ಅವೈಜ್ಞಾನಿಕ ಹಾಗು ಕಳಪೆ ಕಾಮಗಾರಿಯ ಆರೋಪ
ಕಾಪು : ಮೂಳೂರು ಬಸ್ಸು ನಿಲ್ದಾಣದ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರ ಪಶ್ಚಿಮ ಭಾಗದ ದ್ವಿಪಥ ರಸ್ತೆ ಇದ್ದಕ್ಕಿದ್ದಂತೆ ಕುಸಿದು ವಾಹನ ಸಂಚಾರಕ್ಕೆ ತೊಡಕು ಉಂಟಾಗಿದ್ದು, ಅದೇ ಭಾಗದಲ್ಲಿ ಟ್ರಕ್ಕ್ ವೊಂದಕ್ಕೆ ಈಚರ್ ಡಿಕ್ಕಿಯಾಗಿದೆ.ರಾಷ್ಟ್ರೀಯ ಹೆದ್ದಾರಿ 66 ಅಗಲೀಕರಣದ ವೇಳೆ ಅವೈಜ್ಞಾನಿಕ ಹಾಗು ಕಳಪೆ ಕಾಮಗಾರಿ ನಡೆದಿರುವುದಕ್ಕೆ ಇದೀಗ ಸಾಕ್ಷಿಯಾಗಿದೆ.
ರಾಷ್ಟ್ರೀಯ ಹೆದ್ದಾರಿಯಲ್ಲಿ ಸಮರ್ಪಕವಾದ ಸರ್ವಿಸ್ ರಸ್ತೆ ಹಾಗು ಕ್ರಾಸಿಂಗ್ ವ್ಯವಸ್ಥೆಯಿಂದ ವಂಚಿತರಾದ ಸಾರ್ವಜನಿಕರು ವಾಹನ ಸಂಚಾರಿಗಳು ಈಗಾಗಲೇ ಸಮಸ್ಯೆಯನ್ನು ಎದುರಿಸುತ್ತಿದ್ದು, ಹಲವಾರು ಅಪಘಾತಗಳು ಸಂಭವಿಸಿರುದಲ್ಲದೆ, ಅದೆಷ್ಟೋ ಮಂದಿ ಪ್ರಾಣ ಕಳಕೊಂಡಿದ್ದಾರೆ. ಈ ರಸ್ತೆಯನ್ನು ಕಳೆದ ಎರಡು ವರ್ಷದ ಹಿಂದೆಯಷ್ಟೇ ನಿರ್ಮಾಣ ಮಾಡಲಾಗಿದ್ದು, ಸ್ಥಳೀಯರ ಪ್ರಕಾರ ಈ ಭಾಗದಲ್ಲಿದ್ದ ಬಾವಿಯನ್ನು ಮುಚ್ಚಿ ರಸ್ತೆ ನಿರ್ಮಿಸಲಾಗಿದೆ.
ಕಳೆದ ಕೆಲ ದಿನಗಳಿಂದ ಸುರಿದ ಮಳೆಯಿಂದ ನೀರಿನ ಒರೆತ ಹೆಚ್ಚಾಗಿ ಮಣ್ಣು ತುಂಬಿಸಿದ ಬಾವಿ ಇದ್ದ ಜಾಗ ಈಗ 5 ಅಡಿ ಸುತ್ತಳತೆ ಹಾಗೂ ಎರಡು ಅಡಿ ಆಳಕ್ಕೆ ಕುಸಿದಿದೆ. ಸಂಜೆ ವಾಹನ ಸವಾರರು ಸಂಚರಿಸುವ ವೇಳೆ ಇದು ಗಮನಕ್ಕೆ ಬಂದಿದ್ದು, ಸಮಯ ಕಳೆದಂತೆ ಕುಸಿತ ಹೆಚ್ಚಾಗಿ ಜನ ಹಾಗೂ ವಾಹನ ಸವಾರರು ಆತಂಕಿತರಾದರು. ಹೆದ್ದಾರಿ ಕಾಮಗಾರಿ ವೇಳೆ ಬಾವಿಗೆ ಸರಿಯಾಗಿ ಕಲ್ಲು ಮಣ್ಣು ತುಂಬಿಸದೆ ಇರುವುದೇ ಇದಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.
