Featured

ಮೂಳೂರು ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ “ಪಿಲಿಏಸ-2026” ಕಾರ್ಯಕ್ರಮ -vishwanews24

ಮೂಳೂರು ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ “ಪಿಲಿಏಸ-2026” ಕಾರ್ಯಕ್ರಮ

ಉಚಿತ ಅಂಬ್ಯುಲೆನ್ಸ್ ಸೇವೆ ಗೆ ನಿಧಿ ಸಂಗ್ರಹ : ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನ ಮಹತ್ವಾಕಾಂಕ್ಷಿ ಯೋಜನೆ

ಕಾಪು: ಸಮಾಜ ಸೇವೆಯನ್ನು ಪ್ರಮುಖ ಧೈಯವಾಗಿಟ್ಟುಕೊಂಡು ಕಳೆದ ಹಲವು ವರ್ಷಗಳಿಂದ ಆರೋಗ್ಯ, ಶಿಕ್ಷಣ, ಧಾರ್ಮಿಕ, ಸಾಂಸ್ಕೃತಿಕ ಹಾಗೂ ಮಾನವೀಯ ಸೇವಾ ಕ್ಷೇತ್ರಗಳಲ್ಲಿ ಅನೇಕ ಜನೋಪಯೋಗಿ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ನಡೆಸಿಕೊಂಡು ಬರುತ್ತಿರುವ ಮೂಳೂರು ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ತುಳು ನಾಡಿನ ಹೆಮ್ಮೆಯ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುವ “ಪಿಲಿಏಸ -2026” ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ಆಯೋಜಿಸಲಾಗಿದೆ. ಇದರಿಂದ ಉಚಿತ ಅಂಬ್ಯುಲೆನ್ಸ್ ಸೇವೆ ಒದಗಿಸುವ ಮಹತ್ವಾಕಾಂಕ್ಷಿ ಹಾಕಿಕೊಂಡಿದ್ದಾಗಿ ಸರ್ವೇಶ್ವರ ಫ್ರೆಂಡ್ಸ್ ಚಾರಿಟೇಬಲ್ ಟ್ರಸ್ಟ್ ನ ಸದಸ್ಯ ವಿಶ್ವನಾಥ ಸನಿಲ್  ಕಾಪು ಪತ್ರಿಕಾ ಭವನದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಸಮಾಜದ ಪ್ರತಿಯೊಬ್ಬರ ಬದುಕಿನಲ್ಲಿ ಅಗತ್ಯದ ಸಂದರ್ಭದಲ್ಲಿ ನೆರವಾಗಬೇಕು ಎಂಬ ಮಹತ್ತರ ಆಶಯದೊಂದಿಗೆ ಟ್ರಸ್ಟ್ ತನ್ನ ಸೇವಾ ವ್ಯಾಪ್ತಿಯನ್ನು ಇನ್ನಷ್ಟು ವಿಸ್ತರಿಸುವ ಸಂಕಲ್ಪವನ್ನು ಹೊಂದಿದೆ. ಇತ್ತೀಚಿನ ದಿನಗಳಲ್ಲಿ ರಸ್ತೆ ಅಪಘಾತಗಳು, ಹೃದಯಾಘಾತ, ತುರ್ತು ವೈದ್ಯಕೀಯ ಪರಿಸ್ಥಿತಿಗಳು ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ಸಕಾಲಕ್ಕೆ ಅಂಬ್ಯುಲೆನ್ಸ್ ಸೌಲಭ್ಯ ದೊರೆಯದ ಕಾರಣ ಅಮೂಲ್ಯ ಜೀವಗಳು ಕಳೆದು ಹೋಗುತ್ತಿರುವುದು ನೋವಿನ ಸಂಗತಿಯಾಗಿದೆ.

ಈ ಹಿನ್ನೆಲೆ ಮೂಳೂರು ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾರ್ವಜನಿಕರಿಗೆ ಯಾವುದೇ ಜಾತಿ, ಧರ್ಮ ಅಥವಾ ವರ್ಗಭೇದವಿಲ್ಲದೆ ಉಚಿತ ಅಂಬ್ಯುಲೆನ್ಸ್ ಸೇವೆ ಒದಗಿಸುವ ಮಹತ್ವಾಕಾಂಕ್ಷಿ ಯೋಜನೆಯನ್ನು ನಮ್ಮ ಟ್ರಸ್ಟ್ ಕೈಗೆತ್ತಿಕೊಂಡಿದೆ.

