ಮೂಳೂರು: ವ್ಯಕ್ತಿಯೋರ್ವರು ತಮ್ಮ ಮನೆಯ ಸಮೀಪದ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಇಂದು ಮುಂಜಾನೆ ಸಂಭವಿಸಿದೆ.
ಆತ್ಮಹತ್ಯೆ ಮಾಡಿಕೊಂಡವರು ಮೂಳೂರು ರಾಜಮನೆ ನಿವಾಸಿ ಸುಭಾಷ್ ಚಂದ್ರ ಪೂಜಾರಿ(68).ಈ ಭಾಗದ ಬಿಲ್ಲವ ಸಮಾಜದ ಒಂದನೇ ಗುರಿಕಾರರಾಗಿದ್ದು,ಕುಟುಂಬದ ದೈವದ ಆರಾಧಕರಾಗಿ ಸೇವೆ ನಡೆಸುತ್ತಿದ್ದ ಇವರು ಪಿಗ್ಮಿ ಸಂಗ್ರಹ ವೃತ್ತಿ ನಡೆಸಿ ಜೀವನ ಸಾಗಿಸುತ್ತಿದ್ದರು.
ಕಳೆದ ಕೆಲ ದಿನಗಳಿಂದ ಕೈ ನಡುಕ ಸಮಸ್ಯೆ ಅವರನ್ನು ಬಾಧಿಸುತ್ತಿದ್ದು ಪಿಗ್ಗಿ ಸಂಗ್ರಹ ವೃತ್ತಿಗೂ ಅಡಚಣೆಯಾಗಿತ್ತು. ಕೆಲವು ದಿನಗಳ ಹಿಂದೆ ಇವರ ಸ್ಕೂಟರ್ ಗೆ ಮತ್ತೊಂದು ದ್ವಿಚಕ್ರವಾಹನ ಡಿಕ್ಕಿಯಾದ ಪರಿಣಾಮ ಸಣ್ಣಪುಟ್ಟ ಗಾಯಗಳೊಂದಿಗೆ ಅಪಾಯದಿಂದ ಪಾರಾಗಿದ್ದರು.
ಬುಧವಾರ ಮುಂಜಾನೆ ನಾಲ್ಕರ ಸುಮಾರಿಗೆ ನಿತ್ಯದಂತೆ ಮನೆಯಿಂದ ಹೊರ ಹೋಗಿದ್ದ ಇವರು ವಾಕಿಂಗ್ ಗೆ ಹೋಗಿರಬಹುದೆಂದು ಮನೆಮಂದಿ ತಿಳಿದಿದ್ದರು. ಸಮಯ ಮೀರಿದರೂ ಬಾರದಿದ್ದಾಗ ಹುಡುಕಾಟ ನಡೆಸಿದ್ದು, ಬಿಲ್ಲವ ಸಂಘದ ಮುಂಭಾಗದ ಜಾಗದಲ್ಲಿದ್ದ ಬಾವಿಯ ಸಮೀಪ ಚಪ್ಪಲಿ ಪತ್ತೆಯಾಗುವ ಮೂಲಕ ಆತ್ಮಹತ್ಯೆ ಮಾಡಿಕೊಂಡ ವಿಚಾರ ಬೆಳಕಿಗೆ ಬಂದಿದೆ.
ಸ್ಥಳಕ್ಕೆ ಬಂದ ಕಾಪು ಪೊಲೀಸರು ಸಾರ್ವಜನಿಕರ ನೆರವಿನಿಂದ ಶವವನ್ನು ಮೇಲೆತ್ತಿ ಮರಣೋತ್ತರ ಪರೀಕ್ಷೆಗಾಗಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದರು. ಕಾಪು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಮೃತರ ಅಂತ್ಯಕ್ರಿಯೆ ಬುಧವಾರ ಸಂಜೆ ಮೂರು ಗಂಟೆಗೆ ಸ್ವಗೃಹ ರಾಜಮನೆಯಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.
ಉದ್ಯಾವರ : ಪಾಪನಾಶಿನಿ ಹೊಳೆಯ ಸೇತುವೆಯ ಮೇಲೆ ಸ್ಕೂಟರ್ ಪತ್ತೆ ; ವ್ಯಕ್ತಿ ಹೊಳೆಗೆ ಹಾರಿರುವ ಶಂಕೆ ಉಡುಪಿ: ಉದ್ಯಾವರ…
ಮಂಗಳೂರು: ಕಾಂಗ್ರೆಸ್ ಗಾಗಿ ಕೆಲಸ ಮಾಡದವರು ಪಕ್ಷದ ಬಗ್ಗೆ ಮಾತನಾಡುವುದು ಬೇಡ: ಸಚಿವ ಯು.ಟಿ.ಖಾದರ್ ಮಂಗಳೂರು: ಕಾಂಗ್ರೆಸ್ ಪಕ್ಷಕ್ಕಾಗಿ ಕೆಲಸ…
ಉಡುಪಿ: ನೀಟ್ ಪರೀಕ್ಷೆಗೆ ತಡವಾಗಿ ಬಂದ ವಿದ್ಯಾರ್ಥಿನಿಗೆ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿದ ಶಾಸಕ ಯಶ್ಪಾಲ್ ಸುವರ್ಣಗೆ ವ್ಯಾಪಕ ಶ್ಲಾಘನೆ…
ಕಾರ್ಕಳ :ಯಕ್ಷರಂಗಾಯಣ ದ ಹೆಸರು ಬದಲಾವಣೆಗೆ ಶಾಸಕ ಸುನಿಲ್ ಕುಮಾರ್ ಆಕ್ರೋಶ ಮೂಲ ಹೆಸರನ್ನೇ ಉಳಿಸಿಕೊಳ್ಳಲು ಸರಕಾರಕ್ಕೆ ಆಗ್ರಹ ಕಾರ್ಕಳ:…
ಟಿಎಂಸಿ ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿ ವಜಾ ಕೋಲ್ಕತ್ತಾ : ಪಶ್ಚಿಮ ಬಂಗಾಳದ ಮಾಜಿ ಸಿಎಂ ಮಮತಾ ಬ್ಯಾನರ್ಜಿ ಅವರನ್ನು…
ಉಡುಪಿ : ಹೆಣ್ಣು ಮಗುವಿನ ಅಕ್ರಮ ಮಾರಾಟ ಪ್ರಕರಣ ; ವೈದ್ಯ ಸಹಿತ ನಾಲ್ವರು ಆರೋಪಿಗಳ ಬಂಧನ ಉಡುಪಿ :…