ಮಂಗಳೂರು : ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಲ್ಕಿಯ ರಾಷ್ಟ್ರೀಯ ಹೆದ್ದಾರಿ 66ರ ಕಾರ್ನಾಡು ಕೊಕ್ಕರಕಲ್ ಎಂಬಲ್ಲಿ ನಡೆದಿದೆ.
ಮೃತರನ್ನು ಚಿತ್ರಾಪು ಮರ್ಕುಂಜ ನಿವಾಸಿ ವನಜಾ ಪುರುಷೋತ್ತಮ ಪೂಜಾರಿ (59) ಎಂದು ಗುರುತಿಸಲಾಗಿದೆ.
ವನಜಾ ಅವರು ಜೆಸಿಂತಾ ಮಚಾದೊ ಎಂಬವರ ಜೊತೆ ಕೊಕ್ಕರಕಲ್ ಸಮೀಪವಿರುವ ಹಾಲು ಸೊಸೈಟಿಗೆ ನಡೆದುಕೊಂಡು ಹೋಗುತ್ತಿದ್ದಾಗ ಈ ಅಪಘಾತ ಸಂಭವಿಸಿದೆ. ವೇಗವಾಗಿ ಬಂದ ಕಾರು ಇಬ್ಬರಿಗೂ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಕಾರು ರಸ್ತೆ ಬದಿಯಲ್ಲಿದ್ದ ಕಬ್ಬಿಣದ ಸೈಡ್ ಗಾರ್ಡ್ಗೆ ಹೊಡೆದು ನಿಂತಿದೆ.
ಅಪಘಾತದ ತೀವ್ರತೆಗೆ ವನಜಾ ಅವರು ರಸ್ತೆಗೆ ಎಸೆಯಲ್ಪಟ್ಟು ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಜೊತೆಯಲ್ಲಿದ್ದ ಜೆಸಿಂತಾ ಮಚಾದೊ ಅವರು ಗಾಯಗೊಂಡಿದ್ದು, ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಮೃತ ವನಜಾ ಅವರು ಪತಿ ಮತ್ತು ಓರ್ವ ಪುತ್ರನನ್ನು ಅಗಲಿದ್ದಾರೆ.
ಮಂಗಳೂರು ಉತ್ತರ ಸಂಚಾರಿ ಪೊಲೀಸ್ ಇನ್ಸ್ಪೆಕ್ಟರ್ ಶಿವಕುಮಾರ್, ಮೂಲ್ಕಿ ಪೊಲೀಸ್ ಸಿಬ್ಬಂದಿ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಾರು ಚಾಲಕನನ್ನು ವಶಕ್ಕೆ ಪಡೆಯಲಾಗಿದ್ದು, ಘಟನೆಗೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಿಕೊಳ್ಳಲಾಗಿದೆ
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…