ಮೂಲ್ಕಿ: ಪಿಎಫ್ಐ ನಿಷೇಧದ ಹಿನ್ನೆಲೆಯಲ್ಲಿ ಎನ್ಐಎ ವತಿಯಿಂದ ಬಂಧಿತನಾಗಿರುವ ಹಳೆಯಂಗಡಿಯ ಮೊಯ್ದಿನ್ ಅವರು ನ್ಯಾಯಾಂಗ ಬಂಧನದಲ್ಲಿದ್ದರೆ ಅವರ ಪತ್ನಿ ಸೌದಾ ಅವರು ಅಸೌಖ್ಯದಿಂದ ನಿಧನ ಹೊಂದಿದ್ದು, ಇದೀಗ ಅವರ ನಾಲ್ಕು ಮಂದಿ ಪುಟ್ಟ ಮಕ್ಕಳು ಅನಾಥರಾಗಿ ಸಂಬಂಧಿಕರ ಮಡಿಲು ಸೇರುವಂತಾಗಿದೆ.
ಹಳೆಯಂಗಡಿ ಸಮೀಪದ ಇಂದಿರಾ ನಗರ ನಿವಾಸಿ ಮೊಯ್ದಿನ್ ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಎಸ್ ಡಿಪಿಐ ಮುಖಂಡನಾಗಿದ್ದು, ಆತನನ್ನು ಎನ್ಐಎ ಅಧಿಕಾರಿಗಳು ಇತ್ತೀಚೆಗೆ ಬಂಧಿಸಿ ಬೆಂಗಳೂರಿಗೆ ಕರೆದೊಯ್ದಿದ್ದಾರೆ.
ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದ ಅವರ ಪತ್ನಿ ಸೌದಾ ಡಿಸೆಂಬರ್ 6 ರಂದು ನಿಧನ ಹೊಂದಿದ್ದು, ಅವರ ಅಂತ್ಯ ಕ್ರಿಯೆಗೆ ಡಿಸೆಂಬರ್ 7 ರಂದು ಮಧ್ಯಾಹ್ನ ಮೊಯ್ದಿನ್ನನ್ನು ಪೊಲೀಸ್ ರಕ್ಷಣೆಯಲ್ಲಿ ಪೆರೋಲ್ ಮೇಲೆ ಹಳೆಯಂಗಡಿಗೆ ಕರೆ ತಂದು ಪತ್ನಿಯ ಅಂತಿಮ ದರ್ಶನ ಮಾಡಿಸಿ ರಾತ್ರಿ ಸುಮಾರು ಏಳು ಗಂಟೆ ವೇಳೆಗೆ ಪೊಲೀಸರು ಮಂಗಳೂರಿಗೆ ಕರೆದುಕೊಂಡು ಹೋಗಿದ್ದಾರೆ. ಮೊಯ್ದಿನ್ಗೆ ಒಂದು ವರ್ಷದ ಗಂಡು ಮಗು ಸೇರಿದಂತೆ ನಾಲ್ಕು ಪುಟ್ಟ ಮಕ್ಕಳಿದ್ದಾರೆ.
ನಿನ್ನೆ ತಮ್ಮ ತಂದೆ ಪೊಲೀಸ್ ಬೆಂಗಾವಲಿನಲ್ಲಿ ಮನೆಗೆ ಬಂದಾಗ ಮಕ್ಕಳ ಆನಂದಕ್ಕೆ ಪಾರವೇ ಇರಲಿಲ್ಲ. ತಂದೆ ಬಂದರೆಂದು ಅಪ್ಪನನ್ನು ಅಪ್ಪಿಕೊಂಡು ಸಂತಸದಲ್ಲಿ ತೇಲಾಡಿದ್ದರು. ಮೊಯ್ದಿನ್ ತನ್ನ ಮಕ್ಕಳ ಜತೆ ಮಾತನಾಡಿ ಆವರನ್ನು ಮುದ್ದಿಸಿ ಸಂತೈಸಿದ್ದನು.
