Featured

ಮೂವರು ಆಟಗಾರರ ಹತ್ಯೆ : ಪಾಕ್ ವಿರುದ್ಧದ ಸರಣಿ ಬಹಿಷ್ಕರಿಸಿದ ಅಫ್ಘಾನಿಸ್ತಾನ್ – vishwanews24

ಮೂವರು ಆಟಗಾರರ ಹತ್ಯೆ : ಪಾಕ್ ವಿರುದ್ಧದ ಸರಣಿ ಬಹಿಷ್ಕರಿಸಿದ ಅಫ್ಘಾನಿಸ್ತಾನ್

ಅಫ್ಘಾನಿಸ್ತಾನ್ ಮೇಲಿನ ವೈಮಾನಿಕ ದಾಳಿ ಬೆನ್ನಲ್ಲೇ ಪಾಕಿಸ್ತಾನ್ ವಿರುದ್ಧದ ಸರಣಿಯಿಂದ ಅಫ್ಘಾನ್ ತಂಡ ಹಿಂದೆ ಸರಿದಿದೆ. ನವೆಂಬರ್ 17 ರಿಂದ ಶುರುವಾಗಲಿರುವ ಈ ತ್ರಿಕೋನ ಸರಣಿಯಲ್ಲಿ ಪಾಕಿಸ್ತಾನ್, ಅಫ್ಘಾನಿಸ್ತಾನ್ ಹಾಗೂ ಶ್ರೀಲಂಕಾ ತಂಡಗಳು ಕಣಕ್ಕಿಳಿಯಬೇಕಿತ್ತು. ಆದರೀಗ ಪಾಕ್ ವಿರುದ್ಧದ ಸರಣಿಯನ್ನು ಬಹಿಷ್ಕರಿಸಲು ಅಫ್ಘಾನಿಸ್ತಾನ್ ಕ್ರಿಕೆಟ್ ಬೋರ್ಡ್ ನಿರ್ಧರಿಸಿದೆ.

ಪಾಕಿಸ್ತಾನ್ ಸೇನೆಯು ಪಕ್ತಿಕಾ ಪ್ರಾಂತ್ಯದ ಗಡಿಯಲ್ಲಿ ನಡೆಸಿದ ವೈಮಾನಿಕ ದಾಳಿಯಲ್ಲಿ ಅಫ್ಘಾನಿಸ್ತಾನದ ಮೂವರು ಸ್ಥಳೀಯ ಕ್ರಿಕೆಟಿಗರು ಮೃತಪಟ್ಟಿದ್ದರು. ಈ ದಾಳಿ ಬೆನ್ನಲ್ಲೇ ಇನ್ಮುಂದೆ ಪಾಕ್ ವಿರುದ್ಧದ ಸರಣಿ ಆಡುವುದಿಲ್ಲ ಎಂದು ಅಘ್ಘಾನಿಸ್ತಾನ್ ಕ್ರಿಕೆಟ್ ಬೋರ್ಡ್ ತಿಳಿಸಿದೆ.

ಶುಕ್ರವಾರ ಸೌಹಾರ್ದ ಪಂದ್ಯದಲ್ಲಿ ಭಾಗವಹಿಸಲು ಅಫ್ಘಾನಿಸ್ತಾನದ ಸ್ಥಳೀಯ ಆಟಗಾರರು ಪಾಕಿಸ್ತಾನ ಗಡಿಯಲ್ಲಿರುವ ಪೂರ್ವ ಪಕ್ತಿಕಾ ಪ್ರಾಂತ್ಯದ ಉರ್ಗುನ್‌ನಿಂದ ಶರಾನಾಗೆ ಪ್ರಯಾಣಿಸಿದ್ದರು. ಈ ವೇಳೆ ಪಾಕ್ ಏರ್​ಫೋರ್ಸ್​ ದಾಳಿ ನಡೆಸಿದ್ದು, ಇದರಿಂದ ಮೂವರು ಕ್ರಿಕೆಟಿಗರು ಸಾವನ್ನಪ್ಪಿದ್ದು, ಇನ್ನು ಕೆಲವರು ಗಾಯಗೊಂಡಿದ್ದಾರೆ.

