Featured

ಮೂಲ್ಕಿ : ಕಣಜದ ಹುಳು ಕಡಿದು ಗೃಹರಕ್ಷಕ ಸಿಬ್ಬಂದಿ ಬಲಿ – Vishwanews24

ಮೂಲ್ಕಿ : ಕಣಜದ ಹುಳು ಕಡಿದು ಗೃಹರಕ್ಷಕ ಸಿಬ್ಬಂದಿ ಬಲಿ – Vishwanews24

ಮೂಲ್ಕಿ,: ಕಿನ್ನಿಗೋಳಿ ಸಮೀಪದ ಶ್ರೀ ರಾಮ ಮಂದಿರ ಬಳಿ ನ. 17 ರ ಬುಧವಾರ ರಾತ್ರಿ ಕಣಜದ ಹುಳು ಕಡಿದು ಗೃಹರಕ್ಷಕ ದಳ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ.

ಕಟೀಲು ಬಳಿಯ ಎಕ್ಕಾರು ದೇವರಗುಡ್ಡೆ ನಿವಾಸಿ ಸಂತೋಷ್ (35) ಮೃತಪಟ್ಟವರು.

ಇವರು ಮಂಗಳೂರಿನ ಕಂಕನಾಡಿ ಠಾಣೆಯಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಯಾಗಿದ್ದರು.ಸಂತೋಷ್ ಬುಧವಾರ ಸಂಜೆ ಶ್ರೀರಾಮ ಮಂದಿರ ಬಳಿ ಆಟೋದಲ್ಲಿ ಹೋಗುತ್ತಿದ್ದಾಗ ಕಣಜದ ಹುಳುಗಳ ದಾಳಿಗೊಳಗಾಗಿ ಕಿನ್ನಿಗೋಳಿ ಪರಿಸರದ ಶಾಲೆಯ ಕೆಲ ಮಕ್ಕಳು ಗಂಭೀರಾವಸ್ಥೆಯಲ್ಲಿದ್ದರು. ಇದನ್ನು ಕಂಡ ಸಂತೋಷ್ ಮಕ್ಕಳನ್ನು ಕಣಜದ ಹುಳುಗಳಿಂದ ರಕ್ಷಿಸಿ ಕಿನ್ನಿಗೋಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆನ್ನಲಾಗಿದೆ.

ಮಕ್ಕಳ ರಕ್ಷಣೆಯ ಸಂದರ್ಭ ಕಣಜದ ಹುಳು ಸಂತೋಷ್ ಅವರಿಗೂ ಕಡಿದಿದ್ದು, ಆದರೆ, ಅವರು ಯಾವುದೇ ಚಿಕಿತ್ಸೆ ಪಡೆಯದೆ ಮನೆ ಕಡೆ ತೆರಳಿದ್ದರೆನ್ನಲಾಗಿದೆ. ಮನೆಯಲ್ಲಿ ರಾತ್ರಿ ಸುಮಾರು 9 ಗಂಟೆಗೆ ಕುರ್ಚಿಯಲ್ಲಿ ಕುಳಿತ್ತಿದ್ದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಆರು ಮಕ್ಕಳ ರಕ್ಷಣೆ ಮಾಡಿದ ಸಂತೋಷ್ ಅವರ ಕಾರ್ಯ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶಂಸೆಗೆ ಪಾತ್ರವಾಗಿದೆ. ಮೃತರು ತಾಯಿ, ಪತ್ನಿ, ಮೂವರು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Vishwa News 24

Recent Posts

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ – vishwanews24

ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ 15 ಲಕ್ಷ ರೂ.ವಂಚನೆ ಕಾಪು: ಫ್ಲ್ಯಾಟ್ ನಿರ್ಮಿಸಿ ಹಸ್ತಾಂತರಿಸುವುದಾಗಿ ಭರವಸೆ ನೀಡಿ…

17 hours ago

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ – vishwanews24

ಹಾಸನ : ಡೆತ್ ನೋಟ್ ಬರೆದಿಟ್ಟು ಪ್ಯಾರಾಮೆಡಿಕಲ್ ವಿದ್ಯಾರ್ಥಿ ಆತ್ಮಹತ್ಯೆ ಹಾಸನ: ಡೆತ್ ನೋಟ್ ಬರೆದಿಟ್ಟು 21 ವರ್ಷದ ಪ್ಯಾರಾಮೆಡಿಕಲ್ ವಿದ್ಯಾರ್ಥಿಯೋರ್ವ…

17 hours ago

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ – vishwanews24

ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘ ಸಭೆ ೨೦೨೩-೨೦೨೪ ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ…

18 hours ago

ಆನ್‌ಲೈನ್‌ನಲ್ಲಿ ಮಾರಾಟ ಮಾಡುವ ತರಕಾರಿಗಳಿಗೆ ಕೆಮಿಕಲ್‌ ಸ್ಪ್ರೇ ಬಗ್ಗೆ ಕ್ರಮ : ಖಾದರ್‌ – vishwanews24

ಆನ್‌ಲೈನ್‌ನಲ್ಲಿ ಮಾರಾಟ ಮಾಡೋ ತರಕಾರಿಗೆ ಕೆಮಿಕಲ್‌ ಸ್ಪ್ರೇ ಮಾಡುವ ಬಗ್ಗೆ ದೂರು ಬಂದಿದೆ.. ಪರಿಶೀಲನೆ ಮಾಡ್ತಿದ್ದೇವೆ, ಮುಂದಿನ ದಿನಗಳಲ್ಲಿ ಕ್ರಮ…

19 hours ago

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ – vishwanews24

ಕಾಸರಗೋಡು : ನಿಯಂತ್ರಣ ತಪ್ಪಿ ಡಿವೈಡರ್‌ಗೆ ಢಿಕ್ಕಿ ಹೊಡೆದ ಆ್ಯಂಬುಲೆನ್ಸ್ ; ರೋಗಿ ಮೃತ್ಯು, ನಾಲ್ವರಿಗೆ ಗಾಯ ಕಾಸರಗೋಡು :…

19 hours ago

ಇನ್ನು ಮುಂದೆ ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  CM ಡಿ.ಕೆ. ಶಿ ಸ್ಪಷ್ಟನೆ – vishwanews24

ರಾಜ್ಯ ಸರ್ಕಾರದ ಯಾವುದೇ ಕಾರ್ಯಕ್ರಮಗಳಲ್ಲಿ ಇನ್ನು ಮುಂದೆ ವಂದೇ ಮಾತರಂನ ಎರಡು ಚರಣ ಮಾತ್ರ ಬಳಕೆ:  ಡಿ.ಕೆ. ಶಿ ಸ್ಪಷ್ಟನೆ…

20 hours ago