ಈ ಕನಸಿನ ಯೋಜನೆಗೆ ಅಗತ್ಯವಿರುವ ನಿಧಿಯನ್ನು ಸಂಗ್ರಹಿಸುವ ಸಲುವಾಗಿ ತುಳುನಾಡಿನ ಹೆಮ್ಮೆಯ ಸಾಂಸ್ಕೃತಿಕ ಪರಂಪರೆಯನ್ನು ಪ್ರತಿಬಿಂಬಿಸುವ “ಪಿಲಿಏಸ-2026” ಕಾರ್ಯಕ್ರಮವನ್ನು ಅತ್ಯಂತ ವಿಜೃಂಭಣೆಯಿಂದ ಆಯೋಜಿಸಲಾಗಿದೆ.

ಈ ಕಾರ್ಯಕ್ರಮವು ಕೇವಲ ಸಾಂಸ್ಕೃತಿಕ ಉತ್ಸವವಲ್ಲ. ಸಮಾಜದ ಒಳಿತಿಗಾಗಿ ಪ್ರತಿಯೊಬ್ಬರನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಾನವೀಯ ಸೇವೆಯ ಮಹಾಯಜ್ಞವಾಗಿದೆ.

2026 ಸೆಪ್ಟೆಂಬರ್ 16ರಂದು ಸಂಜೆ ಸಂಪ್ರದಾಯಬದ್ಧ ಊದು ಪೂಜೆಯೊಂದಿಗೆ ಕಾರ್ಯಕ್ರಮಕ್ಕೆ ವಿದ್ಯುಕ್ತ ಚಾಲನೆ ದೊರೆಯಲಿದ್ದು, ಮೂಳೂರು ಸಾಯಿರಾಧ ಬೀಚ್ ರೆಸಾರ್ಟ್ ಪಾರ್ಕಿಂಗ್ ಮೈದಾನದಲ್ಲಿ ಈ ಬೃಹತ್ ಕಾರ್ಯಕ್ರಮ ನಡೆಯಲಿದೆ.

ಸಾವಿರಾರು ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಈ ಕಾರ್ಯಕ್ರಮದಿಂದ ಸಂಗ್ರಹವಾಗುವ ಸಂಪೂರ್ಣ ನಿಧಿಯನ್ನು ಅಂಬ್ಯುಲೆನ್ಸ್ ವಾಹನ ಖರೀದಿ, ವೈದ್ಯಕೀಯ ಉಪಕರಣಗಳ ಅಳವಡಿಕೆ, ವಾಹನದ ನಿರ್ವಹಣೆ ಹಾಗೂ ಸಾರ್ವಜನಿಕರಿಗೆ ಉಚಿತ ತುರ್ತು ಸೇವೆ ಒದಗಿಸಲು ಬಳಸಲಾಗುತ್ತದೆ. ನಮ್ಮ ಉದ್ದೇಶ ಕೇವಲ ವಾಹನ ಖರೀದಿಸುವುದಲ್ಲ. ತುರ್ತು ಸಂದರ್ಭದಲ್ಲಿ ಜೀವ ಉಳಿಸುವ ವಿಶ್ವಾಸಾರ್ಹ ಸೇವಾ ವ್ಯವಸ್ಥೆಯನ್ನು ನಿರ್ಮಿಸುವುದಾಗಿದೆ.

ಪತ್ರಿಕಾ ಭವನದಲ್ಲಿ “ಪಿಲಿಏಸ-2026” ಕಾರ್ಯಕ್ರಮದ ಅಧಿಕೃತ ಪೋಸ್ಟರ್ ಬಿಡುಗಡೆ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಇದರ ಮೂಲಕ ಕಾರ್ಯಕ್ರಮದ ಉದ್ದೇಶ, ಸಮಾಜಮುಖಿ ಸೇವೆಯ ಆಶಯ ಹಾಗೂ ಸಾರ್ವಜನಿಕರ ಸಹಭಾಗಿತ್ವದ ಮಹತ್ವವನ್ನು ಪರಿಚಯಿಸುತ್ತಿದ್ದೇವೆ. ಈ ಕಾರ್ಯಕ್ರಮದ ಯಶಸ್ಸು ಕೇವಲ ಟ್ರಸ್ಟ್‌ದ್ದಲ್ಲ, ಇಡೀ ಸಮಾಜದ ಯಶಸ್ಸಾಗಲಿದೆ ಎಂಬ ನಂಬಿಕೆ ನಮ್ಮದು.