ಮೊಯ್ದೀನ್ ಅವರ ಬಂಧನದ ಬಗ್ಗೆ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆ ನಡೆಯುತ್ತಿದೆ. ಪಿಎಫ್ಐ ನಿಷೇಧದ ವೇಳೆ ಬಂಧನವಾಗಿರುವ ಇವರು ಅಮಾಯಕರು ಅವರನ್ನು ಕಠಿಣ ಕಾಯ್ದೆಯಡಿ ಸರಕಾರ ಬಂಧಿಸಿ ಜೈಲಿಗೆ ಹಾಕಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಆಕ್ಷೇಪ ಕೇಳಿ ಬಂದಿದೆ.
ರೇಣುಕಾಸ್ವಾಮಿ ಕೊಲೆ ಪ್ರಕರಣ : ದರ್ಶನ್ ಅರ್ಜಿ ವಿಚಾರಣೆಗೆ ಅರ್ಹವಲ್ಲ: ಮತ್ತೊಮ್ಮೆ ಜಾಮೀನು ತಿರಸ್ಕರಿಸಿದ ಸುಪ್ರೀಂ ನಟ ದರ್ಶನ್ ರೇಣುಕಾ…
ಗೃಹ ಜ್ಯೋತಿ ಪರಿಶೀಲನೆ: ಪ್ರವರ್ಗ ಮಾಹಿತಿ (ಜಾತಿ ಪ್ರಮಾಣಪತ್ರ) ಕಡ್ಡಾಯವಲ್ಲ ಬೆಂಗಳೂರು: ರಾಜ್ಯಾದ್ಯಂತ ಜುಲೈ 1 ರಿಂದ ಆರಂಭಗೊಂಡಿರುವ ಗೃಹ ಜ್ಯೋತಿ…
ಎಸ್ಐಆರ್ ಪ್ರಕ್ರಿಯೆಯಲ್ಲಿ ಭಾರೀ ಅಕ್ರಮ : ಸಮಗ್ರ ತನಿಖೆಗೆ ಪ್ರಲ್ಹಾದ ಜೋಶಿ ಆಗ್ರಹ ನವದೆಹಲಿ: ರಾಮನಗರ ಜಿಲ್ಲೆಯಲ್ಲಿ ನಡೆದ ಮತದಾರರ…
ಅಕ್ರಮ ಎಸ್ಐಆರ್ ಪ್ರಕ್ರಿಯೆ : 2028ರ ಚುನಾವಣೆ ಗೆಲ್ಲಲು ಬಾಂಗ್ಲಾದೇಶಿಯರ ಸಕ್ರಮಕ್ಕೆ ಕಾಂಗ್ರೆಸ್ ಸಂಚು : ಶೋಭಾ ಕರಂದ್ಲಾಜೆ ಗಂಭೀರ…
ಮೂಲ ನೆಲದಿಂದ ಬೇರ್ಪಡಿಸಿ ಕರಾವಳಿಯ ಮಣ್ಣಿನ ಸಂಸ್ಕೃತಿಯ ಪಾವಿತ್ರ್ಯಕ್ಕೆ ಧಕ್ಕೆ ತರಬೇಡಿ .. ಕರಾವಳಿ ಕಂಬಳವು ತನ್ನದೇ ಆದ ಆಳವಾದ ಸಾಂಪ್ರದಾಯಿಕ…
ಮಂಗಳೂರು:ಸಾಮಾಜಿಕ ಜಾಲತಾಣಗಳಲ್ಲಿ ಸೆಲಿನಾ ಟ್ರಾವೆಲ್ಸ್ ವಿರುದ್ಧ ಹರಿದಾಡಿದ ಕರಪತ್ರ : ಪೊಲೀಸ್ ಇಲಾಖೆ ಸ್ಪಷ್ಟನೆ ಮಂಗಳೂರು: ಖಾಸಗಿ ಸಾರಿಗೆ ಸಂಸ್ಥೆಯಾದ…