Featured

ಮೂಳೂರು: ಕಾರು ಢಿಕ್ಕಿ; ಉದ್ಯಮಿ ಬಾಲಕೃಷ್ಣ ಜಿ. ಪೂಜಾರಿ ಸಾವು – Vishwanews24

ಮೂಳೂರು: ಕಾರು ಢಿಕ್ಕಿ; ಉದ್ಯಮಿ ಬಾಲಕೃಷ್ಣ ಜಿ. ಪೂಜಾರಿ ಸಾವು ..

ಮೂಳೂರು ಬಿಲ್ಲವ ಸಂಘ ಸಂತಾಪ

ರಾಷ್ಟ್ರೀಯ ಹೆದ್ದಾರಿ 66 ರ ಮೂಳೂರು ಬಿಲ್ಲವರ ಸಂಘದ ಮುಂಭಾಗದಲ್ಲಿ ರವಿವಾರ (ಜ.15) ಸಂಜೆ ಕಾರು ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಗಾಯಾಳು ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ (ಜ.16) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.‌

ಅಪಘಾತದ ಗಾಯಾಳು ಮೂಳೂರು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಗೌರವಾಧ್ಯಕ್ಷ, ಮುಂಬಯಿಯ ಉದ್ಯಮಿ ಬಾಲಕೃಷ್ಣ ಜಿ. ಪೂಜಾರಿ (60) ಮೃತ ವ್ಯಕ್ತಿ.

ಮುಂಬಯಿಯ ಹಿರಿಯ ಉದ್ಯಮಿ ಮತ್ತು ಧಾರ್ಮಿಕ / ಸಾಮಾಜಿಕ ಮುಖಂಡರಾಗಿದ್ದ ದಿ‌. ಗಿರಿಯ ಪೂಜಾರಿ ಅವರ ಪುತ್ರರಾಗಿದ್ದ ಅವರು ಎರಡು ದಿನಗಳ ಹಿಂದೆ ಊರಿಗೆ‌ ಬಂದಿದ್ದು, ಸ್ವಗೃಹ ಮೂಳೂರು ಶಶಿಭವನದಲ್ಲಿ ವಾಸವಿದ್ದರು‌.

ರವಿವಾರ ಸಂಜೆ‌ ಅಂಗಡಿಗೆ ತೆರಳಿ, ಅಲ್ಲಿಂದ ಮನೆಗೆ ವಾಪಸ್ಸಾಗುತ್ತಿದ್ದಾಗ ಮನೆ ಸಮೀಪದಲ್ಲೇ ಕಾರು‌ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದರು. ತಲೆಗೆ ಗಂಭೀರ ಗಾಯಗೊಂಡಿದ್ದ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಮೃತರು ಪತ್ನಿ, ಪುತ್ರಿ ಮತ್ತು ಸಹೋದರ – ಸಹೋದರಿಯರನ್ನು ಅಗಲಿದ್ದಾರೆ.

ಮೂಳೂರು ಬಿಲ್ಲವ ಸಂಘದ ಕಟ್ಟಡ ನಿರ್ಮಾಣಕ್ಕೆ ಇವರ ಕುಟುಂಬ ಕೊಡುಗೆ ನೀಡಿದ್ದರು.ಇವರ ಅಕಾಲಿಕ ಮರಣ ಬಿಲ್ಲವ ಸಮಾಜಕ್ಕೆ ತುಂಬಲಾರದ ನಷ್ಟವಾಗಿದ್ದು ಕುಟುಂಬಕ್ಕೆ ಈ ಘಟನೆಯ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿ. ದುಃಖತಪ್ತ ಕುಟುಂಬಕ್ಕೆ ಮೂಳೂರು ಬಿಲ್ಲವ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಸದಸ್ಯರು ಸಂತಾಪ ಸೂಚಿಸಿದ್ದಾರೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ಅರಿಶಿಣ ಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ಅಧಿಕೃತ ಪರೀಕ್ಷೆಗೆ ಸರ್ಕಾರ ಆದೇಶ – vishwanews24

