ಮಂಗಳೂರು: ಮೆಕುನು ಚಂಡಮಾರುತ ಪರಿಣಾಮದಿಂದಾಗಿ ಕರಾವಳಿಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಮಂಗಳೂರಿನಲ್ಲಿ ನೆರೆಯ ಭೀತಿ ಆವರಿಸಿದೆ.
ಮಂಗಳೂರು ನಗರದ ಹಲವೆಡೆ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು, ರಸ್ತೆಯಿಡೀ ನೀರಿನಿಂದ ಆವೃತವಾಗಿದೆ. ತಗ್ಗು ಪ್ರದೇಶದ ಅಂಗಡಿ, ವ್ಯಾಪಾರ ಕೇಂದ್ರಗಳಿಗೆ ನೀರು ನುಗ್ಗಿದೆ. ಹಲವು ಮನೆಗಳಿಗೂ ನೀರು ನುಗ್ಗಿದ್ದು, ಜನ ಆರಂಭಿಕ ಮಳೆಯಲ್ಲೇ ಪರದಾಟ ಆರಂಭಿಸಿದ್ದಾರೆ.
ಕೊಟ್ಟಾರ, ಅತ್ತಾವರದಲ್ಲಿ ನೆರೆ ನೀರು ಆವರಿಸಿ ಜನರು ಆತಂಕ ಎದುರಿಸುತ್ತಿದ್ದಾರೆ. ಇದರಿಂದಾಗಿ ನಗರದಾದ್ಯಂತ ಟ್ರಾಫಿಕ್ ಜಾಮ್ ಆಗಿದ್ದು, ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಮಳೆ ಒಂದೇ ಸಮನೆ ಸುರಿಯುತ್ತಿದ್ದು, ಮಳೆ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಮುಂಜಾಗ್ರತೆ ವಹಿಸದ ಕಾರಣ ಜನ ಕಷ್ಟ ಎದುರಿಸುವಂತಾಗಿದೆ.
ಕೇರಳ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮುಂಗಾರು ಇನ್ನಷ್ಟು ಚುರುಕುಗೊಂಡಿದ್ದು, ಮುಂದಿನ ಎರಡು ದಿನಗಳಲ್ಲಿ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಭಾಗದಲ್ಲಿ ಭಾರೀ ಮಳೆಯಾಗುವ ಸಂಭವಿದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ವಿಜ್ಞಾನಿ ಗವಾಸ್ಕರ್ ಮಾಹಿತಿ ತಿಳಿಸಿದ್ದಾರೆ
ಮಲ್ಪೆ : ಸೈಂಟ್ಮೇರೀಸ್ ದ್ವೀಪ ಪ್ರವೇಶ ಹಾಗೂ ಜಲ ಕ್ರೀಡೆಗಳಿಗೆ ಮೇ 16ರಿಂದ ಸೆಪ್ಟೆಂಬರ್15ರ ವರೆಗೆ ಸಂಪೂರ್ಣ ನಿಷೇಧ ಮಲ್ಪೆ:…
ಜೂನ್ 21ರಂದು ನೀಟ್ ಯುಜಿ ಮರು ಪರೀಕ್ಷೆ ನವದೆಹಲಿ: ಜೂನ್ 21 ರಂದು ನೀಟ್–ಯುಜಿ ಮರು ಪರೀಕ್ಷೆ ನಡೆಸಲಾಗುವುದು ರಾಷ್ಟ್ರೀಯ…
ಉಡುಪಿ ಜಿಲ್ಲೆಯ ನಿರ್ಲಕ್ಷ್ಯ : ಮೇ 16ರಂದು ಜಿಲ್ಲಾ ಉಸ್ತುವಾರಿ ಸಚಿವರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟನೆ : ಪೃಥ್ವಿರಾಜ್…
ಸಾಂಪ್ರದಾಯಿಕ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು, ಹೊಸದಾಗಿ ಮಾಡುವಂತಿಲ್ಲ : ಸಿಎಂ ಸ್ಪಷ್ಟನೆ ಮೈಸೂರು : "ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ…
ಮದ್ಯ ಖರೀದಿ, ಮಾರಾಟ ಮಾಡಲು 21 ವರ್ಷ ಕಡ್ಡಾಯ : ಸಿಎಂ ವಿಜಯ್ ಸರ್ಕಾರ ಆದೇಶ ಚೆನ್ನೈ: ಇನ್ನು ಮುಂದೆ…
ಇಂದಿರಾ ಗಾಂಧಿ ನಂತರ ಯಾರಾದ್ರೂ ಮಾಸ್ ಲೀಡರ್ ಇದ್ರೆ, ಅದು ಮೋದಿ ಮಾತ್ರ: ಕೆ.ಎನ್ ರಾಜಣ್ಣ ನಾನು ಮೋದಿಯವರನ್ನು ಹೊಗಳುತ್ತಿಲ್ಲ.…