ಕಾಪು: ಕಾಪು ತಾಲೂಕಿನ ಮೂಳೂರು ಗ್ರಾಮದಲ್ಲಿ ಕಾಪು ಪುರಸಭೆ ವತಿಯಿಂದ ನಿರ್ಮಿಸಲು ಹೊರಟಿರುವ ಕೊಳಚೆ ನೀರು ಶುದ್ಧೀಕರಣ ಘಟಕ (STP) ನಿರ್ಮಾಣ ವಿರೋಧಿಸಿ ಎಸ್.ಟಿ.ಪಿ ನಿರ್ಮಾಣ ವಿರೋಧ ಸಮಿತಿ, ಮೂಳೂರು ವತಿಯಿಂದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಈ ಪ್ರತಿಭಟನೆಯಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿದ್ದು ವಿಶೇಷ.
ಪುರಸಭೆಗೆ ಕೊಳಚೆ ನೀರು ಶುದ್ಧೀಕರಣ ಘಟಕ (STP) ಅತ್ಯಗತ್ಯ. ಆದರೆ ಇದರಿಂದ ಸ್ಥಳೀಯರಿಗೆ ಸಮಸ್ಯೆ ಆಗಲಿದ್ದು ಸ್ಥಳೀಯರಿಂದ ವಿರೋಧ ಇರುವುದರಿಂದ ಪರಿಸರ ಸಂಬಂದಿ ಇತರೆ ಸಮಸ್ಯೆ ಎದುರಾಗುವುದರಿಂದ ಇದಕ್ಕೆ ಪರ್ಯಾಯವಾಗಿ ತಕ್ಷಣವೇ ಬೇರೆ ಕಡೆಗೆ ಸ್ಥಳಾಂತರಿಸುವಂತೆ ಅಥವಾ ಬದಲಿ ಸ್ಥಳ ಗುರುತಿಸುವಂತೆ ಸಂಬಂದಿಸಿದ ಅಧಿಕಾರಿಗಳಿಗೆ ಶಾಸಕರು ಸೂಚಿಸಿದರು.
ಇದನ್ನೂ ಓದಿ:
ಮೂಳೂರು ಎಸ್.ಟಿ.ಪಿ ನಿರ್ಮಾಣ ವಿರೋಧ ಸಮಿತಿ ಅವರೊಂದಿಗೆ ಶಾಸಕರು ಕಾಪು ತಹಶೀಲ್ದಾರ್ ಅಂನತ ಶಂಕರ್ ಹಾಗೂ ಕಾಪು ಪುರಸಭೆಯ ಮುಖ್ಯಾಧಿಕಾರಿ ನೀಲಕಂಠ ಮೇಸ್ತಾ ಅವರಿಗೆ ಮೂಳೂರು ಪರಿಸರದಲ್ಲಿ ಕೊಳಚೆ ನೀರು ಶುದ್ಧೀಕರಣ ಘಟಕ (STP) ನಿರ್ಮಿಸದಂತೆ ಮನವಿ ಸಲ್ಲಿಸಿದರು.
ಬೆಳ್ತಂಗಡಿ: ಕೆಎಸ್ಸಾರ್ಟಿಸಿ ಬಸ್ ಹಾಗೂ ಬೈಕ್ ಢಿಕ್ಕಿ; ಸವಾರ ಮೃತ್ಯು, ಸಹ ಸವಾರ ಗಂಭೀರ ಬೆಳ್ತಂಗಡಿ: ನೀರಚಿಲುಮೆಯ ತಿರುವಿನಲ್ಲಿ ಕೆಎಸ್ಸಾರ್ಟಿಸಿ…
ಮೂಡುಬಿದಿರೆ: ಮನೆಯಲ್ಲಿ ಸಿಲಿಂಡರ್ ಸ್ಫೋಟ; ಮೂವರಿಗೆ ಗಾಯ, ಓರ್ವನ ಸ್ಥಿತಿ ಗಂಭೀರ ಮೂಡುಬಿದಿರೆ : ಮನೆಯಲ್ಲಿನ ಸಿಲಿಂಡರ್ ಸ್ಫೋಟಗೊಂಡ ಪರಿಣಾಮ…
ಉಡುಪಿ : ಮರಕ್ಕೆ ಬೈಕ್ ಢಿಕ್ಕಿ ; ಯುವಕ ಮೃತ್ಯು ಉಡುಪಿ: ಮಣಿಪಾಲದಿಂದ ಪರ್ಕಳ ಕಡೆಗೆ ತೆರಳುತ್ತಿದ್ದ ಬುಲೆಟ್ ಬೈಕ್…
ಉಡುಪಿ: ಸಾಯಿರಾಜ್ ಸೊಸೈಟಿ ಸಿಇಒ ಆತ್ಮಹತ್ಯೆ ಪ್ರಕರಣ.. ಕ್ರಿಕೆಟ್ ಬೆಟ್ಟಿಂಗ್ನಲ್ಲಿ ಕೋಟ್ಯಂತರ ರೂಪಾಯಿ ನಷ್ಟ ; ಡೆತ್ ನೋಟ್ ನಲ್ಲಿ…
ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…
ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…