Featured

ಮೂರು ಹತ್ಯೆ ಪ್ರಕರಣಗಳ ನೈಜ ಆರೋಪಿಗಳನ್ನು ಆ. 5ರ ಒಳಗೆ ಬಂಧಿಸದಿದ್ದಲ್ಲಿ ಮಂಗಳೂರಿನಲ್ಲಿ ಸತ್ಯಾಗ್ರಹ  : ಎಚ್.ಡಿ. ಕುಮಾರಸ್ವಾಮಿ – Vishwanews24

ಜಿಲ್ಲೆಯಲ್ಲಿ ಆಡಳಿತ ನಡೆಸಿರುವ ಬಿಜೆಪಿ- ಕಾಂಗ್ರೆಸ್ ಪಕ್ಷಗಳು ಹಿಂದೂ, ಮುಸ್ಲಿಮರ ನಡುವೆ ಕಂದಕ ಸೃಷ್ಟಿಸಿವೆ..

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆದಿರುವ ಮೂರು ಹತ್ಯೆ ಪ್ರಕರಣಗಳ ನೈಜ ಆರೋಪಿಗಳನ್ನು ಆಗಸ್ಟ್ 5ರ ಒಳಗೆ ಬಂಧಿಸದಿದ್ದಲ್ಲಿ ಮಂಗಳೂರಿನಲ್ಲಿ ಸತ್ಯಾಗ್ರಹ ನಡೆಸುವುದಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ. ಕುಮಾರಸ್ವಾಮಿ ಹೇಳಿದರು‌.

ಸೋಮವಾರ ಇಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಿಲ್ಲೆಯಲ್ಲಿ ಆಡಳಿತ ನಡೆಸಿರುವ ಬಿಜೆಪಿ- ಕಾಂಗ್ರೆಸ್ ಪಕ್ಷಗಳು ಹಿಂದೂ, ಮುಸ್ಲಿಮರ ನಡುವೆ ಕಂದಕ ಸೃಷ್ಟಿಸಿವೆ.  ಈ ಜಿಲ್ಲೆಯಲ್ಲಿ ಪುನಃ ಶಾಂತಿ ಸ್ಥಾಪನೆ ಆಗಬೇಕು’ ಎಂದರು.

‘ಮುಖ್ಯಮಂತ್ರಿ ಜಿಲ್ಲೆಗೆ ಏನು ಸಾಧನೆ ಮಾಡಿದರು? ಆತಂಕದಲ್ಲಿದ್ದ ಜನರಲ್ಲಿ ಮುಖ್ಯಮಂತ್ರಿ ವಿಶ್ವಾಸ ಮೂಡಿಸಬಹುದೆಂಬ ನಿರೀಕ್ಷೆ ಹುಸಿಯಾಗಿದೆ. ಯಾರನ್ನು ಮೆಚ್ಚಿಸಲು ಇವರು ಸಿಎಂ ಆಗಿದ್ದಾರೆ’ ಎಂದು ಪ್ರಶ್ನಿಸಿದರು.

ಸುರತ್ಕಲ್‌ನಲ್ಲಿ ಗುರುವಾರ ನಡೆದ ಕಾಟಿಪಳ್ಳ ಮಂಗಳಪೇಟೆಯ ಮಹಮ್ಮದ್ ಪಾಝಿಲ್ (23) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಒಬ್ಬ ಆರೋಪಿಯನ್ನು ನಗರದ ಪೊಲೀಸರು ಬಂಧಿಸಿದ್ದಾರೆ. ಆತ ನೀಡಿದ ಮಾಹಿತಿ ಆಧಾರದಲ್ಲಿ ಹಂತಕರ ಬಗ್ಗೆ ಪೊಲೀಸರಿಗೆ ಖಚಿತ ಸುಳಿವು ಸಿಕ್ಕಿದ್ದು, ಅವರ ಬಂಧನಕ್ಕೆ ಕ್ರಮ ಕೈಗೊಂಡಿದ್ದಾರೆ.

Vishwa News 24

Recent Posts

ಉಡುಪಿ : ಆ. 20 ರಂದು ನೇರ ಸಂದರ್ಶನ -vishwanews24

ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…

13 hours ago

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ -vishwanews24

ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…

13 hours ago

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ -vishwanews24

ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…

13 hours ago

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ -vishwanews24

ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ವಿಶೇಷ ರೈಲುಗಳ ಹೆಚ್ಚುವರಿ ಸಂಚಾರ ಉಡುಪಿ: ಗಣಪತಿ ಹಬ್ಬದ ಪ್ರಯುಕ್ತ ಪ್ರಯಾಣಿಕರ ಬೇಡಿಕೆಗೆ ಅನುಸಾರ…

13 hours ago

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

2 days ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

2 days ago