ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ ಮೂಳೂರು ಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಸುಧಾಮ ಶೆಟ್ಟಿ ಮಾತಾಡಿ, ಸಂಘವು 2,09,000 ವಾರ್ಷಿಕ ನಿವ್ವಳ ಬಂಡವಾಳ ಹೊಂದಿದ್ದು ಸದಸ್ಯರಿಗೆ ಶೇ. ೨೫ ಡಿವಿಡೆಂಡ್ ಶೇ.೬೫ ಬೋನಸ್ ಘೋಷಿಸಲಾಗಿದೆ. ಭವಿಷ್ಯದಲ್ಲೂ ಸಂಘದ ಪ್ರಗತಿಗೆ ಎಲ್ಲಾ ಹೈನುಗಾರರು ಸಹಕಾರ ನೀಡಬೇಕು ಎಂದು ವಿನಂತಿಸಿದರು.
ಪಶು ವೈದ್ಯರಾದ ಡಾ. ಪ್ರಶಾಂತ್ ಆರ್.ಗುಜ್ಜಲ್ಕರ್, ಹೈನುಗಾರಿಕೆ ಬಗ್ಗೆ ಮಾಹಿತಿ ನೀಡಿದರು. ಕೆಎಂಎಫ್ ವಿಸ್ತರಣಾಧಿಕಾರಿ ಯಶವಂತ ಅವರು ಕೆಎಂಎಫ್ ನಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ಸಂಘಕ್ಕೆ ಹೆಚ್ಚು ಹಾಲು ಪೂರೈಸಿದ ಕ್ರಮವಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ಸದಸ್ಯರಾದ ಮನೇಶ ಶೆಟ್ಟಿ ಮಲ್ಲಾರು, ಶಶಿಧರ್ ಶೆಟ್ಟಿ ಬೆಳಪು, ಮೋಹಿನಿ ಎಸ್ ಕೋಟ್ಯಾನ್ ಬೆಳಪು ಇವರನ್ನು ಸನ್ಮಾನಿಸಲಾಯಿತು.
ಸಂಘದ ಉಪಾಧ್ಯಕ್ಷರಾದ ಮಹಾಲಿಂಗ ಅಂಚನ್, ನಿರ್ದೇಶಕರಾದ ಪಿ.ಕೆ ಕರಿಯ ಮೊಯ್ಲಿ, ಶಶಿಧರ್ ಶೆಟ್ಟಿ, ಎಂ.ಎಸ್. ಅಬ್ದುಲ್ ರೆಹೆಮಾನ್, ಅಣ್ಣಯ್ಯ ಪೂಜಾರಿ, ಕಿಶೋರ್ ಕೋಟ್ಯಾನ್, ಗಣೇಶ್ ಬಿ. ಶೆಟ್ಟಿ, ಸುಹಾಸಿನಿ ಶೆಟ್ಟಿ, ಮನೇಶ ಶೆಟ್ಟಿ, ಮೋಹಿನಿ ಉಪಸ್ಥಿತರಿದ್ದರು.
ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಾತ ಟಿ. ವರದಿ ವಾಚಿಸಿ ಲೆಕ್ಕಪತ್ರ ಮಂಡಿಸಿದರು. ಸದಸ್ಯ ಪ್ರಕಾಶ್ ಅಂಚನ್ ಅವರು ವಂದಿಸಿದರು. ರಾಷ್ಟçಗೀತೆಯೊಂದಿಗೆ ಸಭೆಯನ್ನು ಮುಕ್ತಾಯಗೊಳಿಸಲಾಯಿತು.
ಪಡುಬಿದ್ರಿ: ಹೆಜಮಾಡಿ ಟೋಲ್ ಗೇಟ್ ವಿರುದ್ಧ ಪ್ರತಿಭಟನೆ .. ಟೋಲ್ ಗೇಟ ನ್ನು ತಕ್ಷಣ ತೆರವುಗೊಳಿಸಬೇಕು ಎಂದು ಆಗ್ರಹ 15…
ಪೊಲೀಸ್ ಕಾನ್ಸ್ ಟೇಬಲ್ ಪರೀಕ್ಷೆ: ಹಿಜಾಬ್ ಧರಿಸಿ ಪರೀಕ್ಷೆ ಬರೆಯುವಂತಿಲ್ಲ : ಪ್ರಿಯಾಂಕ ಖರ್ಗೆ ಸ್ಪಷ್ಟನೆ ಬೆಂಗಳೂರು: ಕರ್ನಾಟಕದ ಪೊಲೀಸ್…
ಸಾಂಸ್ಕೃತಿಕ ನಗರಿ ಮೈಸೂರಿಗೆ ಆಗಮಿಸಿದ ಪ್ರಧಾನಿ ಮೋದಿ ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಗೆ ಪ್ರಧಾನಿ ನರೇಂದ್ರ ಮೋದಿ ಆಗಮಿಸಿದ್ದಾರೆ. ವಿಶೇಷ ಸೇನಾ…
ಕಡಬ: ಕುಕ್ಕೆ ಸುಬ್ರಹ್ಮಣ್ಯದ ಕುಮಾರಧಾರಾ ಸ್ನಾನಘಟ್ಟ ಮುಳುಗಡೆ :ಭಕ್ತರಿಗೆ ಡ್ರಮ್ಗಳಲ್ಲಿ ಪರ್ಯಾಯ ಸ್ನಾನ ವ್ಯವಸ್ಥೆ ಕಡಬ:ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಿರಂತರ ಸುರಿಯುತ್ತಿರುವ…
ಮೀನುಗಾರಿಕಾ ಋತು ಆರಂಭ ಹಿನ್ನೆಲೆ : ಮಲ್ಪೆ ಬಂದರಿಗೆ ಶಾಸಕ ಯಶ್ಪಾಲ್ ಸುವರ್ಣ ಭೇಟಿ ಉಡುಪಿ: ಜೂನ್ ಮತ್ತು ಜುಲೈ…
ಕುಂದಾಪುರ ರಿಚರ್ಡ್ ಹತ್ಯೆ ಪ್ರಕರಣ : ಆರೋಪಿ ಭಟ್ಕಳದಲ್ಲಿ ಬಂಧನ ಕುಂದಾಪುರ: ಇಲ್ಲಿನ ಚರ್ಚ್ ರಸ್ತೆಯ ಸಮೀಪ ಗುರುವಾರ ತಡರಾತ್ರಿ…