ಕಾಪು : ರಾಷ್ಟ್ರೀಯ ಹೆದ್ದಾರಿ 66 ಮೂಳೂರು ಭಾರತ್ ಪೆಟ್ರೋಲಿಯಂ ಪಂಪ್ನಲ್ಲಿ ಫ್ಯೂಯೆಲ್ ಹಾಕಿಸಿಕೊಳ್ಳಲು ಬಂದ ಕಾರು ಚಾಲಕನೋರ್ವ ಕ್ಷುಲ್ಲಕ ಕಾರಣಕ್ಕೆ ಧಾಂದಲೆ ನಡೆಸಿ ಸಿಬಂದಿಯ ಮೇಲೆ ಹಲ್ಲೆ ನಡೆಸಿದ ಘಟನೆ ರವಿವಾರ ರಾತ್ರಿ ನಡೆದಿದೆ.
ಕಾರು ಚಾಲಕ ತನ್ನ ಕಾರಿಗೆ ಡಿಸೇಲ್ ಹಾಕಿಸಲೆಂದು ಬಂದು ಎರಡು ಸಾವಿರ ರೂಪಾಯಿ ಮೊತ್ತದ ಡೀಸೆಲ್ ಹಾಕುವಂತೆ ಹೇಳಿದ್ದನು. ಆ ವೇಳೆ ಪಂಪ್ ಸಿಬಂದಿ ಅಂಕಿತ್ ಎಂಬಾತ ತಪ್ಪಿ ಪೆಟ್ರೋಲ್ ಗನ್ಎತ್ತಿದ್ದು ಇದರಿಂದ ಆಕ್ರೋಶಿತನಾದ ಚಾಲಕ ಪೆಟ್ರೋಲ್ ಮತ್ತು ಡೀಸೆಲ್ ಯುನಿಟ್ಗಳಿಗೆ ಕಾಲಿನಿಂದ ತುಳಿದು ಸೆ„ಪಿಂಗ್ ಮೆಷೀನ್ ಅನ್ನು ಕಿತ್ತುಕೊಂಡು ಒಡೆದು ಹಾಕಿ, ಧಾಂದಲೆ ನಡೆಸಿದ್ದನು.
ಘಟನೆಯನ್ನು ವಿಚಾರಿಸಲು ಬಂದ ಪಂಪ್ನ ಸೂಪರ್ವೈಸರ್ ಪುಷ್ಪರಾಜ್ ಎಂಬವರು ನಿಮ್ಮ ಹಣ ಹಿಂದೆ ಹಾಕಿದ್ದೇವೆ ಎಂದರೂ ಕೇಳದೆ ಅವರ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ಹಲ್ಲೆಗೊಳಗಾದ ಸೂಪರ್ವೈಸರ್ ಪುಷ್ಪರಾಜ್ ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.
ಈ ಬಗ್ಗೆ ಅಪರಿಚಿತ ಚಾಲಕನ ವಿರುದ್ಧ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಉಳ್ಳಾಲ: ನಾಪತ್ತೆಯಾಗಿದ್ದ ಕುಂದಾಪುರ ಮೂಲದ ಮೀನುಗಾರನ ಮೃತದೇಹ ಪತ್ತೆ ಉಳ್ಳಾಲ : ಮೀನುಗಾರಿಕೆಗೆ ತೆರಳಿದ್ದ ವೇಳೆ ದೈತ್ಯ ಗಾತ್ರದ ಅಲೆಗೆ…
ನಿರೂಪಣಾ ವೃತ್ತಿಗೆ ಅಧಿಕೃತವಾಗಿ ನಿವೃತ್ತಿ ಘೋಷಿಸಿದ ಅನುಪಮಾ ಗೌಡ ಬೆಂಗಳೂರು : ನಟಿ ಅನುಪಮಾ ಗೌಡ ಅವರು ನಟನೆಯ ಮೂಲಕ…
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…