Featured

ಮೂಳೂರು ಬಳಿ ರಾಷ್ಟ್ರೀಯ ಹೆದ್ದಾರಿ 66 ಕುಸಿತ: ಟ್ರಕ್ಕ್ – ಈಚರ್ ಡಿಕ್ಕಿ!

ಅವೈಜ್ಞಾನಿಕ ಹಾಗು ಕಳಪೆ ಕಾಮಗಾರಿಯ ಆರೋಪ

ಕಾಪು : ಮೂಳೂರು ಬಸ್ಸು ನಿಲ್ದಾಣದ ಬಳಿಯ ರಾಷ್ಟ್ರೀಯ ಹೆದ್ದಾರಿ 66 ರ ಪಶ್ಚಿಮ ಭಾಗದ ದ್ವಿಪಥ ರಸ್ತೆ ಇದ್ದಕ್ಕಿದ್ದಂತೆ ಕುಸಿದು ವಾಹನ ಸಂಚಾರಕ್ಕೆ ತೊಡಕು ಉಂಟಾಗಿದ್ದು, ಅದೇ ಭಾಗದಲ್ಲಿ ಟ್ರಕ್ಕ್ ವೊಂದಕ್ಕೆ ಈಚರ್ ಡಿಕ್ಕಿಯಾಗಿದೆ.ರಾಷ್ಟ್ರೀಯ ಹೆದ್ದಾರಿ 66 ಅಗಲೀಕರಣದ ವೇಳೆ ಅವೈಜ್ಞಾನಿಕ ಹಾಗು ಕಳಪೆ ಕಾಮಗಾರಿ ನಡೆದಿರುವುದಕ್ಕೆ ಇದೀಗ ಸಾಕ್ಷಿಯಾಗಿದೆ.

ರಾಷ್ಟ್ರೀಯ ಹೆದ್ದಾರಿಯಲ್ಲಿ ಸಮರ್ಪಕವಾದ ಸರ್ವಿಸ್ ರಸ್ತೆ ಹಾಗು ಕ್ರಾಸಿಂಗ್ ವ್ಯವಸ್ಥೆಯಿಂದ ವಂಚಿತರಾದ ಸಾರ್ವಜನಿಕರು ವಾಹನ ಸಂಚಾರಿಗಳು ಈಗಾಗಲೇ ಸಮಸ್ಯೆಯನ್ನು ಎದುರಿಸುತ್ತಿದ್ದು, ಹಲವಾರು ಅಪಘಾತಗಳು ಸಂಭವಿಸಿರುದಲ್ಲದೆ, ಅದೆಷ್ಟೋ ಮಂದಿ ಪ್ರಾಣ ಕಳಕೊಂಡಿದ್ದಾರೆ. ಈ ರಸ್ತೆಯನ್ನು ಕಳೆದ ಎರಡು ವರ್ಷದ ಹಿಂದೆಯಷ್ಟೇ ನಿರ್ಮಾಣ ಮಾಡಲಾಗಿದ್ದು, ಸ್ಥಳೀಯರ ಪ್ರಕಾರ ಈ ಭಾಗದಲ್ಲಿದ್ದ ಬಾವಿಯನ್ನು ಮುಚ್ಚಿ ರಸ್ತೆ ನಿರ್ಮಿಸಲಾಗಿದೆ.

ಕಳೆದ ಕೆಲ ದಿನಗಳಿಂದ ಸುರಿದ ಮಳೆಯಿಂದ ನೀರಿನ ಒರೆತ ಹೆಚ್ಚಾಗಿ ಮಣ್ಣು ತುಂಬಿಸಿದ ಬಾವಿ ಇದ್ದ ಜಾಗ ಈಗ 5 ಅಡಿ ಸುತ್ತಳತೆ ಹಾಗೂ ಎರಡು ಅಡಿ ಆಳಕ್ಕೆ ಕುಸಿದಿದೆ. ಸಂಜೆ ವಾಹನ ಸವಾರರು ಸಂಚರಿಸುವ ವೇಳೆ ಇದು ಗಮನಕ್ಕೆ ಬಂದಿದ್ದು, ಸಮಯ ಕಳೆದಂತೆ ಕುಸಿತ ಹೆಚ್ಚಾಗಿ ಜನ ಹಾಗೂ ವಾಹನ ಸವಾರರು ಆತಂಕಿತರಾದರು. ಹೆದ್ದಾರಿ ಕಾಮಗಾರಿ ವೇಳೆ ಬಾವಿಗೆ ಸರಿಯಾಗಿ ಕಲ್ಲು ಮಣ್ಣು ತುಂಬಿಸದೆ ಇರುವುದೇ ಇದಕ್ಕೆ ಕಾರಣ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಟ್ರಕ್ಕ್ – ಈಚರ್ ನಡುವೆ ಅಪಘಾತ: ರಾ.ಹೆ ಕುಸಿದ ಭಾಗದಲ್ಲಿ ಉಡುಪಿಯತ್ತ ಸಾಗುತ್ತಿದ್ದ ಟ್ರಕ್ಕ್ ಹಿಂಭಾಗಕ್ಕೆ ಈಚರ್ ಡಿಕ್ಕಿಯಾಗಿ ವಾಹನ ಸಂಪೂರ್ಣ ನಜ್ಜುಗುಜ್ಜಾಗಿದೆ.ಅಪಘಾತದಲ್ಲಿ ಸಣ್ಣಪುಟ್ಟ ಗಾಯಗಳೊಂದಿಗೆ ಚಾಲಕ ಅಪಾಯದಿಂದ ಪಾರಾಗಿದ್ದಾನೆ. ಸುದ್ದಿ ತಿಳಿದ ಕಾಪು ಪೊಲೀಸರು ಸ್ಥಳಕ್ಕೆ ಆಗಮಿಸಿ ಕುಸಿದ ಭಾಗದ ಸುತ್ತ ಬ್ಯಾರಿಕೇಡ್ ಅಳವಡಿಸಿ ವಾಹನ ಸುಗಮ ಸಂಚಾರಕ್ಕೆ ವ್ಯವಸ್ಥೆಯನ್ನು ಕಲ್ಪಿಸಿದ್ದಾರೆ.

