ಮೂಳೂರು: ವ್ಯಕ್ತಿಯೋರ್ವರು ತಮ್ಮ ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮುಂಜಾನೆ ಸಂಭವಿಸಿದೆ.
ಆತ್ಮಹತ್ಯೆ ಮಾಡಿಕೊಂಡವರು ಮೂಳೂರು ರಾಜಮನೆ ನಿವಾಸಿ ಸುಭಾಷ್ ಚಂದ್ರ ಪೂಜಾರಿ(68).ಈ ಭಾಗದ ಬಿಲ್ಲವ ಸಮಾಜದ ಒಂದನೇ ಗುರಿಕಾರರಾಗಿದ್ದು,ಕುಟುಂಬದ ದೈವದ ಆರಾಧಕರಾಗಿ ಸೇವೆ ನಡೆಸುತ್ತಿದ್ದ ಇವರು ಪಿಗ್ಮಿ ಸಂಗ್ರಹ ವೃತ್ತಿ ನಡೆಸಿ ಜೀವನ ಸಾಗಿಸುತ್ತಿದ್ದರು.
ಕಳೆದ ಕೆಲ ದಿನಗಳಿಂದ ಕೈ ನಡುಕ ಸಮಸ್ಯೆ ಅವರನ್ನು ಬಾಧಿಸುತ್ತಿದ್ದು ಪಿಗ್ಗಿ ಸಂಗ್ರಹ ವೃತ್ತಿಗೂ ಅಡಚಣೆಯಾಗಿತ್ತು. ಕೆಲವು ದಿನಗಳ ಹಿಂದೆ ಇವರ ಸ್ಕೂಟರ್ ಗೆ ಮತ್ತೊಂದು ದ್ವಿಚಕ್ರವಾಹನ ಡಿಕ್ಕಿಯಾದ ಪರಿಣಾಮ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದರು.
ಬುಧವಾರ ಮುಂಜಾನೆ ನಾಲ್ಕರ ಸುಮಾರಿಗೆ ನಿತ್ಯದಂತೆ ಮನೆಯಿಂದ ಹೊರ ಹೋಗಿದ್ದ ಇವರು ವಾಕಿಂಗ್ ಗೆ ಹೋಗಿರಬಹುದೆಂದು ಮನೆಮಂದಿ ತಿಳಿದಿದ್ದರು. ಸಮಯ ಮೀರಿದರೂ ಬಾರದಿದ್ದಾಗ ಹುಡುಕಾಟ ನಡೆಸಿದ್ದು, ಬಿಲ್ಲವ ಸಂಘದ ಮುಂಭಾಗದ ಜಾಗದಲ್ಲಿದ್ದ ಬಾವಿಯ ಸಮೀಪ ಚಪ್ಪಲಿ ಪತ್ತೆಯಾಗುವ ಮೂಲಕ ಆತ್ಮಹತ್ಯೆ ಮಾಡಿಕೊಂಡ ವಿಚಾರ ಬೆಳಕಿಗೆ ಬಂದಿದೆ.
ಸ್ಥಳಕ್ಕೆ ಬಂದ ಕಾಪು ಪೊಲೀಸರು ಸಾರ್ವಜನಿಕರ ನೆರವಿನಿಂದ ಶವವನ್ನು ಮೇಲೆತ್ತಿ ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು. ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರ ಅಂತ್ಯಕ್ರಿಯೆ ಬುಧವಾರ ಸಂಜೆ ಮೂರು ಗಂಟೆಗೆ ಸ್ವಗೃಹ ರಾಜಮನೆಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.
ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ರೈಲು ಪ್ರಾಯೋಗಿಕ ಸಂಚಾರ ಯಶಸ್ವಿ ಮಂಗಳೂರು: ಬೆಂಗಳೂರು-ಮಂಗಳೂರು ನಡುವೆ ವಂದೇ ಭಾರತ್ ಎಕ್ಸ್ಪ್ರೆಸ್ ರೈಲು…
ಆಗಸ್ಟ್ 17ಕ್ಕೆ ನಾಗರ ಪಂಚಮಿ: ಉಭಯ ಜಿಲ್ಲೆಗಳಲ್ಲಿ ಸ್ಥಳೀಯ ರಜೆ ಘೋಷಣೆಗೆ ಶಾಸಕ ವೇದವ್ಯಾಸ ಕಾಮತ್ ಮನವಿ ಮಂಗಳೂರು :…
ಭೀಕರ ಅಪಘಾತದಲ್ಲಿ 6 ಮಂದಿ ಕೂಲಿಕಾರ ಮಹಿಳೆಯರು ಸಾವು; ಮೃತರ ಕುಟುಂಬಕ್ಕೆ 5 ಲಕ್ಷ ಪರಿಹಾರ ಘೋಷಣೆ .. ವಿದ್ಯಾಭ್ಯಾಸ…
ಮುದರಂಗಡಿ ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ : ಹಣಕಾಸಿನ ನೆರವು ನೀಡಿದ್ದ ಮತ್ತಿಬ್ಬರು ಆರೋಪಿಗಳ ಬಂಧನ ಮುದರಂಗಡಿ: ಕಾಪು ತಾಲೂಕಿನ…
ಮಂಗಳೂರಿನಲ್ಲಿ ರಾಜ್ಯದ ಎರಡನೇ ಪ್ರಾದೇಶಿಕ ಪಾಸ್ಪೋರ್ಟ್ ಕಚೇರಿ ತ್ವರಿತವಾಗಿ ಸ್ಥಾಪಿಸಲು ಕಾಂಗ್ರೆಸ್ ಆಗ್ರಹ ಕರಾವಳಿ ಹಾಗೂ ಮಲೆನಾಡಿನ ಜನರ ಪಾಸ್ಪೋರ್ಟ್…
ದೆಹಲಿ-ಪುಣೆ ಸ್ಪೈಸ್ಜೆಟ್ ವಿಮಾನದಲ್ಲಿ ಎಸಿ ವೈಫಲ್ಯ: ಉಸಿರಾಟದ ತೊಂದರೆಯಿಂದ ಕಂಗಾಲಾದ ಪ್ರಯಾಣಿಕರು ನವದೆಹಲಿ: ದೆಹಲಿ-ಪುಣೆ ಸ್ಪೈಸ್ಜೆಟ್ (Spice Jet) ವಿಮಾನದಲ್ಲಿ…