ಬೆಂಗಳೂರು: ‘ಕಾಂಗ್ರೆಸ್ ಪಕ್ಷದ ಕುರಿತು ಆಧಾರರಹಿತ ಆರೋಪ ಮಾಡುತ್ತಾ ಬಾಯಿಗೆ ಬಂದಂತೆ ಮಾತನಾಡುವ ಮೆಂಟಲ್ ಗಿರಾಕಿಗಳ ಹೇಳಿಕೆ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರು ಕಾಂಗ್ರೆಸ್ ಪಕ್ಷ ಹಿನಾಯ ಪರಿಸ್ಥಿತಿಯಲ್ಲಿದ್ದು, ಬಿಜೆಪಿ ಸಚಿವರಿಗೆ ಸಿ.ಡಿ. ತೋರಿಸಿ ಪಕ್ಷಕ್ಕೆ ಕರೆದುಕೊಳ್ಳುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ನೀಡಿರುವ ಹೇಳಿಕೆ ಕುರಿತು ಮಾಧ್ಯಮಗಳು ಸದಾಶಿವನಗರ ನಿವಾಸದ ಬಳಿ ಸೋಮವಾರ ಕೇಳಿದ ಪ್ರಶ್ನೆಗೆ ಅವರು ಉತ್ತರಿಸಿದರು.
ಬಿಜೆಪಿ ಪಕ್ಷದಲ್ಲಿ ಆಂತರಿಕವಾಗಿ ಏನೇನಾಗುತ್ತಿದೆಯೋ ಅದನ್ನು ಮೊದಲು ನೋಡಿಕೊಳ್ಳಲಿ. ನಿಮ್ಹಾನ್ಸ್ ಸೇರಬೇಕಾದ ಗಿರಾಕಿಗಳು ಹೇಳಿದ್ದಕ್ಕೆಲ್ಲ ನಾನು ಪ್ರತಿಕ್ರಿಯಿಸುವುದಿಲ್ಲ. ಅವರನ್ನು ಆಸ್ಪತ್ರೆಗೆ ಸೇರಿಸುವುದು ಉತ್ತಮ’ ಎಂದು ತಿರುಗೇಟು ನೀಡಿದರು.
ಡಿ.ಕೆ. ಶಿವಕುಮಾರ್ ಅವರ ಕೈಗೆ ರಾಜ್ಯ ಸಿಕ್ಕರೆ ಡಿ.ಕೆ. ಶಿವಕುಮಾರ್ ಟೋಲ್ ಎಂಬ ಮತ್ತೊಂದು ಟೋಲ್ ಹಾಕುತ್ತಾರೆ ಎಂಬ ರಮೇಶ್ ಜಾರಕಿಹೊಳಿ ಅವರ ಆರೋಪದ ಬಗ್ಗೆ ಪ್ರಶ್ನಿಸಿದಾಗ, ‘ಟೋಲ್ ವಿಚಾರವಾಗಿ ಮಾತನಾಡುವುದೇ ಆದರೆ, ಸದ್ಯಕ್ಕೆ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿಯ ಟೋಲ್ ವಿಚಾರವಾಗಿ ಮಾತನಾಡೋಣ. ಮಿಕ್ಕ ವಿಚಾರವನ್ನು ನಂತರ ಮಾತನಾಡೋಣ’ ಎಂದರು.
ಉಪ್ಪೂರು : ವಯೋವಂದನ ಆತಿಥ್ಯ ಗೃಹ "ಸೈಟ್ ಆಫೀಸ್" ಉದ್ಘಾಟನೆ ; ರಾಷ್ಟ್ರಧ್ವಜಾರೋಹಣ, ವೃಕ್ಷಾರೋಪಣ ಕಾರ್ಯಕ್ರಮ ಉಡುಪಿ ಜಿಲ್ಲೆ ಬ್ರಹ್ಮಾವರ…
ಪುತ್ತೂರು: ಕೆಎಸ್ಆರ್ಟಿಸಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸವಾರ ಸ್ಥಳದಲ್ಲೇ ಮೃತ್ಯು ಪುತ್ತೂರು: ಕೆಯ್ಯರು ಗ್ರಾಮದ ಬೊಳಿಕ್ಕಳ…
ಸೆ.30ರೊಳಗೆ ಎಲ್ಲ ಪಡಿತರ ಚೀಟಿದಾರರು e-KYC ಮಾಡಿಸುವುದು ಕಡ್ಡಾಯ : ಸಚಿವ ರಿಜ್ವಾನ್ ಅರ್ಷದ್ ಬೆಂಗಳೂರು : ಕೇಂದ್ರ ಸರಕಾರದ…
ಬೆಂಗಳೂರು: ಕೌಟುಂಬಿಕ ಕಲಹ ; ಹೆಂಡತಿ ಕೊಂದು ಗಂಡ ಆತ್ಮಹತ್ಯೆ ಬೆಂಗಳೂರು: ನಗರದ ರಾಜೇಶ್ವರಿ ನಗರದಲ್ಲಿ ಹೆಂಡತಿಯನ್ನು ಕೊಂದು ಗಂಡ…
ಸ್ವಕ್ಷೇತ್ರದಲ್ಲಿ 80ನೇ ಸ್ವಾತಂತ್ರ್ಯೋತ್ಸವ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಜಮೀರ್ ಅಹ್ಮದ್ ಭಾಗಿ ನಾನು ಹಿಂದೂಸ್ತಾನಿ, ನಾನು ಕನ್ನಡಿಗ, ದೇಶದ ಅಭಿಮಾನವನ್ನ ಬಿಜೆಪಿಯವರಿಂದ…
ಗುಟ್ಕಾ, ಪಾನ್ ಮಸಾಲ ನಿಷೇಧ ಆದೇಶ ನಾವು ವಾಪಸ್ ಪಡೆದಿಲ್ಲ: ಯು.ಟಿ.ಖಾದರ್ ಸ್ಪಷ್ಟನೆ ಅಡಿಕೆ ಬೆಲೆ ಕುಸಿಯಲ್ಲ, ಬೆಳೆಗಾರರಿಗೆ ಸಮಸ್ಯೆ…