Featured

ಮೂಳೂರು: ಕಾರು ಢಿಕ್ಕಿ; ಉದ್ಯಮಿ ಬಾಲಕೃಷ್ಣ ಜಿ. ಪೂಜಾರಿ ಸಾವು – Vishwanews24

ಮೂಳೂರು: ಕಾರು ಢಿಕ್ಕಿ; ಉದ್ಯಮಿ ಬಾಲಕೃಷ್ಣ ಜಿ. ಪೂಜಾರಿ ಸಾವು ..

ಮೂಳೂರು ಬಿಲ್ಲವ ಸಂಘ ಸಂತಾಪ

ರಾಷ್ಟ್ರೀಯ ಹೆದ್ದಾರಿ 66 ರ ಮೂಳೂರು ಬಿಲ್ಲವರ ಸಂಘದ ಮುಂಭಾಗದಲ್ಲಿ ರವಿವಾರ (ಜ.15) ಸಂಜೆ ಕಾರು ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದ ಗಾಯಾಳು ಚಿಕಿತ್ಸೆ ಫಲಕಾರಿಯಾಗದೇ ಸೋಮವಾರ (ಜ.16) ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.‌

ಅಪಘಾತದ ಗಾಯಾಳು ಮೂಳೂರು ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಗೌರವಾಧ್ಯಕ್ಷ, ಮುಂಬಯಿಯ ಉದ್ಯಮಿ ಬಾಲಕೃಷ್ಣ ಜಿ. ಪೂಜಾರಿ (60) ಮೃತ ವ್ಯಕ್ತಿ.

ಮುಂಬಯಿಯ ಹಿರಿಯ ಉದ್ಯಮಿ ಮತ್ತು ಧಾರ್ಮಿಕ / ಸಾಮಾಜಿಕ ಮುಖಂಡರಾಗಿದ್ದ ದಿ‌. ಗಿರಿಯ ಪೂಜಾರಿ ಅವರ ಪುತ್ರರಾಗಿದ್ದ ಅವರು ಎರಡು ದಿನಗಳ ಹಿಂದೆ ಊರಿಗೆ‌ ಬಂದಿದ್ದು, ಸ್ವಗೃಹ ಮೂಳೂರು ಶಶಿಭವನದಲ್ಲಿ ವಾಸವಿದ್ದರು‌.

ರವಿವಾರ ಸಂಜೆ‌ ಅಂಗಡಿಗೆ ತೆರಳಿ, ಅಲ್ಲಿಂದ ಮನೆಗೆ ವಾಪಸ್ಸಾಗುತ್ತಿದ್ದಾಗ ಮನೆ ಸಮೀಪದಲ್ಲೇ ಕಾರು‌ ಢಿಕ್ಕಿ ಹೊಡೆದು ಗಂಭೀರ ಗಾಯಗೊಂಡಿದ್ದರು. ತಲೆಗೆ ಗಂಭೀರ ಗಾಯಗೊಂಡಿದ್ದ ಅವರನ್ನು ಉಡುಪಿ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.

ಮೃತರು ಪತ್ನಿ, ಪುತ್ರಿ ಮತ್ತು ಸಹೋದರ – ಸಹೋದರಿಯರನ್ನು ಅಗಲಿದ್ದಾರೆ.

ಮೂಳೂರು ಬಿಲ್ಲವ ಸಂಘದ ಕಟ್ಟಡ ನಿರ್ಮಾಣಕ್ಕೆ ಇವರ ಕುಟುಂಬ ಕೊಡುಗೆ ನೀಡಿದ್ದರು.ಇವರ ಅಕಾಲಿಕ ಮರಣ ಬಿಲ್ಲವ ಸಮಾಜಕ್ಕೆ ತುಂಬಲಾರದ ನಷ್ಟವಾಗಿದ್ದು ಕುಟುಂಬಕ್ಕೆ ಈ ಘಟನೆಯ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸಿ. ದುಃಖತಪ್ತ ಕುಟುಂಬಕ್ಕೆ ಮೂಳೂರು ಬಿಲ್ಲವ ಸಂಘದ ಅಧ್ಯಕ್ಷರು ಪದಾಧಿಕಾರಿಗಳು ಸದಸ್ಯರು ಸಂತಾಪ ಸೂಚಿಸಿದ್ದಾರೆ.

Join our Whatsapp group by clicking the below link 👇👇

https://chat.whatsapp.com/KfUmhXQKZb114i4QHNvqEK 

Vishwa News 24

Recent Posts

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ -vishwanews24

ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ  ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…

11 hours ago

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ -vishwanews24

ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…

11 hours ago

ಉಪ್ಪೂರು : ವಯೋವಂದನ ಆತಿಥ್ಯ ಗೃಹ “ಸೈಟ್ ಆಫೀಸ್” ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ -vishwanews24

ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…

3 days ago

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ – ಬೈಕ್ ನಡುವೆ ಭೀಕರ ಅಪಘಾತ : ಸವಾರ ಸ್ಥಳದಲ್ಲೇ ಮೃತ್ಯು – vishwanews24

ಪುತ್ತೂರು:  ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ನಡುವೆ  ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…

3 days ago

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ – vishwanews24

ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…

3 days ago

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ – vishwanews24

ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…

3 days ago