Vishwa News 24

Recent Posts

ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್‌ಪಾಲ್ ಸುವರ್ಣ – vishwanews24

ಉಡುಪಿ: ಮೀನುಗಾರರಿಗೆ ಯೋಜನೆಗಳ ಮಾಹಿತಿ ತಲುಪಿಸಿ: ಶಾಸಕ ಯಶ್‌ಪಾಲ್ ಸುವರ್ಣ ಉಡುಪಿ: ಮೀನುಗಾರಿಕೆ ದೇಶದ ಆರ್ಥಿಕತೆಗೆ ಮಹತ್ತರ ಕೊಡುಗೆ ನೀಡುವ…

28 minutes ago

ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ – vishwanews24

ನಾಳೆ ಮಧ್ಯಾಹ್ನ ಸಿಜೆಪಿಗೆ ಸರ್ಕಾರದ ನಿರ್ಧಾರ ತಿಳಿಸುತ್ತೇವೆ: ಜೆಪಿ ನಡ್ಡಾ ನವದೆಹಲಿ: ನಾಳೆ ಮಧ್ಯಾಹ್ನ ಮತ್ತೆ ಕಾಕ್ರೋಚ್‌ ಜನತಾ ಪಾರ್ಟಿ…

39 minutes ago

ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ – vishwanews24

ಉಡುಪಿ ಅಕ್ಕಪಡೆ ತ್ವರಿತ ಕಾರ್ಯಾಚರಣೆ : ಕಾಣೆಯಾಗಿದ್ದ 8ನೇ ತರಗತಿ ವಿದ್ಯಾರ್ಥಿ ಸುರಕ್ಷಿತವಾಗಿ ಪತ್ತೆ ಉಡುಪಿ :ಜಿಲ್ಲೆಯಲ್ಲಿ ಕಾಣೆಯಾಗಿದ್ದ ಎಂಟನೇ…

47 minutes ago

ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ – vishwanews24

ಧರ್ಮೇಂದ್ರ ಪ್ರಧಾನ್ ವಜಾಗೊಳಿಸುವವರೆಗೆ ವಿಪಕ್ಷಗಳು ಸಂಸತ್ತಿನ ಯಾವುದೇ ಚರ್ಚೆಯಲ್ಲಿ ಪಾಲ್ಗೊಳ್ಳುವುದಿಲ್ಲ : ರಾಹುಲ್ ಗಾಂಧಿ ನವದೆಹಲಿ: ಧರ್ಮೇಂದ್ರ ಪ್ರಧಾನ್ ಅವರನ್ನ…

58 minutes ago

ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ನಕಲಿ ಕೀಟನಾಶಕ ತಯಾರಿಸಿ ರೈತರಿಗೆ ಮಾರಾಟ : ಕೃಷಿ ಅಧಿಕಾರಿಗಳ ದಾಳಿ – vishwanews24

ಪ್ರತಿಷ್ಠಿತ ಕಂಪನಿಗಳ ಹೆಸರಲ್ಲಿ ನಕಲಿ ಕೀಟನಾಶಕ ತಯಾರಿಸಿ ರೈತರಿಗೆ ಮಾರಾಟ : ಕೃಷಿ ಅಧಿಕಾರಿಗಳ ದಾಳಿ ಚಿಕ್ಕಬಳ್ಳಾಪುರ: ಪ್ರತಿಷ್ಠಿತ ಕಂಪನಿಗಳ…

1 hour ago

ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆ: ಇಂದಿನಿಂದಲೇ ಪರಿಷ್ಕೃತ ದರ ಜಾರಿ – vishwanews24

ನಂದಿನಿ ತುಪ್ಪ, ಬೆಣ್ಣೆ ಬೆಲೆ ಏರಿಕೆ: ಇಂದಿನಿಂದಲೇ ಪರಿಷ್ಕೃತ ದರ ಜಾರಿ ಬೆಂಗಳೂರು : ರಾಜ್ಯದಲ್ಲಿ ಕರ್ನಾಟಕ ರಾಜ್ಯ ಹಾಲು…

3 hours ago