆ ನಡೆಸಿದ ಅವರು, ಈ ಷರತ್ತುಗಳು ಈಡೇರಿದರೆ ಇರಾನ್ ಮಾತುಕತೆಗೆ ಮರಳಲು ಸಿದ್ಧವಿದೆ ಎಂದು ಸೂಚಿಸಿದ್ದಾರೆ ಎಂದು Aljazeera ವರದಿ ಮಾಡಿದೆ.

ಪೆಜೆಶ್ಕಿಯನ್ ಹೇಳುವಂತೆ, ಮೊದಲನೆಯದಾಗಿ ಇರಾನ್‌ನ ಸಾರ್ವಭೌಮ ಮತ್ತು ಕಾನೂನುಬದ್ಧ ಹಕ್ಕುಗಳನ್ನು ಮಾನ್ಯತೆ ನೀಡಬೇಕು. ಎರಡನೆಯದಾಗಿ, ಇತ್ತೀಚಿನ ಸಂಘರ್ಷದಿಂದ ದೇಶದಲ್ಲಿ ಉಂಟಾದ ವಿನಾಶಕ್ಕೆ ಪರಿಹಾರ ಪಾವತಿಸಬೇಕು. ಮೂರನೆಯದಾಗಿ, ಭವಿಷ್ಯದಲ್ಲಿ ಇಂತಹ ಆಕ್ರಮಣಗಳು ಮರುಕಳಿಸದಂತೆ ದೃಢವಾದ ಅಂತರರಾಷ್ಟ್ರೀಯ ಭದ್ರತಾ ಖಾತರಿ ನೀಡಬೇಕು.

ಇದನ್ನೂ ಓದಿ :

ಈ ಕುರಿತು ಇನ್ನೊಂದು ಕಡೆಯಿಂದ ಪ್ರತಿಕ್ರಿಯೆಗಾಗಿ ಇರಾನ್ ಕಾಯುತ್ತಿದೆ. ಆದರೆ ಎದುರಾಳಿಗಳ ಮೇಲೆ ನಂಬಿಕೆ ಇಲ್ಲ ಎಂದು ಇರಾನ್ ಅಧಿಕಾರಿಗಳು ಹಲವು ಬಾರಿ ಹೇಳಿದ್ದಾರೆ.

ಇನ್ನೊಂದೆಡೆ, ಕುವೈತ್, ಖತರ್, ಯುನೈಟೆಡ್ ಅರಬ್ ಎಮಿರೇಟ್ಸ್ ಮತ್ತು ಸೌದಿ ಅರೇಬಿಯಾ ದೇಶಗಳು ಇರಾನಿನ ಹಲವು ಕ್ಷಿಪಣಿಗಳು ಮತ್ತು ಡ್ರೋನ್‌ಗಳನ್ನು ಪ್ರತಿಬಂಧಿಸಿರುವುದಾಗಿ ವರದಿಯಾಗಿದೆ. ಇದರ ಮಧ್ಯೆ ಇರಾಕ್‌ನ ಅಲ್-ಫಾ ಬಂದರಿನಲ್ಲಿ ಎರಡು ವಿದೇಶಿ ತೈಲ ಟ್ಯಾಂಕರ್‌ಗಳ ಮೇಲೆ ದಾಳಿ ನಡೆದಿರುವುದಾಗಿ ತಿಳಿದುಬಂದಿದೆ.

ಈ ನಡುವೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಾರ್ಮುಜ್ ಜಲಸಂಧಿಯಲ್ಲಿ ಸಾಗುವ ತೈಲ ಟ್ಯಾಂಕರ್‌ಗಳನ್ನು ರಕ್ಷಿಸುವುದಾಗಿ ಘೋಷಿಸಿದ್ದಾರೆ. ಆದರೆ ಪರಿಸ್ಥಿತಿ ಹೀಗೆಯೇ ಮುಂದುವರಿದರೆ ಜಾಗತಿಕ ಮಾರುಕಟ್ಟೆಯಲ್ಲಿ ತೈಲದ ಬೆಲೆ ಬ್ಯಾರೆಲ್‌ಗೆ 200 ಡಾಲರ್ ಮಟ್ಟಕ್ಕೇರಬಹುದು ಎಂದು ಇರಾನ್ ಎಚ್ಚರಿಕೆ ನೀಡಿದೆ.

ಇದನ್ನೂ ಓದಿ :

ಇಸ್ರೇಲಿ ಸೇನೆ ಲೆಬನಾನ್ ರಾಜಧಾನಿ ಬೈರುತ್ ಮೇಲೆ ಭಾರಿ ದಾಳಿಗಳನ್ನು ಮುಂದುವರಿಸುತ್ತಿರುವುದಾಗಿ ವರದಿಯಾಗಿದ್ದು, ಇರಾನ್ ಮತ್ತು ಹೆಜ್ಬೊಲ್ಲಾ ಸಂಘಟನೆಗಳು ಇಸ್ರೇಲ್ ಮೇಲೆ ಸಂಯೋಜಿತ ದಾಳಿಗಳನ್ನು ಆರಂಭಿಸಿರುವುದಾಗಿ ತಿಳಿದುಬಂದಿದೆ.

