Featured

ಮೂಳೂರು : ಪೆಟ್ರೋಲ್‌ ಪಂಪ್‌ನಲ್ಲಿ ಕಾರು ಚಾಲಕನಿಂದ ಧಾಂದಲೆ ; ಸಿಬಂದಿಗೆ ಹಲ್ಲೆ – Vishwanews24

ಮೂಳೂರು : ಪೆಟ್ರೋಲ್‌ ಪಂಪ್‌ನಲ್ಲಿ ಕಾರು ಚಾಲಕನಿಂದ ಧಾಂದಲೆ ; ಸಿಬಂದಿಗೆ ಹಲ್ಲೆ

ಕಾಪು : ರಾಷ್ಟ್ರೀಯ ಹೆದ್ದಾರಿ 66 ಮೂಳೂರು ಭಾರತ್‌ ಪೆಟ್ರೋಲಿಯಂ ಪಂಪ್‌ನಲ್ಲಿ ಫ್ಯೂಯೆಲ್‌ ಹಾಕಿಸಿಕೊಳ್ಳಲು ಬಂದ ಕಾರು ಚಾಲಕನೋರ್ವ ಕ್ಷುಲ್ಲಕ ಕಾರಣಕ್ಕೆ ಧಾಂದಲೆ ನಡೆಸಿ ಸಿಬಂದಿಯ ಮೇಲೆ ಹಲ್ಲೆ ನಡೆಸಿದ ಘಟನೆ ರವಿವಾರ ರಾತ್ರಿ ನಡೆದಿದೆ.

ಕಾರು ಚಾಲಕ ತನ್ನ ಕಾರಿಗೆ ಡಿಸೇಲ್‌ ಹಾಕಿಸಲೆಂದು ಬಂದು ಎರಡು ಸಾವಿರ ರೂಪಾಯಿ ಮೊತ್ತದ ಡೀಸೆಲ್‌ ಹಾಕುವಂತೆ ಹೇಳಿದ್ದನು. ಆ ವೇಳೆ ಪಂಪ್‌ ಸಿಬಂದಿ ಅಂಕಿತ್‌ ಎಂಬಾತ ತಪ್ಪಿ ಪೆಟ್ರೋಲ್‌ ಗನ್‌ಎತ್ತಿದ್ದು ಇದರಿಂದ ಆಕ್ರೋಶಿತನಾದ ಚಾಲಕ ಪೆಟ್ರೋಲ್‌ ಮತ್ತು ಡೀಸೆಲ್‌ ಯುನಿಟ್‌ಗಳಿಗೆ ಕಾಲಿನಿಂದ ತುಳಿದು ಸೆ„ಪಿಂಗ್‌ ಮೆಷೀನ್‌ ಅನ್ನು ಕಿತ್ತುಕೊಂಡು ಒಡೆದು ಹಾಕಿ, ಧಾಂದಲೆ ನಡೆಸಿದ್ದನು.

ಘಟನೆಯನ್ನು ವಿಚಾರಿಸಲು ಬಂದ ಪಂಪ್‌ನ ಸೂಪರ್‌ವೈಸರ್‌ ಪುಷ್ಪರಾಜ್‌ ಎಂಬವರು ನಿಮ್ಮ ಹಣ ಹಿಂದೆ ಹಾಕಿದ್ದೇವೆ ಎಂದರೂ ಕೇಳದೆ ಅವರ ಮೇಲೆ ಹಲ್ಲೆ ನಡೆಸಿರುವುದಾಗಿ ಆರೋಪಿಸಲಾಗಿದೆ. ಹಲ್ಲೆಗೊಳಗಾದ ಸೂಪರ್‌ವೈಸರ್‌ ಪುಷ್ಪರಾಜ್‌ ಉಡುಪಿ ಅಜ್ಜರಕಾಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದುಕೊಂಡಿದ್ದಾರೆ.