ಅರಿಶಿಣಪುಡಿ, ಮಸಾಲೆ ಪುಡಿಗಳಲ್ಲಿ ಸೀಸದ ಅಂಶ ಪತ್ತೆ: ಅಧಿಕೃತ ಪರೀಕ್ಷೆಗೆ ಸರ್ಕಾರ ಆದೇಶ ಬೆಂಗಳೂರು: ದಿನನಿತ್ಯ ಬಳಸುವ ಅರಿಶಿಣಪುಡಿ ಹಾಗೂ…

13 hours ago

ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ:  ಕೆ. ಎನ್ ರಾಜಣ್ಣ ಸ್ಫೋಟಕ ಹೇಳಿಕೆ – vishwanews24

ಸಿಎಂ ಅಧಿಕಾರದಲ್ಲಿ ಮುಂದುವರಿಯಲು ಸಿದ್ಧ, ಪದತ್ಯಾಗಕ್ಕೂ ಸಿದ್ಧ:  ಕೆಎನ್ ರಾಜಣ್ಣ ಸ್ಫೋಟಕ ಹೇಳಿಕೆ ಬೆಂಗಳೂರು: ಮೇ 15ರ ಒಳಗಡೆ ಕಾಂಗ್ರೆಸ್‌…

14 hours ago

ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ: ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂ ಸ್ಟೇಗಳು ಪತ್ತೆ – vishwanews24

ಉಡುಪಿ ಪೊಲೀಸರ ವಿಶೇಷ ಕಾರ್ಯಾಚರಣೆ: ಜಿಲ್ಲೆಯಲ್ಲಿ ಒಟ್ಟು 32 ಅಕ್ರಮ ಹೋಂ ಸ್ಟೇಗಳು ಪತ್ತೆ ಉಡುಪಿ: ಕೊಡಗು ಜಿಲ್ಲೆಯ ಹೋಂಸ್ಟೇಯೊಂದರಲ್ಲಿ…

14 hours ago

ಬೆಂಗಳೂರು: ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ : 6 ವಿದೇಶಿ ಮಹಿಳೆಯರ ಬಂಧನ – vishwanews24

ಬೆಂಗಳೂರು: ರಸ್ತೆಯಲ್ಲಿ ನಿಂತು ವೇಶ್ಯವಾಟಿಕೆಗೆ ಪ್ರಚೋದನೆ : 6 ವಿದೇಶಿ ಮಹಿಳೆಯರ ಬಂಧನ ಬೆಂಗಳೂರು: ನಗರದ ಕೋರಮಂಗಲ ಚೆಕ್‌ಪೋಸ್ಟ್‌ ಬಳಿ …

14 hours ago

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  – vishwanews24

ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್  ಕೊಲ್ಲೂರು:…

15 hours ago

ಮಹಿಳಾ ಸಬಲೀಕರಣಕ್ಕಾಗಿ ಹೋರಾಟ ಮಾಡಿದ ಇತಿಹಾಸ ಕಾಂಗ್ರೆಸ್ ನದ್ದು : ಸಚಿವೆ ಲಕ್ಷ್ಮೀ ಹೆಬ್ಬಾಳಕರ್ – vishwanews24

ಕಾಂಗ್ರೆಸ್ ಯಾವತ್ತೂ ಮಹಿಳಾ ವಿರೋಧಿ ಅಲ್ಲ, ಬಿಜೆಪಿಯದ್ದು ರಾಜಕೀಯ ಆಟ :ಸಚಿವೆ ಲಕ್ಷ್ಮೀ ಹೆಬ್ಬಾಳಕರ್  ಬೆಳಗಾವಿ : ಕಾಂಗ್ರೆಸ್ ಯಾವತ್ತೂ…

15 hours ago