ಈ ಸಮಾಜಮುಖಿ ಕಾರ್ಯದಲ್ಲಿ ಕೈಜೋಡಿಸಲು ದಾನಿಗಳು, ಉದ್ಯಮಿಗಳು, ಸಂಘ-ಸಂಸ್ಥೆಗಳು,ಯುವಜನರು, ಮಹಿಳಾ ಸಂಘಗಳು, ಗ್ರಾಮಸ್ಥರು ಹಾಗೂ ಎಲ್ಲಾ ಸಮಾಜಬಂಧುಗಳನ್ನು ಆತ್ಮೀಯವಾಗಿ ಆಹ್ವಾನಿಸುತ್ತೇವೆ. ತಮ್ಮಿಂದಾಗುವ ಆರ್ಥಿಕ ಸಹಾಯ, ಪ್ರೋತ್ಸಾಹ, ಸ್ವಯಂಸೇವಕ ಸೇವೆ ಮತ್ತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಮೂಲಕ ಈ ಮಹತ್ಕಾರ್ಯದಲ್ಲಿ ಭಾಗಿಯಾಗುವಂತೆ ವಿನಂತಿಸಲಾಗಿದೆ.

ಪತ್ರಿಕಾಗೋಷ್ಠಿಯಲ್ಲಿ ಮನೋಹರ ಅಡ್ಯಂತಾಯ, ವಿಶ್ವನಾಥ ಸನಿಲ್, ನವೀನ್ ಸಾಲ್ಯಾನ್, ಕಿರಣ್ ಪೂಜಾರಿ ಮತ್ತು ಪುರುಷೋತ್ತಮ ಸಾಲ್ಯಾನ್ ಮೂಳೂರು ಉಪಸ್ಥಿತರಿದ್ದರು.

Vishwa News 24

Recent Posts

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ -vishwanews24

ಬೆಂಗಳೂರು : ಸ್ವಾಮೀಜಿ ವೇಷದಲ್ಲಿ ಬಂದು ಕೈಚಳಕ; ಮನೆಯಲ್ಲಿ ದೋಷ, ಸಾವಿನ ಕಂಟಕ ಎಂದು ಹೆದರಿಸಿ ಚಿನ್ನಾಭರಣ ದೋಚಿ ಪರಾರಿ…

5 minutes ago

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಅತ್ಯಾಚಾರ ಪ್ರಕರಣ ; ಆರೋಪಿ ಅರೆಸ್ಟ್ -vishwanews24

ಬೆಳ್ತಂಗಡಿ: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ ; ಆರೋಪಿ ಅರೆಸ್ಟ್ ಬೆಳ್ತಂಗಡಿ : ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಬಾಲಕಿ…

1 hour ago

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ -vishwanews24

ಮಂತ್ರಾಲಯ ಬಳಿ ಅಪಘಾತ: ಮಂಗಳೂರಿನ ಹಾಪ್‌ಕಾಮ್ಸ್ ನ ಪ್ರಧಾನ ವ್ಯವಸ್ಥಾಪಕ ರವಿ ಶೆಟ್ಟಿ ನಿಧನ ಕರ್ನೂಲು: ಕರ್ನೂಲು ಜಿಲ್ಲೆಯ ಮಂತ್ರಾಲಯದ…

1 hour ago

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ -Vishwanews24

ಉಡುಪಿ ಬಡಗುಬೆಟ್ಟು ಕಂಬಳಕ್ಕೆ ತಡೆ: ಆದೇಶ ತಕ್ಷಣ ಹಿಂಪಡೆಯಲು ಶಾಸಕ ಗುರ್ಮೆ ಆಗ್ರಹ ಉಡುಪಿ: ಉಡುಪಿ ಬಡಗುಬೆಟ್ಟು ಕೋಟಿ–ಚೆನ್ನಯ ಕಂಬಳಕ್ಕೆ…

2 hours ago

ಉಡುಪಿ : ವ್ಯಕ್ತಿ ನಾಪತ್ತೆ -vishwanews24

ಉಡುಪಿ : ವ್ಯಕ್ತಿ ನಾಪತ್ತೆ ಉಡುಪಿ : ಹೆಬ್ರಿ ಪೊಲೀಸ್ ಠಾಣಾ ವ್ಯಾಪ್ತಿಯ ನಿವಾಸಿ ವಿಶ್ವನಾಥ ಶೆಟ್ಟಿ (38) ಎಂಬ…

19 hours ago

ಬೈಂದೂರು: ಅಲೆಗಳ ಹೊಡೆತಕ್ಕೆ ಮಗುಚಿ ಬಿದ್ದ ಮೀನುಗಾರಿಕಾ ದೋಣಿ ; ಐವರು ಮೀನುಗಾರರು ಪಾರು -vishwanews24

ಬೈಂದೂರು: ಅಲೆಗಳ ಹೊಡೆತಕ್ಕೆ ಮಗುಚಿ ಬಿದ್ದ ಮೀನುಗಾರಿಕಾ ದೋಣಿ ; ಐವರು ಮೀನುಗಾರರು ಪಾರು ಬೈಂದೂರು : ಪ್ರಬಲ ಅಲೆಗಳ…

22 hours ago