ಟ್ರಕ್ಕ್ – ಈಚರ್ ನಡುವೆ ಅಪಘಾತ: ರಾ.ಹೆ ಕುಸಿದ ಭಾಗದಲ್ಲಿ ಉಡುಪಿಯತ್ತ ಸಾಗುತ್ತಿದ್ದ ಟ್ರಕ್ಕ್ ಹಿಂಭಾಗಕ್ಕೆ ಈಚರ್ ಡಿಕ್ಕಿಯಾಗಿ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.ಅಪಘಾತದಲ್ಲಿ ಸಣ್ಣಪುಟ್ಟ ಗಾಯಗಳೊಂದಿಗೆ ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಸುದ್ದಿ ತಿಳಿದ ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿ ಕುಸಿದ ಭಾಗದ ಸುತ್ತ ಬ್ಯಾರಿಕೇಡ್ ಅಳವಡಿಸಿ ವಾಹನ ಸುಗಮ ಸಂಚಾರಕ್ಕೆ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ.
ಸೆ.25ರಂದು ಉಚ್ಚಿಲದಲ್ಲಿ ಮೊಗವೀರ ಕುಲಗುರು ಮಾಧವ ಮಂಗಲ ಪೂಜಾರ್ಯರ ಕಂಚಿನ ಪುತ್ಥಳಿ ಅನಾವರಣ ಉಡುಪಿ: ದಕ್ಷಿಣ ಕನ್ನಡ ಮೊಗವೀರ ಮಹಾಜನ…
ಕಾಲೇಜು ಶೈಕ್ಷಣಿಕ ಪ್ರವಾಸದಲ್ಲಿ ಸೆಲ್ಫಿ, ರೀಲ್ಸ್ಗೆ ಸಂಪೂರ್ಣ ನಿಷೇಧ - ಶಿಕ್ಷಣ ಇಲಾಖೆಯಿಂದ ಕಟ್ಟುನಿಟ್ಟಿನ ಮಾರ್ಗಸೂಚಿ! ಬೆಂಗಳೂರು : ವಿದ್ಯಾರ್ಥಿಗಳ…
ಕರ್ನಾಟಕದಲ್ಲಿ ಸೆ.30ರಿಂದ ಸಿನೆಮಾ ಟಿಕೆಟ್ ದರ ಏರಿಕೆ ಬೆಂಗಳೂರು: ಕರ್ನಾಟಕ ಸಿನಿ ಮತ್ತು ಸಾಂಸ್ಕೃತಿಕ ಕಾರ್ಯಕರ್ತರ (ಕ್ಷೇಮಾಭಿವೃದ್ಧಿ) ಕಾಯ್ದೆ ಜಾರಿಗೊಂಡಿರುವ…
ಶೃಂಗೇರಿ: ತುಂಗಾ ನದಿಯಲ್ಲಿ ಈಜಲು ತೆರಳಿದ್ದ ಇಂಜಿನಿಯರಿಂಗ್ ವಿದ್ಯಾರ್ಥಿ ನೀರುಪಾಲು ಬೆಂಗಳೂರಿನಿಂದ ಆಗಮಿಸಿದ್ದ ನಾಲ್ವರು ಸ್ನೇಹಿತರು ಚಿಕ್ಕಮಗಳೂರು: ತುಂಗಾ ನದಿಯಲ್ಲಿ…
ಸಂಪಾದನೆ ಮಾಡಿರೋ ಹಣವನ್ನ ಜನರಿಗೆ ಕೊಟ್ರೆ 2028ಕ್ಕೂ ಡಿಕೆ ಶಿ ಸಿಎಂ ಆಗಬಹುದು : ಹೆಚ್.ಡಿ ಕುಮಾರಸ್ವಾಮಿ ಬೆಂಗಳೂರು: ಡಿಕೆ…
ತುಳು ಭಾಷೆಗೆ ಅಧಿಕೃತ ಮಾನ್ಯತೆ: ದಶಕಗಳ ಹೋರಾಟಕ್ಕೆ ಡಿ.ಕೆ. ಶಿವಕುಮಾರ್ ಅವರಿಂದ ಫಲ ಸಿಕ್ಕಿದೆ : ರಮೇಶ್ ಕಾಂಚನ್ ಉಡುಪಿ:…