Featured

ಮೂಲ್ಕಿ : ಕಣಜದ ಹುಳು ಕಡಿದು ಗೃಹರಕ್ಷಕ ಸಿಬ್ಬಂದಿ ಬಲಿ – Vishwanews24

ಮೂಲ್ಕಿ : ಕಣಜದ ಹುಳು ಕಡಿದು ಗೃಹರಕ್ಷಕ ಸಿಬ್ಬಂದಿ ಬಲಿ – Vishwanews24

ಮೂಲ್ಕಿ,: ಕಿನ್ನಿಗೋಳಿ ಸಮೀಪದ ಶ್ರೀ ರಾಮ ಮಂದಿರ ಬಳಿ ನ. 17 ರ ಬುಧವಾರ ರಾತ್ರಿ ಕಣಜದ ಹುಳು ಕಡಿದು ಗೃಹರಕ್ಷಕ ದಳ ಸಿಬ್ಬಂದಿಯೊಬ್ಬರು ಮೃತಪಟ್ಟಿದ್ದಾರೆ.

ಕಟೀಲು ಬಳಿಯ ಎಕ್ಕಾರು ದೇವರಗುಡ್ಡೆ ನಿವಾಸಿ ಸಂತೋಷ್ (35) ಮೃತಪಟ್ಟವರು.

ಇವರು ಮಂಗಳೂರಿನ ಕಂಕನಾಡಿ ಠಾಣೆಯಲ್ಲಿ ಗೃಹರಕ್ಷಕ ದಳದ ಸಿಬ್ಬಂದಿಯಾಗಿದ್ದರು.ಸಂತೋಷ್ ಬುಧವಾರ ಸಂಜೆ ಶ್ರೀರಾಮ ಮಂದಿರ ಬಳಿ ಆಟೋದಲ್ಲಿ ಹೋಗುತ್ತಿದ್ದಾಗ ಕಣಜದ ಹುಳುಗಳ ದಾಳಿಗೊಳಗಾಗಿ ಕಿನ್ನಿಗೋಳಿ ಪರಿಸರದ ಶಾಲೆಯ ಕೆಲ ಮಕ್ಕಳು ಗಂಭೀರಾವಸ್ಥೆಯಲ್ಲಿದ್ದರು. ಇದನ್ನು ಕಂಡ ಸಂತೋಷ್ ಮಕ್ಕಳನ್ನು ಕಣಜದ ಹುಳುಗಳಿಂದ ರಕ್ಷಿಸಿ ಕಿನ್ನಿಗೋಳಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆನ್ನಲಾಗಿದೆ.

ಮಕ್ಕಳ ರಕ್ಷಣೆಯ ಸಂದರ್ಭ ಕಣಜದ ಹುಳು ಸಂತೋಷ್ ಅವರಿಗೂ ಕಡಿದಿದ್ದು, ಆದರೆ, ಅವರು ಯಾವುದೇ ಚಿಕಿತ್ಸೆ ಪಡೆಯದೆ ಮನೆ ಕಡೆ ತೆರಳಿದ್ದರೆನ್ನಲಾಗಿದೆ. ಮನೆಯಲ್ಲಿ ರಾತ್ರಿ ಸುಮಾರು 9 ಗಂಟೆಗೆ ಕುರ್ಚಿಯಲ್ಲಿ ಕುಳಿತ್ತಿದ್ದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

ಆರು ಮಕ್ಕಳ ರಕ್ಷಣೆ ಮಾಡಿದ ಸಂತೋಷ್ ಅವರ ಕಾರ್ಯ ಸಾಮಾಜಿಕ ಜಾಲತಾಣಗಳಲ್ಲಿ ಪ್ರಶಂಸೆಗೆ ಪಾತ್ರವಾಗಿದೆ. ಮೃತರು ತಾಯಿ, ಪತ್ನಿ, ಮೂವರು ಮಕ್ಕಳು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Vishwa News 24

Recent Posts

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ – vishwanews24

ಉಡುಪಿ: ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ನಿಷೇಧಿತ ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ ಆರೋಪಿ ಬಂಧನ - 1,52,000 ಮೌಲ್ಯದ…

2 hours ago

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ – vishwanews24

ಮಂಗಳೂರು: ಎಂಡಿಎಂಎ ಮಾರಾಟ ; ರೂ.2.10 ಲಕ್ಷ ಮೌಲ್ಯದ ಮಾದಕ ವಸ್ತು ಸಹಿತ ಆರೋಪಿ ಬಂಧನ ಮಂಗಳೂರು: ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳನ್ನು…

2 hours ago

ದೇಣಿಗೆ ಕಳ್ಳತನ ವಿವಾದ: ರಾಮಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ – vishwanews24

ರಾಮಮಂದಿರ ದೇಣಿಗೆ ಕಳ್ಳತನ ವಿವಾದ: ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಚಂಪತ್‌ ರಾಯ್‌ ರಾಜೀನಾಮೆ ಲಕ್ನೋ: ಅಯೋಧ್ಯೆ ರಾಮಮಂದಿರದಲ್ಲಿ ದೇಣಿಗೆ…

3 hours ago

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಗೃಹ ಸಚಿವ ಪ್ರಿಯಾಂಕ್‌ ಖರ್ಗೆ – vishwanews24

ಅಶ್ಲೀಲ ವಿಡಿಯೋ ಪ್ರಕರಣದಲ್ಲಿ ಎಫ್‌ಐಆರ್‌ ಕಡ್ಡಾಯ: ಪೊಲೀಸರಿಗೆ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಸೂಚನೆ  ಬೆಂಗಳೂರು: ಪ್ರತೀಕಾರಾತ್ಮಕ ಅಶ್ಲೀಲತೆ ಹಾಗೂ…

3 hours ago

ರಾಮ ಮಂದಿರ ದೇಣಿಗೆ ಹಣದಲ್ಲಿ ಅಕ್ರಮ ಎಸಗುವವರನ್ನು ಬಿಡುವುದಿಲ್ಲ: ಯೋಗಿ ಆದಿತ್ಯನಾಥ್‌ ಎಚ್ಚರಿಕೆ – vishwanews24

ರಾಮಭಕ್ತರ ಅಗ್ನಿಪರೀಕ್ಷೆ ಮಾಡಬೇಡಿ, ಭಕ್ತರು ತಮ್ಮ ನಂಬಿಕೆ ಮತ್ತು ಭಕ್ತಿಯಿಂದ ಕಾಣಿಕೆ ನೀಡುತ್ತಾರೆ : ಯೋಗಿ ಆದಿತ್ಯನಾಥ್‌ ಲಕ್ನೋ: ರಾಮಭಕ್ತರ…

3 hours ago

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ – vishwanews24

ಶನಿವಾರ ಶಾಲಾ ಸಮಯ ಬದಲಿಸಿದ ಶಿಕ್ಷಣ ಇಲಾಖೆ ; ಇನ್ನು ಮುಂದೆ ಶನಿವಾರ ಅರ್ಧದಿನ ಮಾತ್ರ ಶಾಲೆ ಬೆಂಗಳೂರು: ಶಾಲಾ…

5 hours ago