ಮೂಲ್ಕಿ: ಪತ್ನಿ ಮತ್ತು ಮೂವರು ಮಕ್ಕಳನ್ನು ಬಾವಿಗೆ ದೂಡಿ ಹಾಕಿ ತಾನೂ ಆತ್ಮಹತ್ಯೆಗೆ ಯತ್ನಿಸಿದ ಘಟನೆಗೆ ಸಂಬಂಧಪಟ್ಟಂತೆ ಬದುಕುಳಿದ ಆರೋಪಿ ತಂದೆ ವಿರುದ್ಧ ಮೂಲ್ಕಿ ಠಾಣೆಯಲ್ಲಿ ಐಪಿಸಿ 302ರಡಿ ಕೊಲೆ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
ಹಿತೇಶ್ ಶೆಟ್ಟಿಗಾರ್ ಬಂಧಿತ ಆರೋಪಿ
ನಿನ್ನೆ ಸಂಜೆ ಮಂಗಳೂರು ಹೊರವಲಯದ ಕಿನ್ನಿಗೋಳಿ ಸಮೀಪದ ಪದ್ಮನೂರು ಶೆಟ್ಟಿಗಾಡುವಿನಲ್ಲಿ ಸಂಜೆ ಈ ದುರ್ಘಟನೆ ನಡೆದಿತ್ತು. ಪದ್ಮನೂರು ಶೆಟ್ಟಿಗಾಡು ನಿವಾಸಿ ಹಿತೇಶ್ ಶೆಟ್ಟಿಗಾರ್ ತನ್ನ ಮನೆ ಪಕ್ಕದ ಮುಖ್ಯ ರಸ್ತೆ ಬದಿಯಲ್ಲಿ ತೆಂಗಿನಕಾಯಿ, ಹಲಸು ವ್ಯಾಪಾರ ಮಾಡುತ್ತಿದ್ದು ಪತ್ನಿ ಲಕ್ಷೀ ಬೀಡಿ ಕಟ್ಟುತ್ತಿದ್ದು ಕಳೆದ ಒಂದು ವಾರದಿಂದ ಅಂಗಡಿಯೊಂದರಲ್ಲಿ ಕೆಲಸಕ್ಕೆ ಹೋಗುತ್ತಿದ್ದರು.
ನಿನ್ನೆ ಬೆಳಿಗ್ಗೆ ಎಂದಿನಂತೆ ಮಕ್ಕಳನ್ನು ಶಾಲೆಗೆ ಕಳುಹಿಸಿ ಕೆಲಸಕ್ಕೆ ಹೋಗಿ ಸಂಜೆ ವಾಪಾಸಾಗುತ್ತಿದ್ದಾಗ ಗಂಡ ಹಿತೇಶ್ ಶೆಟ್ಟಿಗಾರ್ ಬಳಿ ಮಕ್ಕಳು ಎಲ್ಲಿ ಎಂದು ವಿಚಾರಿಸಿದಾಗ, ಎಲ್ಲೂ ಅಡಗಿರಬಹುದು ಎಂದು ಹೇಳಿದ್ದಾನೆ,
ಮನೆಯಲ್ಲಿ ಹುಡುಕಿ ಸಿಗದಿದ್ದಾಗ ಸಮೀಪದ ಮನೆಯ ಬಾವಿ ಕಡೆ ಹುಡುಕಾಡಿದಾಗ ಬಾವಿಯಲ್ಲಿ ಮಕ್ಕಳು ನೀರಿನಲ್ಲಿ ಕಂಡು ರಕ್ಷಣೆಗೆ ಮುಂದಾದಾಗ ಪತ್ನಿಯನ್ನು ಹಿಂಬಾಲಿಸಿಕೊಂಡು ಬಂದ ಪತಿ, ಪತ್ನಿಯನ್ನೂ ಬಾವಿಗೆ ದೂಡಿ ತಾನೂ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ತಕ್ಷಣ ಸ್ಥಳೀಯರು ಬಂದು ಐವರನ್ನು ಮೇಲಕ್ಕೆತ್ತಿದ್ದು, ಮೂರು ಮಕ್ಕಳು ಸಾವನ್ನಪ್ಪಿದ್ದಾರೆ. ತಂದೆ-ತಾಯಿ ಬದುಕುಳಿದಿದ್ದಾರೆ.
ಇಂದು ಮೂವರು ಮಕ್ಕಳ ಮರಣೋತ್ತರ ಪರೀಕ್ಷೆ ಮೂಲ್ಕಿ ಸರ್ಕಾರಿ ಆಸ್ಪತ್ರೆಯಲ್ಲಿ ನಡೆಯಲಿದೆ. ಆರೋಪಿ ವಿರುದ್ಧ ಕೊಲೆ ಪ್ರಕರಣ ದಾಖಲಾಗಿದೆ.
ಬ್ರಹ್ಮಾವರ: ಖಾಸಗಿ ಬಸ್ ಬೆಂಕಿಗಾಹುತಿ ; ಅದೃಷ್ಟವಶಾತ್ ಏಳು ಪ್ರಯಾಣಿಕರು ಪಾರು ಉಡುಪಿ: ಉಡುಪಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ಸೊಂದು…
ಸುರತ್ಕಲ್ : ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸರಬರಾಜು ಆರೋಪ: ವ್ಯಕ್ತಿಯ ಬಂಧನ 1.206 ಕೆ.ಜಿ. ಗಾಂಜಾ, KTM ಮೋಟಾರ್ ಸೈಕಲ್…
ಸಕಲೇಶಪುರ–ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಪರಿಶೀಲನೆ ಕಡಬ : ಸಕಲೇಶಪುರ–ಸುಬ್ರಹ್ಮಣ್ಯ ರೋಡ್ ರೈಲು ಮಾರ್ಗದಲ್ಲಿ ನಡೆದ…
ಉಡುಪಿ : ಆ. 20 ರಂದು ನೇರ ಸಂದರ್ಶನ ಉಡುಪಿ : ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್…
ಉಡುಪಿ: ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿಕೊಳ್ಳಿ: ರಮೇಶ್ ಕಾಂಚನ್ ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ…
ಕರಾವಳಿಯಲ್ಲಿ ಹೈಕೋರ್ಟ್ ಪೀಠ ಸ್ಥಾಪನೆಗೆ ಆಗ್ರಹ: ಆ.22ರಂದು ಉಡುಪಿಯಲ್ಲಿ ಸಭೆ ಉಡುಪಿ: ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡ…