ಮೂಳೂರು ಹಾಲು ಉತ್ಪಾದಕರ ಸಹಕಾರ ಸಂಘದ ವಾರ್ಷಿಕ ಸಾಮಾನ್ಯ ಸಭೆ ಮೂಳೂರು ಶ್ರೀ ನಾರಾಯಣಗುರು ಸಭಾಭವನದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆ ವಹಿಸಿದ್ದ ಸಂಘದ ಅಧ್ಯಕ್ಷರಾದ ಸುಧಾಮ ಶೆಟ್ಟಿ ಮಾತಾಡಿ, ಸಂಘವು 2,09,000 ವಾರ್ಷಿಕ ನಿವ್ವಳ ಬಂಡವಾಳ ಹೊಂದಿದ್ದು ಸದಸ್ಯರಿಗೆ ಶೇ. ೨೫ ಡಿವಿಡೆಂಡ್ ಶೇ.೬೫ ಬೋನಸ್ ಘೋಷಿಸಲಾಗಿದೆ. ಭವಿಷ್ಯದಲ್ಲೂ ಸಂಘದ ಪ್ರಗತಿಗೆ ಎಲ್ಲಾ ಹೈನುಗಾರರು ಸಹಕಾರ ನೀಡಬೇಕು ಎಂದು ವಿನಂತಿಸಿದರು.
ಪಶು ವೈದ್ಯರಾದ ಡಾ. ಪ್ರಶಾಂತ್ ಆರ್.ಗುಜ್ಜಲ್ಕರ್, ಹೈನುಗಾರಿಕೆ ಬಗ್ಗೆ ಮಾಹಿತಿ ನೀಡಿದರು. ಕೆಎಂಎಫ್ ವಿಸ್ತರಣಾಧಿಕಾರಿ ಯಶವಂತ ಅವರು ಕೆಎಂಎಫ್ ನಿಂದ ಸಿಗುವ ಸವಲತ್ತುಗಳ ಬಗ್ಗೆ ಮಾಹಿತಿ ನೀಡಿದರು. ಸಂಘಕ್ಕೆ ಹೆಚ್ಚು ಹಾಲು ಪೂರೈಸಿದ ಕ್ರಮವಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಸ್ಥಾನ ಪಡೆದ ಸದಸ್ಯರಾದ ಮನೇಶ ಶೆಟ್ಟಿ ಮಲ್ಲಾರು, ಶಶಿಧರ್ ಶೆಟ್ಟಿ ಬೆಳಪು, ಮೋಹಿನಿ ಎಸ್ ಕೋಟ್ಯಾನ್ ಬೆಳಪು ಇವರನ್ನು ಸನ್ಮಾನಿಸಲಾಯಿತು.
ಸಂಘದ ಉಪಾಧ್ಯಕ್ಷರಾದ ಮಹಾಲಿಂಗ ಅಂಚನ್, ನಿರ್ದೇಶಕರಾದ ಪಿ.ಕೆ ಕರಿಯ ಮೊಯ್ಲಿ, ಶಶಿಧರ್ ಶೆಟ್ಟಿ, ಎಂ.ಎಸ್. ಅಬ್ದುಲ್ ರೆಹೆಮಾನ್, ಅಣ್ಣಯ್ಯ ಪೂಜಾರಿ, ಕಿಶೋರ್ ಕೋಟ್ಯಾನ್, ಗಣೇಶ್ ಬಿ. ಶೆಟ್ಟಿ, ಸುಹಾಸಿನಿ ಶೆಟ್ಟಿ, ಮನೇಶ ಶೆಟ್ಟಿ, ಮೋಹಿನಿ ಉಪಸ್ಥಿತರಿದ್ದರು.
ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸುಜಾತ ಟಿ. ವರದಿ ವಾಚಿಸಿ ಲೆಕ್ಕಪತ್ರ ಮಂಡಿಸಿದರು. ಸದಸ್ಯ ಪ್ರಕಾಶ್ ಅಂಚನ್ ಅವರು ವಂದಿಸಿದರು. ರಾಷ್ಟçಗೀತೆಯೊಂದಿಗೆ ಸಭೆಯನ್ನು ಮುಕ್ತಾಯಗೊಳಿಸಲಾಯಿತು.
ಉಡುಪಿ ಮಲಬಾರ್ ಗೋಲ್ಡ್ನಲ್ಲಿ ಹಫೀಝ್ ರೆಹಮಾನ್ಗೆ ಬೀಳ್ಕೊಡುಗೆ ಉಡುಪಿ : ಉಡುಪಿ ಮಲಬಾರ್ ಗೋಲ್ಡ್ ಆಂಡ್ ಡೈಮಂಡ್ಸ್ ಶಾಖೆಯಲ್ಲಿ ಕಳೆದ…
ಫಲ್ಗುಣಿ ನದಿಯಲ್ಲಿ ಮಗುಚಿ ಬಿದ್ದ ದೋಣಿ: ಇಬ್ಬರು ಯುವಕರು ನೀರುಪಾಲು ಮೀನುಗಾರಿಕೆಗೆ ತೆರಳಿದ್ದಾಗ ಆಕಸ್ಮಿಕವಾಗಿ ದೋಣಿ ಮುಗುಚಿ ಇಬ್ಬರು ಯುವಕರು…
ನಮ್ಮದು ಪಕ್ಷಾತೀತ ಅಭಿವೃದ್ಧಿಪರ ಸರ್ಕಾರ.. ದಲಿತರಿಗೆ ಮೀಸಲಾತಿ ತಂದವರು ನಾವು .. ರಾಜ್ಯದಲ್ಲಿ ಬಿಜೆಪಿ ಸ್ವಂತ ಬಲದಿಂದ ಯಾವತ್ತೂ ಅಧಿಕಾರಕ್ಕೆ…
ಕಾಪು : 94/ಸಿಯಡಿ ಹಕ್ಕುಪತ್ರ ; ಉಚಿತ ಉಪಕರಣಗಳ ವಿತರಣೆ ಕಾಪು : ವಿಧಾನಸಭಾ ಕ್ಷೇತ್ರದ ಕಾಪು ತಾಲ್ಲೂಕು ವ್ಯಾಪ್ತಿಯ…
ರೈಲ್ವೆ ಇಲಾಖೆಯ 5 ಹೊಸ ನಿಯಮ ಜಾರಿ: ತತ್ಕಾಲ್ ಬುಕಿಂಗ್ಗೆ ಆಧಾರ್ ಕಡ್ಡಾಯ; ರೀಫಂಡ್ ನಿಯಮ ಹೇಗಿದೆ? ರೈಲ್ವೆ ಇಲಾಖೆಯ…
ಉಡುಪಿ: ಯುವ ಪತ್ರಕರ್ತ ಪ್ರಶಾಂತ ಪಾದೆಗೆ ‘ಮಂಡಿಬೆಲೆ ಶಾಮಣ್ಣ ಸ್ಮಾರಕ ಪ್ರಶಸ್ತಿ’ ಉಡುಪಿ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ(ಕೆಯುಡಬ್ಲೂಜೆ)ದ 2024ನೇ…