ಮಧ್ಯಪ್ರಾಚ್ಯದಲ್ಲಿ ಮುಂದುವರಿಯುತ್ತಿರುವ ಈ ಸಂಘರ್ಷದ ಪರಿಣಾಮವಾಗಿ ಪ್ರದೇಶದಾದ್ಯಂತ ಸಾವುನೋವುಗಳು ಹೆಚ್ಚುತ್ತಿದ್ದು, ಪರಿಸ್ಥಿತಿ ಮತ್ತಷ್ಟು ಗಂಭೀರವಾಗುವ ಆತಂಕ ವ್ಯಕ್ತವಾಗಿದೆ.

Vishwa News 24

Recent Posts

ಉಡುಪಿ : ಮೇ 5 ರಂದು ನೇರ ಸಂದರ್ಶನ -vishwanews24

ಉಡುಪಿ : ಮೇ 5 ರಂದು ನೇರ ಸಂದರ್ಶನ ಉಡುಪಿ : ಉದ್ಯೋಗ ಆಕಾಂಕ್ಷಿಗಳಿಗೆ ಮೇ 5 ರಂದು ಬೆಳಗ್ಗೆ…

4 days ago

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ – vishwanews24

ಉಡುಪಿ ಮಲಬಾರ್ ಗೋಲ್ಡ್‌ನಲ್ಲಿ ಡೈಮಂಡ್ಸ್ ಆಭರಣಗಳ ಪ್ರದರ್ಶನಕ್ಕೆ ಚಾಲನೆ ಉಡುಪಿ : ಮಾಲಬಾರ್ ಗೋಲ್ಡ್ ಆ್ಯಂಡ್ ಡೈಮಂಡ್ಸ್ ಉಡುಪಿ ಶಾಖೆಯ…

4 days ago

ಬಿಜೆಪಿ ಬಡ, ಮಧ್ಯಮ ವರ್ಗದವರ ಬದುಕನ್ನು ದುರ್ಬಲ ಮಾಡಲು ಹೊರಟಿದೆ : ಈಶ್ವರ್ ಖಂಡ್ರೆ – vishwanews24

ಮೋದಿ ದುರಾಡಳಿತದ ವಿರುದ್ಧ ಮಾತಾಡಲು ಬಿಜೆಪಿಗರಿಗೆ ಸವಾಲು.. ಬಿಜೆಪಿಯ ಬಡಜನ ವಿರೋಧಿ ಬಣ್ಣ ಮತ್ತೆ ಬಯಲು.. ವಾಣಿಜ್ಯ ಸಿಲಿಂಡರ್ ದರ…

4 days ago

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು – vishwanews24

ಪತ್ನಿಯ ಅಕ್ರಮ ಸಂಬಂಧ, ಕಿರುಕುಳಕ್ಕೆ ಬೇಸತ್ತು ಗಂಡ ನೇಣಿಗೆ ಶರಣು ಕಾರವಾರ: ಪತ್ನಿಯ ಕಿರುಕುಳಕ್ಕೆ ಬೇಸತ್ತು ಪತಿ ಆತ್ಮಹತ್ಯೆ ಮಾಡಿಕೊಂಡ…

4 days ago

ಕೌಟುಂಬಿಕ ಕಲಹ : ಇಬ್ಬರು ಮಕ್ಕಳನ್ನು ಕೊಂದು ಆತ್ಮಹತ್ಯೆಗೆ ಶರಣಾದ ತಂದೆ  – vishwanews24

ಮನೆಯಲ್ಲಿದ್ದ ಚಿನ್ನಾಭರಣ ಸಮೇತ ಪತ್ನಿ ಪರಾರಿ: ಮಕ್ಕಳಿಬ್ಬರನ್ನು ಕೊಲೆಗೈದು ನೇಣಿಗೆ ಶರಣಾದ ಪತಿ ಕುಣಿಗಲ್ : ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ…

4 days ago

ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. !! – vishwanews24

NDMAಯಿಂದ ಬರುತ್ತೆ ತುರ್ತು ಎಚ್ಚರಿಕೆ ಸಂದೇಶ.. ನಿಮ್ಮ ಮೊಬೈಲ್‌ನಲ್ಲಿ ಅಲರ್ಟ್ ಸಂದೇಶ, ಸೈರನ್ ಮೊಳಗಿದ್ರೆ ಭಯಪಡಬೇಡಿ.. ನಿಮ್ಮ ಮೊಬೈಲ್‌ ಫೋನ್‌…

4 days ago