ಮೂಲ್ಕಿ: ಪತ್ನಿ ಮತ್ತು ಮೂವರು ಮಕ್ಕಳನ್ನು ಬಾವಿಗೆ ದೂಡಿ ಹಾಕಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆಗೆ ಸಂಬಂಧಪಟ್ಟಂತೆ ಬದುಕುಳಿದ ಆರೋಪಿ ತಂದೆ ವಿರುದ್ಧ ಮೂಲ್ಕಿ ಠಾಣೆಯಲ್ಲಿ ಐಪಿಸಿ 302ರಡಿ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ಹಿತೇಶ್ ಶೆಟ್ಟಿಗಾರ್ ಬಂಧಿತ ಆರೋಪಿ
ನಿನ್ನೆ ಸಂಜೆ ಮಂಗಳೂರು ಹೊರವಲಯದ ಕಿನ್ನಿಗೋಳಿ ಸಮೀಪದ ಪದ್ಮನೂರು ಶೆಟ್ಟಿಗಾಡುವಿನಲ್ಲಿ ಸಂಜೆ ಈ ದುರ್ಘಟನೆ ನಡೆದಿತ್ತು. ಪದ್ಮನೂರು ಶೆಟ್ಟಿಗಾಡು ನಿವಾಸಿ ಹಿತೇಶ್ ಶೆಟ್ಟಿಗಾರ್ ತನ್ನ ಮನೆ ಪಕ್ಕದ ಮುಖ್ಯ ರಸ್ತೆ ಬದಿಯಲ್ಲಿ ತೆಂಗಿನಕಾಯಿ, ಹಲಸು ವ್ಯಾಪಾರ ಮಾಡುತ್ತಿದ್ದು ಪತ್ನಿ ಲಕ್ಷೀ ಬೀಡಿ ಕಟ್ಟುತ್ತಿದ್ದು ಕಳೆದ ಒಂದು ವಾರದಿಂದ ಅಂಗಡಿಯೊಂದರಲ್ಲಿ ಕೆಲಸಕ್ಕೆ ಹೋಗುತ್ತಿದ್ದರು.
ನಿನ್ನೆ ಬೆಳಿಗ್ಗೆ ಎಂದಿನಂತೆ ಮಕ್ಕಳನ್ನು ಶಾಲೆಗೆ ಕಳುಹಿಸಿ ಕೆಲಸಕ್ಕೆ ಹೋಗಿ ಸಂಜೆ ವಾಪಾಸಾಗುತ್ತಿದ್ದಾಗ ಗಂಡ ಹಿತೇಶ್ ಶೆಟ್ಟಿಗಾರ್ ಬಳಿ ಮಕ್ಕಳು ಎಲ್ಲಿ ಎಂದು ವಿಚಾರಿಸಿದಾಗ, ಎಲ್ಲೂ ಅಡಗಿರಬಹುದು ಎಂದು ಹೇಳಿದ್ದಾನೆ,
ಮನೆಯಲ್ಲಿ ಹುಡುಕಿ ಸಿಗದಿದ್ದಾಗ ಸಮೀಪದ ಮನೆಯ ಬಾವಿ ಕಡೆ ಹುಡುಕಾಡಿದಾಗ ಬಾವಿಯಲ್ಲಿ ಮಕ್ಕಳು ನೀರಿನಲ್ಲಿ ಕಂಡು ರಕ್ಷಣೆಗೆ ಮುಂದಾದಾಗ ಪತ್ನಿಯನ್ನು ಹಿಂಬಾಲಿಸಿಕೊಂಡು ಬಂದ ಪತಿ, ಪತ್ನಿಯನ್ನೂ ಬಾವಿಗೆ ದೂಡಿ ತಾನೂ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ತಕ್ಷಣ ಸ್ಥಳೀಯರು ಬಂದು ಐವರನ್ನು ಮೇಲಕ್ಕೆತ್ತಿದ್ದು, ಮೂರು ಮಕ್ಕಳು ಸಾವನ್ನಪ್ಪಿದ್ದಾರೆ. ತಂದೆ-ತಾಯಿ ಬದುಕುಳಿದಿದ್ದಾರೆ.
ಇಂದು ಮೂವರು ಮಕ್ಕಳ ಮರಣೋತ್ತರ ಪರೀಕ್ಷೆ ಮೂಲ್ಕಿ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಯಲಿದೆ. ಆರೋಪಿ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…