ಈ ಬಗ್ಗೆ ಅಪರಿಚಿತ ಚಾಲಕನ ವಿರುದ್ಧ ಕಾಪು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Vishwa News 24

Recent Posts

ಮೇ 1 ರಿಂದ ಶಿವಮೊಗ್ಗ – ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ – vishwanews24

ಮೇ 1 ರಿಂದ ಶಿವಮೊಗ್ಗ - ಬೆಂಗಳೂರು ವಿಮಾನ ಹಾರಾಟ ಮುಂದುವರೆಸುವಂತೆ ರಾಜ್ಯ ಸರ್ಕಾರಕ್ಕೆ ಸಂಸದ ರಾಘವೇಂದ್ರ ಒತ್ತಾಯ ಶಿವಮೊಗ್ಗ:…

13 minutes ago

ಬೆಳ್ತಂಗಡಿ: ಆಟೋ ರಿಕ್ಷಾ ಪಲ್ಟಿಯಾಗಿ ಚಾಲಕ ಮೃತ್ಯು – vishwanews24

ಬೆಳ್ತಂಗಡಿ: ನಾಯಿ ಅಡ್ಡ ಬಂದು ಆಟೋ ಪಲ್ಟಿ ; ಚಾಲಕ ಸಾವು ಬೆಳ್ತಂಗಡಿ: ನಾಯಿ ಅಡ್ಡ ಬಂದಿದ್ದರಿಂದ ಚಾಲಕನ ನಿಯಂತ್ರಣ ತಪ್ಪಿ…

33 minutes ago

ಉಡುಪಿ: ಬ್ಯಾಡ್ಮಿಂಟನ್‌ ತಾರೆ ಆಯುಷ್ ಶೆಟ್ಟಿಗೆ ಮುಖ್ಯಮಂತ್ರಿಯಿಂದ ಗೌರವಾರ್ಪಣೆ – vishwanews24

ಉಡುಪಿ: ಬ್ಯಾಡ್ಮಿಂಟನ್‌ ತಾರೆ ಕಾರ್ಕಳದ ಆಯುಷ್ ಶೆಟ್ಟಿಗೆ ಮುಖ್ಯಮಂತ್ರಿಯಿಂದ ಗೌರವಾರ್ಪಣೆ ಉಡುಪಿ: ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್ ಶಿಪ್ ನಲ್ಲಿ ಬೆಳ್ಳಿ ಗೆದ್ದ…

40 minutes ago

ಎಸ್‌ ಎಸ್‌ ಎಲ್‌ ಸಿ ಯಲ್ಲಿ ತೃತೀಯ ಭಾಷೆಗೆ ಗ್ರೇಡ್ ಬೇಡ, ಅಂಕವನ್ನೇ ಕೊಡಿ : ಹೈಕೋರ್ಟ್ – vishwanews24

ಎಸ್‌ಎಸ್‌ ಎಲ್‌ಸಿ ಯಲ್ಲಿ ತೃತೀಯ ಭಾಷೆಗೆ ಗ್ರೇಡ್ ಬೇಡ, ಅಂಕವನ್ನೇ ಕೊಡಿ : ಹೈಕೋರ್ಟ್ ಬೆಂಗಳೂರು : ಪ್ರಸಕ್ತ ಸಾಲಿನಿಂದಲೇ…

2 hours ago

ನಮ್ಮ ತಂದೆ ಸಿಎಂ ಆಗಿರುವವರೆಗೂ ನಾನು ಸಚಿವ ಸ್ಥಾನ ಕೇಳುವುದಿಲ್ಲ : ಯತೀಂದ್ರ ಸಿದ್ದರಾಮಯ್ಯ – vishwanews24

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ,  ನಮ್ಮ ತಂದೆಯೇ 5 ವರ್ಷ ಸಿಎಂ : ಮತ್ತೊಮ್ಮೆ ತಂದೆಯ ಪರ ಯತೀಂದ್ರ …

2 hours ago

ಉಡುಪಿ : ದ್ವಿತೀಯ ಪಿ.ಯು.ಸಿ ಪರೀಕ್ಷೆ -2 : ನೋಂದಣಿಗೆ ಅವಕಾಶ – vishwanews24

ಉಡುಪಿ : ದ್ವಿತೀಯಪಿ.ಯು.ಸಿಪರೀಕ್ಷೆ -2 : ಏ. 17 ರ ವರೆಗೆ ನೋಂದಣಿಗೆಅವಕಾಶ   ಉಡುಪಿ : 2026 ನೇ ಸಾಲಿನ…

2 hours ago