ಮೂಳೂರು ಸರ್ವೇಶ್ವರ ಟ್ರೋಫಿ-2025 – ಇಂದು ಸಂಜೆ 30 ಗಜಗಳ ಹೊನಲು ಬೆಳಕಿನ ಪಂದ್ಯಾಟ – vishwanews24
ಕಾಪು: ಮೂಳೂರಿನಲ್ಲಿ ಇಂದು ಸಂಜೆ ಸರ್ವೇಶ್ವರ ಟ್ರೋಫಿ-2025 ..
30 ಗಜಗಳ ಹೊನಲು ಬೆಳಕಿನ ಪಂದ್ಯಾಟ
ಕಾಪು:ಸರ್ವೇಶ್ವರ ಫ್ರೆಂಡ್ಸ್ ಮೂಳೂರು ಇವರ ಆಶ್ರಯದಲ್ಲಿ ದಶಮನೋತ್ಸವದ ಪ್ರಯುಕ್ತ 30 ಗಜಗಳ ಹೊನಲು ಬೆಳಕಿನ ಪಂದ್ಯಾಟ ಇಂದು ಸಂಜೆ (ಶನಿವಾರ) ಸರ್ವೇಶ್ವರ ಬೊಬ್ಬರ್ಯ ಕೊಡಮಣಿತ್ತಾಯ ದೈವಸ್ಥಾನದ ಹಿಂಬದಿಯ ಮೈದಾನದಲ್ಲಿ ನಡೆಯಲಿದೆ.
ವಿಜೇತ ತಂಡಗಳಿಗೆ ಪ್ರಥಮ ಬಹುಮಾನವಾಗಿ 33,333₹ ಹಾಗೂ ಶಾಶ್ವತ ಫಲಕ,ದ್ವಿತೀಯ ಬಹುಮಾನವಾಗಿ 22,222₹ ಹಾಗೂ ಶಾಶ್ವತ ಫಲಕ ಸಿಗಲಿದೆ.
ಮಾತ್ರವಲ್ಲದೆ ಪಂದ್ಯಶ್ರೇಷ್ಠ ಪ್ರಶಸ್ತಿ,ಸರಣಿ ಶ್ರೇಷ್ಠ ಪ್ರಶಸ್ತಿ, ಉತ್ತಮ ದಾಂಡಿಗ,ಉತ್ತಮ ಎಸೆತಗಾರ ಪ್ರಶಸ್ತಿ ನೀಡಿ ಗೌರವಿಸಲಾಗುವುದು.
ಕಾರ್ಯಕ್ರಮದ ಉದ್ಘಾಟನೆಯನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ,ಯಶ್ಪಾಲ್ ಸುವರ್ಣ,ಮನೋಹರ್ ಶೆಟ್ಟಿ, ಪ್ರಭಾಕರ ಪೂಜಾರಿ,ಮನೋಹರ್ ಅಡ್ಯಂತಾಯ,ನಾರಾಯಣ ಶೆಟ್ಟಿ ಗೀತಾಂಜಲಿ ಸೇರಿದಂತೆ ಮೊದಲಾದ ಗಣ್ಯರು ಉಪಸ್ಥಿತರಿರಲಿದ್ದಾರೆ.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಸಂಸ್ಥೆಯ ಅಧ್ಯಕ್ಷ ಉಮೇಶ್ ಎಲ್ ಪೂಜಾರಿ ವಹಿಸಲಿದ್ದಾರೆ.
ಕಾಪು : ನಾಪತ್ತೆಯಾಗಿದ್ದ ವ್ಯಕ್ತಿ ಮುಂಬಯಿಯಲ್ಲಿ ಪತ್ತೆ – vishwanews24
ಸಮರೋಪ ಕಾರ್ಯಕ್ರಮ ಆದಿತ್ಯವಾರ ನಡೆಯಲಿದೆ ಎಂದು ಪತ್ರಿಕಾ ಪ್ರಕಟನೆ ತಿಳಿಸಿದೆ.