ಪಾಕ್ ದಾಳಿಯಿಂದಾಗಿ ದೇಶೀಯ ಕ್ರಿಕೆಟ್​ನಲ್ಲಿ ಗುರುತಿಸಿಕೊಂಡಿದ್ದ ಕಬೀರ್, ಸಿಬ್ಘತುಲ್ಲಾ ಮತ್ತು ಹರೂನ್ ಮೃತಪಟ್ಟಿದ್ದಾರೆ. ಈ ದಾಳಿ ಬೆನ್ನಲ್ಲೇ ಅಫ್ಘಾನಿಸ್ತಾನ್ ಕ್ರಿಕೆಟ್ ಬೋರ್ಡ್ ದೃಢ ನಿರ್ಧಾರ ತೆಗೆದುಕೊಂಡಿದ್ದು, ಮುಂಬರುವ ಸರಣಿಯಲ್ಲಿ ಪಾಕ್ ಅಫ್ಘಾನ್ ಕಣಕ್ಕಿಳಿಯುವುದಿಲ್ಲ ಎಂದು ತಿಳಿಸಿದೆ.

Vishwa News 24

Recent Posts

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ – vishwanews24

ಉಡುಪಿ: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಜೆಸಿಟಿಯು ನೇತೃತ್ವದಲ್ಲಿ ಜೈಲ್ ಭರೋ ಪ್ರತಿಭಟನೆ; ಕಾರ್ಯಕರ್ತರು ಪೊಲೀಸ್ ವಶಕ್ಕೆ ಉಡುಪಿ: ಕೇಂದ್ರ…

12 hours ago

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ – vishwanews24

ಕಾಪು: ಎಲ್ಲೂರಿನಲ್ಲಿ ಮನೆಯ ಮೇಲ್ಛಾವಣಿ ಕುಸಿತ; ಮಹಿಳೆ ಪವಾಡಸದೃಶ ಪಾರು, ಲಕ್ಷಾಂತರ ರೂ. ನಷ್ಟ ಕಾಪು,: ಎಲ್ಲೂರಿನ ರೇವತಿ ಕುಂದರ್…

13 hours ago

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ – vishwanews24

ಮದರಂಗಡಿ : ಡೇವಿಡ್ ಡಿಸೋಜಾ ಹತ್ಯೆ ಪ್ರಕರಣ ; ಇಬ್ಬರು ಆರೋಪಿಗಳು 10 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಉಡುಪಿ:ಮುದರಂಗಡಿ…

13 hours ago

ಟೈಮಿಂಗ್‌ ವಿವಾದ: ಕಾಪು ಸರ್ವಿಸ್ ರಸ್ತೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ – vishwanews24

ಟೈಮಿಂಗ್‌ ವಿವಾದ: ಕಾಪು ಪೇಟೆಯಲ್ಲಿ ಮತ್ತೆ ಖಾಸಗಿ ಎಕ್ಸ್‌ಪ್ರೆಸ್ ಬಸ್‌ ಚಾಲಕರ ವಾಗ್ವಾದ ; ಸ್ಥಳೀಯರಲ್ಲಿ ಆತಂಕ ಕಾಪು: ರಾಷ್ಟ್ರೀಯ…

15 hours ago

ಉಡುಪಿ: ‘ಭಗವತಿ ಟೂರಿಸ್ಟ್’ ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ – vishwanews24

ಉಡುಪಿ: 'ಭಗವತಿ ಟೂರಿಸ್ಟ್' ಟ್ರಾವೆಲ್ ಬುಕ್ಕಿಂಗ್ ಸಂಸ್ಥೆಯ ಮಾಲೀಕ ವಿನಯ್ ರಾಜ್ ವಿಧಿವಶ ಉಡುಪಿ: ನಗರದ ಸರ್ವಿಸ್ ಬಸ್ ನಿಲ್ದಾಣದ…

15 hours ago

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ – vishwanews24

ಉಳ್ಳಾಲ: ತಲವಾರು ಹಿಡಿದು ದಾಂಧಲೆ ನಡೆಸಿದ ರೌಡಿ ಶೀಟರ್ ಸಹಿತ ಇಬ್ಬರ ಬಂಧನ ಮಂಗಳೂರು: ಇಲ್ಲಿನ ಬಾರ್ ಒಂದರಲ್ಲಿ ತಲವಾರು…

15 hours ago