ಉಡುಪಿ

ಮೆಕುನು ಚಂಡಮಾರುತಕ್ಕೆ ಕರಾವಳಿ ತತ್ತರ – ನದಿಯಂತಾದ ರಸ್ತೆ, ಎರಡು ದಿನ ಮಳೆ

ಮಂಗಳೂರು: ಮೆಕುನು ಚಂಡಮಾರುತ ಪರಿಣಾಮದಿಂದಾಗಿ ಕರಾವಳಿಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು ಮಂಗಳೂರಿನಲ್ಲಿ ನೆರೆಯ ಭೀತಿ ಆವರಿಸಿದೆ.

ಮಂಗಳೂರು ನಗರದ ಹಲವೆಡೆ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು, ರಸ್ತೆಯಿಡೀ ನೀರಿನಿಂದ ಆವೃತವಾಗಿದೆ. ತಗ್ಗು ಪ್ರದೇಶದ ಅಂಗಡಿ, ವ್ಯಾಪಾರ ಕೇಂದ್ರಗಳಿಗೆ ನೀರು ನುಗ್ಗಿದೆ. ಹಲವು ಮನೆಗಳಿಗೂ ನೀರು ನುಗ್ಗಿದ್ದು, ಜನ ಆರಂಭಿಕ ಮಳೆಯಲ್ಲೇ ಪರದಾಟ ಆರಂಭಿಸಿದ್ದಾರೆ.

ಕೊಟ್ಟಾರ, ಅತ್ತಾವರದಲ್ಲಿ ನೆರೆ ನೀರು ಆವರಿಸಿ ಜನರು ಆತಂಕ ಎದುರಿಸುತ್ತಿದ್ದಾರೆ. ಇದರಿಂದಾಗಿ ನಗರದಾದ್ಯಂತ ಟ್ರಾಫಿಕ್ ಜಾಮ್ ಆಗಿದ್ದು, ವಾಹನ ಸಂಚಾರಕ್ಕೆ ಅಡಚಣೆಯಾಗಿದೆ. ಮಳೆ ಒಂದೇ ಸಮನೆ ಸುರಿಯುತ್ತಿದ್ದು, ಮಳೆ ಹಿನ್ನೆಲೆಯಲ್ಲಿ ಮಹಾನಗರ ಪಾಲಿಕೆ ಮುಂಜಾಗ್ರತೆ ವಹಿಸದ ಕಾರಣ ಜನ ಕಷ್ಟ ಎದುರಿಸುವಂತಾಗಿದೆ.

ಇನ್ನು ದೇಶಕ್ಕೆ ನೈರುತ್ಯ ಮುಂಗಾರು ಮಳೆ ಆಗಮನವಾಗಿದ್ದು, ಇನ್ನು 3 ದಿನ ಮೊದಲೇ ಕೇರಳದ ಭಾಗಕ್ಕೆ ಮುಂಗಾರು ಮಳೆ ಎಂಟ್ರಿ ಕೊಟ್ಟಿದೆ. ಆದ್ದರಿಂದ ಇನ್ನೂ ಎರಡು ದಿನಗಳಲ್ಲಿ ರಾಜ್ಯಕ್ಕೆ ಮುಂಗಾರು ಆಗಮನವಾಗುವ ಸಾಧ್ಯತೆ ಇದೆ.

ಕೇರಳ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತ ಹಿನ್ನೆಲೆಯಲ್ಲಿ ಮುಂಗಾರು ಇನ್ನಷ್ಟು ಚುರುಕುಗೊಂಡಿದ್ದು, ಮುಂದಿನ ಎರಡು ದಿನಗಳಲ್ಲಿ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ಭಾಗದಲ್ಲಿ ಭಾರೀ ಮಳೆಯಾಗುವ ಸಂಭವಿದೆ ಎಂದು ರಾಜ್ಯ ನೈಸರ್ಗಿಕ ಪ್ರಕೃತಿ ವಿಕೋಪ ಇಲಾಖೆ ವಿಜ್ಞಾನಿ ಗವಾಸ್ಕರ್ ಮಾಹಿತಿ ತಿಳಿಸಿದ್ದಾರೆ

Vishwa News 24

Recent Posts

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ; ನಾಲ್ವರ ಬಂಧನ -vishwanews24

ಕಾಪು : ಟೈಮಿಂಗ್ಸ್ ವಿಚಾರದಲ್ಲಿ  ಉದ್ದೇಶಪೂರ್ವಕ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ - ನಾಲ್ವರ ಬಂಧನ ಕಾಪು : ಕಾಪು…

16 hours ago

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! vishwanews24

ಯುವಜನರಲ್ಲಿ ಹೆಚ್ಚುತ್ತಿರುವ HIV ಸೋಂಕು: ರಾಜ್ಯದ ಕಾಲೇಜು ವಿದ್ಯಾರ್ಥಿಗಳಿಗೆ ತಪಾಸಣೆ ಕಡ್ಡಾಯ ..! ಬೆಂಗಳೂರು: ಯುವ ಜನರಲ್ಲಿ ಹೆಚ್‌ಐವಿ ಸೋಂಕಿನ…

19 hours ago

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ – vishwanews24

ಸಚಿವ ಯು.ಟಿ. ಖಾದರ್ ಗೆ AMEC ಗ್ಲೋಬಲ್ ಸಿಟಿಝನ್ ಲೀಡರ್ಶಿಪ್ ಪ್ರಶಸ್ತಿ ಪ್ರದಾನ ಬೆಂಗಳೂರು: ಆರೋಗ್ಯ ಮತ್ತು ಕುಟುಂಬ ಕಲ್ಯಾಣ…

19 hours ago

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ : ಯಶ್ಪಾಲ್ ಸುವರ್ಣ – vishwanews24

ಸಿ. ಟಿ. ರವಿ ಯವರಿಗೆ ನೋಟೀಸ್ ನೀಡುವ ಮೂಲಕ ಹಿಂದುತ್ವವಾದಿ ನಾಯಕರ ದನಿ ಹತ್ತಿಕ್ಕಲು ಮುಂದಾದ ಕಾಂಗ್ರೆಸ್ ಸರಕಾರ :…

19 hours ago

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು – vishwanews24

ಮಂಗಳೂರು: ಡಿವೈಡರ್‌ಗೆ ಬಸ್  ಡಿಕ್ಕಿ; 35 ಪ್ರಯಾಣಿಕರು ಅಪಾಯದಿಂದ ಪಾರು ಮಂಗಳೂರು : ಖಾಸಗಿ ಎಕ್ಸ್‌ಪ್ರೆಸ್ ಬಸ್ಸೊಂದು ಮಂಗಳೂರು-ಮೂಡುಬಿದಿರೆ ರಾಷ್ಟ್ರೀಯ…

19 hours ago

ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ – vishwanews24

 ಕಾಪು  : ಟೈಮಿಂಗ್ಸ್ ವಿಚಾರದಲ್ಲಿ ಜಗಳ: ಎಕ್ಸ್‌ಪ್ರೆಸ್ ಬಸ್ ನಿಲ್ದಾಣದಲ್ಲಿ ಬಸ್‌ಗಳ ಗುದ್ದಾಟ ಕಾಪು: ಎರಡು ಎಕ್ಸ್‌ಪ್ರೆಸ್ ಬಸ್ಸುಗಳು ಪ್ರಯಾಣಿಕರು…

20 hours ago