Featured

ಮೂಲ್ಕಿ: PFI ನಿಷೇಧ ಹಿನ್ನೆಲೆ NIAಯಿಂದ ಬಂಧಿತನಾಗಿರುವ ಹಳೆಯಂಗಡಿಯ ಮೊಯ್ದಿನ್‌ ಪತ್ನಿ ನಿಧನ : ಪೆರೋಲ್ ಮೇಲೆ ಆಗಮಿಸಿ ಪತ್ನಿಯ ಅಂತಿಮ ವಿಧಿ ವಿಧಾನ – Vishwanews24

ಮೂಲ್ಕಿ: PFI ನಿಷೇಧ ಹಿನ್ನೆಲೆ NIAಯಿಂದ ಬಂಧಿತನಾಗಿರುವ ಹಳೆಯಂಗಡಿಯ ಮೊಯ್ದಿನ್‌ ಪತ್ನಿ ನಿಧನ : ಪೆರೋಲ್ ಮೇಲೆ ಆಗಮಿಸಿ ಪತ್ನಿಯ ಅಂತಿಮ ವಿಧಿ ವಿಧಾನ

ಮೂಲ್ಕಿ: ಪಿಎಫ್‌ಐ ನಿಷೇಧದ ಹಿನ್ನೆಲೆಯಲ್ಲಿ ಎನ್‌ಐಎ ವತಿಯಿಂದ ಬಂಧಿತನಾಗಿರುವ ಹಳೆಯಂಗಡಿಯ ಮೊಯ್ದಿನ್‌ ಅವರು ನ್ಯಾಯಾಂಗ ಬಂಧನದಲ್ಲಿದ್ದರೆ ಅವರ ಪತ್ನಿ ಸೌದಾ ಅವರು ಅಸೌಖ್ಯದಿಂದ ನಿಧನ ಹೊಂದಿದ್ದು, ಇದೀಗ ಅವರ ನಾಲ್ಕು ಮಂದಿ ಪುಟ್ಟ ಮಕ್ಕಳು ಅನಾಥರಾಗಿ ಸಂಬಂಧಿಕರ ಮಡಿಲು ಸೇರುವಂತಾಗಿದೆ.

ಹಳೆಯಂಗಡಿ ಸಮೀಪದ ಇಂದಿರಾ ನಗರ ನಿವಾಸಿ ಮೊಯ್ದಿನ್‌ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಎಸ್‌ ಡಿಪಿಐ ಮುಖಂಡನಾಗಿದ್ದು, ಆತನನ್ನು ಎನ್ಐಎ ಅಧಿಕಾರಿಗಳು ಇತ್ತೀಚೆಗೆ ಬಂಧಿಸಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ.

ಕ್ಯಾನ್ಸರ್‌ ಕಾಯಿಲೆಯಿಂದ ಬಳಲುತ್ತಿದ್ದ ಅವರ ಪತ್ನಿ ಸೌದಾ ಡಿಸೆಂಬರ್‌ 6 ರಂದು ನಿಧನ ಹೊಂದಿದ್ದು, ಅವರ ಅಂತ್ಯ ಕ್ರಿಯೆಗೆ ಡಿಸೆಂಬರ್‌ 7 ರಂದು ಮಧ್ಯಾಹ್ನ ಮೊಯ್ದಿನ್‌ನನ್ನು ಪೊಲೀಸ್ ರಕ್ಷಣೆಯಲ್ಲಿ ಪೆರೋಲ್ ಮೇಲೆ ಹಳೆಯಂಗಡಿಗೆ ಕರೆ ತಂದು ಪತ್ನಿಯ ಅಂತಿಮ ದರ್ಶನ ಮಾಡಿಸಿ ರಾತ್ರಿ ಸುಮಾರು ಏಳು ಗಂಟೆ ವೇಳೆಗೆ ಪೊಲೀಸರು ಮಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ. ಮೊಯ್ದಿನ್‌ಗೆ ಒಂದು ವರ್ಷದ ಗಂಡು ಮಗು ಸೇರಿದಂತೆ ನಾಲ್ಕು ಪುಟ್ಟ ಮಕ್ಕಳಿದ್ದಾರೆ.

ನಿನ್ನೆ ತಮ್ಮ ತಂದೆ ಪೊಲೀಸ್ ಬೆಂಗಾವಲಿನಲ್ಲಿ ಮನೆಗೆ ಬಂದಾಗ ಮಕ್ಕಳ ಆನಂದಕ್ಕೆ ಪಾರವೇ ಇರಲಿಲ್ಲ. ತಂದೆ ಬಂದರೆಂದು ಅಪ್ಪನನ್ನು ಅಪ್ಪಿಕೊಂಡು ಸಂತಸದಲ್ಲಿ ತೇಲಾಡಿದ್ದರು. ಮೊಯ್ದಿನ್‌ ತನ್ನ ಮಕ್ಕಳ ಜತೆ ಮಾತನಾಡಿ ಆವರನ್ನು ಮುದ್ದಿಸಿ ಸಂತೈಸಿದ್ದನು.

ಮೊಯ್ದೀನ್ ಅವರ ಬಂಧನದ ಬಗ್ಗೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆ ನಡೆಯುತ್ತಿದೆ. ಪಿಎಫ್ಐ ನಿಷೇಧದ ವೇಳೆ ಬಂಧನವಾಗಿರುವ ಇವರು ಅಮಾಯಕರು ಅವರನ್ನು ಕಠಿಣ ಕಾಯ್ದೆಯಡಿ ಸರಕಾರ ಬಂಧಿಸಿ ಜೈಲಿಗೆ ಹಾಕಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ ಕೇಳಿ ಬಂದಿದೆ.

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

22 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

22 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

4 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

4 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

4 days ago